'ಎಲ್ಲರೂ ಸಮಸ್ಯೆಗೆ ಪರಿಹಾರ ಹುಡುಕುತ್ತಾರೆ, ಪ್ರತಾಪ್‌ಸಿಂಹ ಸಮಸ್ಯೆ ಸೃಷ್ಟಿ ಮಾಡ್ತಾರೆ'

Published : Feb 13, 2022, 11:05 PM IST
'ಎಲ್ಲರೂ ಸಮಸ್ಯೆಗೆ ಪರಿಹಾರ ಹುಡುಕುತ್ತಾರೆ, ಪ್ರತಾಪ್‌ಸಿಂಹ ಸಮಸ್ಯೆ ಸೃಷ್ಟಿ ಮಾಡ್ತಾರೆ'

ಸಾರಾಂಶ

* ಹಿಜಾಬ್ ಬಿಟ್ಟು ಕಿತಾಬ್ ಕೇಳಿ ಎಂದಿದ್ದ ಪ್ರತಾಪ್‌ ಸಿಂಹಗೆ ಖಾದರ್ ತಿರುಗೇಟು * 'ಎಲ್ಲರೂ ಸಮಸ್ಯೆಗೆ ಪರಿಹಾರ ಹುಡುಕುತ್ತಾರೆ, ಪ್ರತಾಪ್‌ಸಿಂಹ ಸಮಸ್ಯೆ ಸೃಷ್ಟಿ ಮಾಡ್ತಾರೆ' * ಬಿಜೆಪಿ ಸರ್ಕಾರದ ವಿರುದ್ಧವು ಖಾದರ್ ವಾಗ್ದಾಳಿ

ಮೈಸೂರು, (ಫೆ.13): ಹಿಜಾಬ್ (Hijab Row)ಬಿಟ್ಟು ಕಿತಾಬ್ ಕೇಳಿ ಎಂದಿದ್ದ ಪ್ರತಾಪ್‌ ಸಿಂಹ ಹೇಳಿಕೆಗೆ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ (Congress MLA UT Khader) ವಾಗ್ದಾಳಿ ನಡೆಸಿದ್ದಾರೆ. 

ಸಂಸದ ಪ್ರತಾಪ್‌ ಸಿಂಹನಂತಹ (Pratap Simha) ಮೂರ್ಖ ಯಾರೂ ಇಲ್ಲ. ತಂದೆ ಮುಖ್ಯನಾ?, ತಾಯಿ ಮುಖ್ಯನಾ ಅಂತ ಕೇಳಲು ಆಗುತ್ತಾ. ಮೂರ್ಖರ ಪ್ರಶ್ನೆಗಳಿಗೆ ಉತ್ತರ ಸಿಗುತ್ತಾ? ಊಟ ಬೇಕಾ?, ನೀರು ಬೇಕಾ ಅಂದ್ರೆ ಆಗುತ್ತಾ? ಎಂದು ಪ್ರಶ್ನಿಸಿದರು.

ನೀವು ಪಾರಂಪರಿಕ, ಐತಿಹಾಸಿಕ‌ ಮೈಸೂರು ಸಂಸದರು. ಮೈಸೂರಿನ ಘನತೆ ಉಳಿಸಿ, ಅದಕ್ಕೆ ಕಪ್ಪುಚುಕ್ಕೆ ತರಬೇಡಿ. ಸಾಮಾನ್ಯವಾಗಿ ಎಲ್ಲರೂ ಸಮಸ್ಯೆಗೆ ಪರಿಹಾರ ಹುಡುಕುತ್ತಾರೆ. ಆದರೆ ಸಂಸದ ಪ್ರತಾಪ್‌ಸಿಂಹ ಸಮಸ್ಯೆಗೆ ಪರಿಹಾರ ಸಿಕ್ಕಾಗ ಸಮಸ್ಯೆ ಸೃಷ್ಟಿ ಮಾಡುತ್ತಾರೆ ಎಂದು ಕಿಡಿಕಾರಿದರು.

Hijab Row: ಹಿಜಾಬ್ ಅಂತ ಕಿತಾಬ್ ಮರೆತು ಮಕ್ಕಳನ್ನು ಹೆರುವ ಯಂತ್ರವಾಗಬೇಡಿ: ಪ್ರತಾಪ್ ಸಿಂಹ

ಟಿಪ್ಪು ಎಕ್ಸ್‌ಪ್ರೆಸ್‌ ರೈಲು ಹೆಸರು ಬದಲಾವಣೆಗೆ ಪ್ರಸ್ತಾಪ ಹಿನ್ನೆಲೆ, ಟಿಪ್ಪು, ಒಡೆಯರ್ ಕೊಡುಗೆ ಮರೆಮಾಚಲು ಸಾಧ್ಯವಿಲ್ಲ. ಟಿಪ್ಪು ಎಕ್ಸ್‌ಪ್ರೆಸ್‌ಗೆ ಯಾವುದೇ ಹೆಸರಿಟ್ರೂ ಮರೆಮಾಚಲಾಗಲ್ಲ. ಪ್ರತಾಪ್‌ ಸಿಂಹ ಸಂಸದನಾದ ಮೇಲೆ ಎಷ್ಟು ರೈಲ್ವೆ ಟ್ರ್ಯಾಕ್ ಆಗಿದೆ? ಎಷ್ಟು ಹೊಸ ರೈಲು‌, ಹೊಸ ಜಂಕ್ಷನ್ ತಂದಿದ್ದಾರೆ? ಆ ಕೆಲಸ ನಿಮ್ಮದು, ಅದನ್ನು ಮೊದಲು ಹೇಳಿ. ಒಡೆಯರ್, ಟಿಪ್ಪು ಮಹನೀಯರು, ಇಬ್ಬರನ್ನೂ ಗೌರವಿಸಬೇಕು ಎಂದು ಖಾದರ್ ತಿರುಗೇಟು ನೀಡದರು.

ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್‌, ಕೇಸರಿ ಶಾಲು ವಿವಾದದ ಬಗ್ಗೆ ಅವರು ಪ್ರತಿಕ್ರಿಯಿಸಿದ್ದು, ಕೋರ್ಟ್‌ ತೀರ್ಪಿನವರೆಗೂ ಹಿಂದಿನ ಪದ್ಧತಿ ಮುಂದುವರಿಯಲಿ. ಎಲ್ಲವನ್ನೂ ನ್ಯಾಯಾಲಯವೇ ಬಗೆಹರಿಸಲು ಸಾಧ್ಯವಾಗಲ್ಲ. ಕೋರ್ಟ್‌ ಹೊರಗೆ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಬೇಕು. ರಾಜ್ಯಸರ್ಕಾರವೇ ಮುಂದೆ ನಿಂತು ಸಮಸ್ಯೆ ಬಗೆಹರಿಸಬೇಕು. ಕೂಡಲೇ ಧಾರ್ಮಿಕ ಮುಖಂಡರು, ಸರ್ವ ಪಕ್ಷ ಸಭೆ ನಡೆಸಲಿ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಇಂತಹ ಸಮಸ್ಯೆ ಇರಲಿಲ್ಲ. ಶಿಕ್ಷಣ ಸಂಸ್ಥೆಗಳಲ್ಲಿ ಸಮಸ್ಯೆ ಉಂಟು ಮಾಡಿದ್ದೇ ಬಿಜೆಪಿಯವರು ಎಂದು ಖಾದರ್ ಆರೋಪಿಸಿದರು.

ಇನ್ನು ಇದೇ ವೇಳೆ ಸಿಎಂ ಇಬ್ರಾಹಿಂ ಅವರ ಬಗ್ಗೆ ಮಾತನಾಡಿದ ಖಾದರ್, ಸಿ.ಎಂ. ಇಬ್ರಾಹಿಂ ಅಪೇಕ್ಷೆ ಪಟ್ಟಿದ್ದು ಸಿಕ್ಕಿಲ್ಲ ಅಂತ ನೋವಿನಿಂದ ಮಾತನಾಡುತ್ತಿದ್ದಾರೆ. ಅವರು ಅಪೇಕ್ಷೆ ಪಟ್ಟಿದ್ದು ಪರಿಷತ್ ವಿಪಕ್ಷ ಸ್ಥಾನ. ನಮ್ಮದು ವಿಧಾನಸಭೆ, ಉಪ ನಾಯಕ ಸ್ಥಾನ ಕೊಟ್ಟಿದ್ದಾರೆ. ನಾನು ಎನ್‌ಎಸ್‌ಯೂಐ ಜಿಲ್ಲಾಧ್ಯಕ್ಷನಾಗಿ, ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷನಾಗಿ, ಕೆಪಿಸಿಸಿ ಸದಸ್ಯನಾಗಿ, ನಾಲ್ಕು ಬಾರಿ ಶಾಸಕ, ಸಚಿವನಾಗಿ ಕೆಲಸ ಮಾಡಿದ್ದೇನೆ. ಹೀಗಾಗಿ ನನ್ನನ್ನು ಪಕ್ಷ ಗುರುತಿಸಿ ಉಪ ನಾಯಕ ಸ್ಥಾನ ಕೊಟ್ಟಿದೆ ಎಂದು ಇಬ್ರಾಹಿಂಗೆ ಟಾಂಗ್ ಕೊಟ್ಟರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌