
ಮಂಗಳೂರು, (ಜೂನ್.24): ಅಂತ್ಯ ಸಂಸ್ಕಾರದಲ್ಲಿ ಕೆಲಸ ಮಾಡಬೇಕು ಎಂಬ ಭಾವನೆ ಬಂತು. ಹಾಗಾಗಿ ಭಾಗಿಯಾಗಿದ್ದೆ. ಸೋಂಕಿತನ ಮೃತದೇಹದಿಂದ ವೈರಸ್ ಹರಡೋದಿಲ್ಲ ಎಂದು ಕಾಂಗ್ರೆಸ್ ಶಾಸಕ ಯುಟಿ ಖಾದರ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡರು.
ಪಿಪಿಇ ಕಿಟ್ ಧರಿಸದೆ ಕಾಂಗ್ರೆಸ್ ಶಾಸಕಯು.ಟಿ.ಖಾದರ್ ಅವರು ಮೃತ ಕೊವಿಡ್-19 ಸೋಂಕಿತನ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು, ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು.
ಈ ಹಿನ್ನೆಲೆಯಲ್ಲಿ ಅವರು ಇಂದು (ಬುಧವಾರ) ಸುದ್ದಿಗೋಷ್ಠಿ ನಡೆಸಿದ್ದು, ಮೃತದೇಹದಿಂದ ವೈರಸ್ ಹರಡುತ್ತದೆ ಎಂದು ವೈದ್ಯಕೀಯ ಅಧ್ಯಯನ ಹೇಳಿಲ್ಲ. ಹಾಗಾಗಿ ಪಿಪಿಇ ಕಿಟ್ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರನ್ನು ನಿದ್ರೆ ಮಾಡಿಸಬಹುದು, ಸ್ಮಶಾನ ಮಾಡಿಸಲು ಆಗುವುದಿಲ್ಲ
ಮಕ್ಕಳು ತಂದೆಯ ಶವ ನೋಡೋದಿಕ್ಕೆ ಬರುವುದಿಲ್ಲ. ಜನ ಅಷ್ಟು ಭಯಭೀತರಾಗಿದ್ದಾರೆ. ಧಾರ್ಮಿಕ ವಿಧಿವಿಧಾನ ಮಾಡೋದಕ್ಕೂ ಜನರಿಗೆ ಹೆದರಿಕೆ ಆಗಿದೆ. ಕಾನೂನು ಪ್ರಕಾರ ಪಿಪಿಇ ಕಿಟ್ ಧರಿಸದೆ ಇರುವುದು ತಪ್ಪು. ಆದರೆ ಮೃತದೇಹದಿಂದ ಕರೊನಾ ಹರಡುವುದಿಲ್ಲ ಎಂದು ಜನರಿಗೆ ಮನವರಿಕೆ ಮಾಡಿಸಲೆಂದೇ ನಾನು ಪಿಪಿಇ ಕಿಟ್ ಧರಿಸದೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.