ಸ್ವಾಮೀಜಿಗಳಿಗೆ ರಾಜಕೀಯ ಪ್ರವೇಶಕ್ಕೆ ಆಫರ್ ಕೊಟ್ಟ ನಡ್ಡಾ ನಡೆಗೆ ಕಾಂಗ್ರೆಸ್ ಶಾಸಕರ ವಿರೋಧ

Published : Feb 27, 2023, 12:30 AM IST
ಸ್ವಾಮೀಜಿಗಳಿಗೆ ರಾಜಕೀಯ ಪ್ರವೇಶಕ್ಕೆ ಆಫರ್ ಕೊಟ್ಟ ನಡ್ಡಾ ನಡೆಗೆ ಕಾಂಗ್ರೆಸ್ ಶಾಸಕರ ವಿರೋಧ

ಸಾರಾಂಶ

ಇತ್ತೀಚಿನ ದಿನಗಳಲ್ಲಿ ರಾಜಕಾರಣದಲ್ಲಿ ಧರ್ಮ ಬೆರೆಯುತ್ತಿದೆ. ರಾಜಕಾರಣದಲ್ಲಿ ಧರ್ಮ ಬೆರೆಸುವ ಸಂಸ್ಕೃತಿ ಕಾಂಗ್ರೆಸ್‌ಗೂ ಸರಿಯಲ್ಲ, ಬಿಜೆಪಿಗೂ ಸರಿಯಲ್ಲ. ದೇಶ ಉಳಿಯಬೇಕಾದರೆ ಧರ್ಮ ರಾಜಕಾರಣದಲ್ಲಿ ಬರಬಾರದು: ಶಿವಾನಂದ ಪಾಟೀಲ 

ವಿಜಯಪುರ(ಫೆ.27):  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನಡೆಗೆ ಕಾಂಗ್ರೆಸ್ ಶಾಸಕ ಬಸವನಬಾಗೇವಾಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ವಿರೋಧ ವ್ಯಕ್ತಪಡಿಸಿದ್ದಾರೆ. 

ಜೆ.ಪಿ. ನಡ್ಡಾ ಸ್ವಾಮೀಜಿಗಳಿಗೆ ರಾಜಕೀಯ ಪ್ರವೇಶಕ್ಕೆ ಆಫರ್ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ(ಶನಿವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ರಾಜಕಾರಣದಲ್ಲಿ ಧರ್ಮ ಬೆರೆಯುತ್ತಿದೆ. ರಾಜಕಾರಣದಲ್ಲಿ ಧರ್ಮ ಬೆರೆಸುವ ಸಂಸ್ಕೃತಿ ಕಾಂಗ್ರೆಸ್‌ಗೂ ಸರಿಯಲ್ಲ, ಬಿಜೆಪಿಗೂ ಸರಿಯಲ್ಲ. ದೇಶ ಉಳಿಯಬೇಕಾದರೆ ಧರ್ಮ ರಾಜಕಾರಣದಲ್ಲಿ ಬರಬಾರದು ಅಂತ ತಿಳಿಸಿದ್ದಾರೆ. 

ಪಂಚಮಸಾಲಿ 2ಎ ಮೀಸಲಿಗೆ ಶಾಸಕ ಪಾಟೀಲ ಬೆಂಬಲ

ಕಾಂಗ್ರೆಸ್ ಪಕ್ಷ  ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಶಿವಾನಂದ ಪಾಟೀಲ ಅವರು, ಕಾಂಗ್ರೆಸ್ ಪಕ್ಷ ಬಿಡೋಲ್ಲ ಅಂತ ಹೇಳುವ ಮೂಲಕ ಪಕ್ಷಾಂತರಕ್ಕೆ ಫುಲ್ ಸ್ಟಾಪ್ ಇಟ್ಟಿದ್ದಾರೆ. 

ನಾನು ಪಕ್ಷ ಬಿಟ್ಟು ಹೋಗ್ತೀನಿ ಅಂತ ಎಲ್ಲಿಯೂ ಹೇಳಿಲ್ಲ, ಮಾಧ್ಯಮದವರು ಹೇಳಬೇಡಿ, ಪಕ್ಷದ ವರಿಷ್ಠರಲ್ಲಿ ಕೆಲವು ಏನಾದರೂ ನಾನು ಹೇಳಿಕೊಳ್ಳಬಹುದು. ನಾನು ಬಹಿರಂಗವಾಗಿ ಯಾವುದು ಹೇಳಲ್ಲ ಅಂತ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!