
ಬೆಂಗಳೂರು(ಜ. 21) ಆನಂದ್ ಸಿಂಗ್ ದೇಹವನ್ನು ಸ್ಕ್ಯಾನ್ ಮಾಡಿದ್ದ ವೈದ್ಯರು ಬೆಚ್ಚಿ ಬಿದ್ದಿದ್ದರು. ತಲೆಯಲ್ಲಿ ಆಂತರಿಕ ರಕ್ತ ಸ್ರಾವವಾಗಿದ್ದು ಪತ್ತೆಯಾಗಿತ್ತು. ಪಕ್ಕೆಲುಬು ಸಹ ಮುರಿದಿದೆ ಎಂದು ವೈದ್ಯರು ಹೇಳಿದ್ದರು.
ಇದೀಗ ಆನಂದ್ ಸಿಂಗ್ ಆಸ್ಪತ್ರೆಯಲ್ಲಿರುವ ಫೋಟೋ ಒಂದು ಲಭ್ಯವಾಗಿದೆ. ಆನಂದ್ ಸಿಂಗ್ ಅವರ ಬಲಗಣ್ಣು ಸಂಪೂರ್ಣವಾಗಿ ಊದಿಕೊಂಡಿದೆ. ಮುಖದ ಭಾಗವೂ ಊದಿಕೊಂಡಿದ್ದು ಎರಡು ಕಣ್ಣಿನ ಭಾಗಗಳು ಕಪ್ಪಾಗಿವೆ.
ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರ ಮಾರಾಮಾರಿಗೆ ಅಸಲಿ ಕಾರಣವೇನು..?
ಆನಂದ್ ಸಿಂಗ್ ಅವರಿಗೆ ಪ್ರಜ್ಞೆ ಇದ್ದರೂ ಕಣ್ಣು ತೆರೆಯಲು ಸಾಧ್ಯವಾಗದಷ್ಟು ಊತ ಇದೆ. ಈಗಲ್ ಟನ್ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದ ಕಾಂಗ್ರೆಸ್ ಶಾಸಕರ ನಡುವೆ ಮಾರಾಮಾರಿ ನಡೆದುದ್ದು ವರದಿಯಾಗಿತ್ತು. ಆನಂದ್ ಸಿಂಗ್ ಮೇಲೆ ಕಂಪ್ಲಿ ಶಾಸಕ ಗಣೇಶ್ ಹಲ್ಲೆ ಮಾಡಿದ್ದರು ಎಂಬುದನ್ನು ಆ ಪಕ್ಷದ ನಾಯಕರೇ ಒಪ್ಪಿಕೊಂಡಿದ್ದರು.
ರೆಸಾರ್ಟ್ ನಲ್ಲಿ 'ಕೈ' ಶಾಸಕರ ಮಾರಾಮಾರಿ: ತಾರಕಕ್ಕೇರಿದ ಬಾಟಲಿ ಬ್ಯಾಟಲ್!
ಆನಂದ್ ಸಿಂಗ್ ಮೇಲೆ ಹಲ್ಲೆ: ಶಾಸಕ ಗಣೇಶ್ ಹೇಳಿದ್ದೇನು?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.