
ಬೆಂಗಳೂರು, [ಜ.20]: ಕಾಂಗ್ರೆಸ್ನ ರೆಸಾರ್ಟ್ ರಾಜಕೀಯ ಇದೀಗ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಅದ್ರಲ್ಲೂ ಈಗಲ್ ಟನ್ ರೆಸಾರ್ಟ್ನಲ್ಲಿ ಬಳ್ಳಾರಿ ಕಾಂಗ್ರೆಸ್ ಶಾಸಕರು ಬಡಿದಾಡಿಕೊಂಡಿರುವ ಸುದ್ದಿ ಸಾಕಷ್ಟು ಚರ್ಚೆಗೆ ಗುರಿಯಾಗಿದೆ.
ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರ ಮಾರಾಮಾರಿಗೆ ಅಸಲಿ ಕಾರಣವೇನು..?
ಶನಿವಾರ ರಾತ್ರಿ ರೆಸಾರ್ಟ್ ನಲ್ಲಿ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರಿಂದ ಹಲ್ಲೆಗೊಳಗಾಗಿ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಹೊಸಪೇಟೆಯ ವಿಜಯನಗರ ಶಾಸಕ ಆನಂದ್ ಸಿಂಗ್ ಚಿಕಿತ್ಸೆ ಮುಂದುವರಿದಿದೆ.
ರೆಸಾರ್ಟ್ ನಲ್ಲಿ 'ಕೈ' ಶಾಸಕರ ಮಾರಾಮಾರಿ: ತಾರಕಕ್ಕೇರಿದ ಬಾಟಲಿ ಬ್ಯಾಟಲ್!
ಇಡೀ ದೇಹವನ್ನು ಎಂ.ಆರ್ ಐ ಸ್ಕ್ಯಾನಿಂಗ್ ಮಾಡಲಾಗಿದ್ದು, ಎಂ.ಆರ್.ಐ ಸ್ಕ್ಯಾನಿಂಗ್ ನ ವಿವರವನ್ನು ವೈದ್ಯರು ಆನಂದ್ ಸಿಂಗ್ ಕುಟುಂಬ ಸದಸ್ಯರಿಗೆ ನೀಡಿದ್ದಾರೆ.
ಇದೀಗ ಈ ಸ್ಕ್ಯಾನಿಂಗ್ ರಿಪೋರ್ಟ್ ಸುವರ್ಣನ್ಯೂಸ್ ಗೆ ಲಭ್ಯವಾಗಿದ್ದು, ಆಘಾತಕಾರಿ ವಿಚಾರ ಪತ್ತೆಯಾಗಿದೆ. ಹಾಗಾದ್ರೆ ಸ್ಕ್ಯಾನಿಂಗ್ ವರದಿಯಲ್ಲೇನಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಸ್ಕ್ಯಾನಿಂಗ್ ರಿಪೋರ್ಟ್
* ಎಂ.ಆರ್. ಐ ಸ್ಕ್ಯಾನಿಂಗ್ ನಲ್ಲಿ ತೀವೃವಾಗಿ ರಕ್ತ ಸ್ರಾವವಾಗಿರುವುದು ಪತ್ತೆ.
* ತಲೆಯಲ್ಲಿ ಆಂತರೀಕವಾಗಿ ರಕ್ತ ಸ್ರಾವವಾಗಿದ್ದು, ರಕ್ತ ಹೆಪ್ಪುಗಟ್ಟುತ್ತಿದೆ.
* ಹೊಟ್ಟೆಯಲ್ಲೂ ರಕ್ತಸ್ರಾವವಾಗಿರುವ ಬಗ್ಗೆ ವೈದ್ಯರಿಗೆ ವಿವರ ಪತ್ತೆ.
* ಪಕ್ಕೆಲುಬು ಸಹ ಮುರಿದಿರುವ ಕುರಿತು ಸ್ಕ್ಯಾನಿಂಗ್ ನಲ್ಲಿ ವಿವರ ಪತ್ತೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.