
ಬೆಳಗಾವಿ, (ಸೆ.13): ಆರ್ಎಸ್ಎಸ್ ರೀತಿಯಲ್ಲಿ ನಮ್ಮ ಶತ್ರುಗಳನ್ನು ಕೂಡ ತಯಾರು ಮಾಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದರು.
ಇಲ್ಲಿನ ಪಕ್ಷದ ಕಚೇರಿಯಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ಪಕ್ಷದ ಕಾರ್ಯಕರ್ತರಿಗೆ ತರಬೇತಿ ನೀಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಘಟಪ್ರಭಾದಲ್ಲಿ ನಾ.ಸು. ಹರ್ಡೀಕರ್ ಸಮಾಧಿ ಸ್ಥಳದಲ್ಲಿ ಕೇಂದ್ರ ಸ್ಥಾಪಿಸಲಾಗಿದೆ. ಅಲ್ಲಿ ರಾಜ್ಯದ ಕಾರ್ಯಕರ್ತರಿಗೆ ತರಬೇತಿ ಕೊಡಲಾಗುವುದು ಎಂದು ತಿಳಿಸಿದರು.
ಆರ್ಎಸ್ಎಸ್ ಮಾದರಿ ಅನುಸರಿಸುತ್ತಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದಕ್ಕೂ ಇದಕ್ಕೂ ಸಂಬಂಧವಿಲ್ಲ. ಪಕ್ಷದ ಸಿದ್ಧಾಂತ ಹಾಗೂ ಇತಿಹಾಸ ಗಮನದಲ್ಲಿಟ್ಟುಕೊಂಡು ದೇಶದ ಅಭಿವೃದ್ಧಿಗಾಗಿ ಕಾರ್ಯಕರ್ತರು ಹೇಗೆ ತೊಡಗಿಸಿಕೊಳ್ಳಬೇಕು ಎನ್ನುವುದನ್ನು ತಿಳಿಸಲಾಗುವುದು. ನಾವು ಲಾಠಿ ಹಿಡಿದರೆ ಬೇರೆಯವರಿಗೆ ಸಹಾಯ ಆಗುವಂತಹ ರೀತಿಯಲ್ಲಿ ಇರುತ್ತದೆಯೇ ವಿನಃ ಭಯ ಬೀಳಿಸುವಂತಿರುವುದಿಲ್ಲ. ಅಂತಹ ಸಂಘಟನೆಗಳಿಗೂ ನಮಗೂ ಸಂಬಂಧವಿಲ್ಲ ಎಂದರು.
ಸ್ವಾತಂತ್ರ್ಯ ಹೋರಾಟದ ವಿರುದ್ಧ ಇದ್ದಂತಹ ಆರ್ಎಸ್ಎಸ್ನಿಂದ ನಾವು ಕಲಿಯುವಂಥದ್ದು ಏನೂ ಇಲ್ಲ. ಬಿಜೆಪಿಯ ಕೆಲವು ದೊಡ್ಡ ನಾಯಕರು ಅಫೀಮು ತೆಗೆದುಕೊಳ್ಳದೇ ಮನೆಯಿಂದ ಈಚೆಗೆ ಬರುತ್ತಿರಲೇ ಇಲ್ಲ. ಅದೆಲ್ಲವೂ ನಮಗೆ ಗೊತ್ತಿದೆ. ಆದರೆ, ಅವರ ಹೆಸರು ಹೇಳಲು ಬಯಸುವುದಿಲ್ಲ ಎಂದು ಹೊಸ ಬಾಂಬ್ ಸಿಡಿಸಿದರು.
ಕಾನೂನು ಬಾಹಿರ ಚಟುವಟಿಕೆಗಳೇನೇ ನಡೆದರೂ ಅದನ್ನು ಅಲ್ಪಸಂಖ್ಯಾತ ನಾಯಕರೇ ಮಾಡಿದ್ದು ಎಂದು ಬಿಂಬಿಸುವುದು ಬಿಜೆಪಿಯರಿಗೆ ಫ್ಯಾಷನ್ ಆಗಿಬಿಟ್ಟಿದೆ. ಅಲ್ಪಸಂಖ್ಯಾತರನ್ನು ಟಾರ್ಗೆಟ್ ಮಾಡುವುದೇ ಬಿಜೆಪಿಯ ಮೂಲ ಉದ್ದೇಶ. ಅದು 1923ರಿಂದಲೂ ನಡೆದುಕೊಂಡು ಬಂದಿದೆ. ಅದರ ವಿರುದ್ಧ ಹೋರಾಟಕ್ಕಾಗಿಯೇ ಕಾರ್ಯಕರ್ತರನ್ನು ಸಜ್ಜು ಮಾಡುತ್ತಿದ್ದೇವೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.