Council Election Karnataka: ನನ್ನ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದಳೆಂದು ಕಣ್ಣೀರಿಟ್ಟ ಕೈ ಅಭ್ಯರ್ಥಿ

Kannadaprabha News   | Asianet News
Published : Dec 01, 2021, 08:03 AM IST
Council Election Karnataka:   ನನ್ನ  ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದಳೆಂದು ಕಣ್ಣೀರಿಟ್ಟ ಕೈ ಅಭ್ಯರ್ಥಿ

ಸಾರಾಂಶ

ಪುತ್ರಿ ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಕಾಂಗ್ರೆಸ್ ಟಿಕೆಟ್ ನೀಡಿದೆ ಎಂಬ ಬಿಜೆಪಿ ಆರೋಪ  ಬೆಂಗಳೂರು ನಗರ ಜಿಲ್ಲಾ ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ  ಯೂಸೂಫ್ ಷರೀಫ್  ಕಣ್ಣೀರು 

ಆನೇಕಲ್  (ಡಿ.01):  ಪುತ್ರಿ ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಕಾಂಗ್ರೆಸ್ (Congress) ಟಿಕೆಟ್ ನೀಡಿದೆ ಎಂಬ ಬಿಜೆಪಿ ಆರೋಪಕ್ಕೆ ಬೆಂಗಳೂರು (Bengaluru) ನಗರ ಜಿಲ್ಲಾ ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ  ಯೂಸೂಫ್ ಷರೀಫ್  ಕಣ್ಣೀರು ಹಾಕಿದರು.  ಆನೇಕಲ್‌ನಲ್ಲಿ ಪ್ರಚಾರ ಸಭೆಯಲ್ಲಿ  ಮಾತನಾಡಿದ ಬಾಬು  ನನ್ನ ಬಗ್ಗೆ ನಿಂದನೆ ಮಾಡಿ ನನ್ನನ್ನು ಹಿಗಳೆಯುವುದು ಅವರ ಸಂಸ್ಕಾರ  ಮತ್ತು ಸಂಸ್ಕೃತಿ ಹೇಳುತ್ತದೆ ಎಂದರು. ಆರೋಪ ಗಳಿಂದ  ನನ್ನ ಕುಟುಂಬ ನೊಂದಿದೆ.  ನನ್ನ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಇಡೀ ರಾತ್ರಿ ನಿದ್ದೆ ಇಲ್ಲದೇ ಕಾವಲು ಕಾದಿದ್ದೇನೆ.  ತಮ್ಮ 150  ಎಕರೆ ಪ್ರದೇಶದಲ್ಲಿ ಬಡವರು ಕಟ್ಟಿಕೊಂಡ ಮನೆಗಲಿಗೆ ನಾನೇ ದಾಖಲೆ ಮಾಡಿಸಿಕೊಟ್ಟಿದ್ದೇನೆ ಎಂದು.ನನ್ನ ಹಣವೆಲ್ಲಾ ನಿಮ್ಮದೇ. ನಿಮ್ಮಸೇವೆ ಎಂದು ಹೇಳಿದರು. 

ಮಗಳ ಮೇಲೆ ಅತ್ಯಾಚಾರ ಆರೋಪ :   ಮಗಳ ಮೇಲೆ ಅತ್ಯಾಚಾರ ಮಾಡಿದ್ದ ಕೆಜಿಎಫ್ ಬಾಬುಗೆ ವಿಧಾನ ಪರಿಷತ್ ಚುನಾವಣೆಯಲ್ಲಿ(MLC Election) ಕಾಂಗ್ರೆಸ್ ಟಿಕೆಟ್ (Congress Ticket) ನೀಡಿದೆ ಎಂದು ಸಚಿವ ಎಸ್.ಟಿ ಸೋಮಶೇಖರ್ (ST Somashekar) ಗಂಭೀರ ಆರೋಪ ಮಾಡಿದ್ದು,  ಹೆಂಡತಿ, ಮಗಳ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಬಾಬು ವಿರುದ್ಧ ದೂರು ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನ ಠಾಣೆಯೊಂದರಲ್ಲಿ ಎಫ್‍ಐಆರ್ ದಾಖಲಾಗಿದೆ. ಇಂತಹವರಿಗೆ ಕಾಂಗ್ರೆಸ್‍ನವರು ಟಿಕೆಟ್ ಕೊಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು. ಅಲ್ಲದೇ  ಮಗಳು ನೀಡಿದ ದೂರಿನಲ್ಲಿ ಏನಿದೆ ಎಂದು ತಿಳಿಸಿದ್ದಾರೆ. 

ಮಗಳು ಹಾಕಿದ ಕೇಸಿನಲ್ಲಿ ಏನಿದೆ: 2014 ರ ನವೆಂಬರ್‌ 6 ರಂದು  ಬಾಬುವಿನ (KGF Babu) 16 ವರ್ಷದ  ಪುತ್ರಿ ಬೆಂಗಳೂರಿನ ಹೈ ಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಳು.  ಅದರಲ್ಲಿ ತನ್ನ ಆಂಟಿಯೊಂದಿಗೆ ತಂದೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ. ಇದನ್ನು  ನೋಡಿದ ನನ್ನನ್ನು ಎಳೆದಾಡಿ ಹಿಂದೆ ನೀಡಿದ್ದ. ಅದಲ್ಲದೆ ಮನೆ ಕೆಲಸದವಳನ್ನು ಅಮ್ಮ ಎನ್ನಬೇಕು.  ಕೊಲೆ (Murder) ಮಾಡುತ್ತೇನೆ ಎಂದು ಬೆದರಿಸಿದ್ದ. ಸ್ನಾನ ಮಾಡುವಾಗ ಕೊಠಡಿ ಬಾಗಿಲು ತೆರೆಯುವಂತೆ ಒತ್ತಾಯಿಸುತ್ತಿದ್ದ  ದೈಹಿಕ ಹಿಂಸೆ ನೀಡುತ್ತಿದ್ದ ಎಂದು ತಿಳಿಸಿದ್ದಾಳೆ. ಆಕೆ ಮಾಡಿದ ಆರೋಪಗಳ ಬಗ್ಗೆ ಎಫ್‌ಐಆರ್‌ (FIR) ಕಾಪಿಯಲ್ಲಿಉಲ್ಲೇಖವಾಗಿದೆ. . 

ಸ್ಫೋಟಕ ಆರೋಪ :  ಮಗಳ ಮೇಲೆ ಅತ್ಯಾಚಾರ ಮಾಡಿದ್ದ ಕೆಜಿಎಫ್ ಬಾಬುಗೆ ವಿಧಾನಪರಿಷತ್ ಚುನಾವಣೆಯಲ್ಲಿ(MLC Election) ಕಾಂಗ್ರೆಸ್ ಟಿಕೆಟ್ (Congress Ticket) ನೀಡಿದೆ ಎಂದು ಸಚಿವ ಎಸ್.ಟಿ ಸೋಮಶೇಖರ್ (ST Somashekar) ಗಂಭೀರ ಆರೋಪ ಮಾಡಿದ್ದಾರೆ.  ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ  ಮಾತನಾಡಿದ ಅವರು, ಬೆಂಗಳೂರು ನಗರ (Bengaluru City) ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಚುನಾವಣೆಗೆ (MLC Election) ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಬಾಬು’ ಎಂದೇ (KGF Babu) ಹೆಸರುವಾಸಿಯಾಗಿರುವ ಯೂಸುಫ್‌ ಷರೀಫ್‌ (Yusuf Sharif) ವಿರುದ್ಧ ಸ್ಫೋಟಕ ಆರೋಪವನ್ನ ಮಾಡಿದರು. 

ಹೆಂಡತಿ, ಮಗಳ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಬಾಬು ವಿರುದ್ಧ ದೂರು ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನ ಠಾಣೆಯೊಂದರಲ್ಲಿ ಎಫ್‍ಐಆರ್ ದಾಖಲಾಗಿದೆ. ಇಂತಹವರಿಗೆ ಕಾಂಗ್ರೆಸ್‍ನವರು ಟಿಕೆಟ್ ಕೊಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು. ಇಂತಹ ಪ್ರಕರಣಗಳನ್ನು ನೋಡಿ ಕೊಟ್ಟಿದ್ದಾರೋ ಏನೋ ಗೊತ್ತಿಲ್ಲ. ಅತ್ಯಾಚಾರ ಮಾಡಿದ್ದಾರೆ ಎಂಬುವುದಕ್ಕೆ ಎಫ್‍ಐಆರ್ ದಾಖಲಾಗಿರುವುದು ಎಲ್ಲಾ ದಾಖಲೆಗಳು ನಮ್ಮ ಬಳಿ ಇವೆ ಎಂದು ಸ್ಫೋಟಕ ಹೇಳಿಕೆ ನೀಡಿದರು. 

"

 ಡಿಸೆಂಬರ್ 2 ಅಥವಾ 3 ಬೆಂಗಳೂರಿನ ಎಲ್ಲಾ ಶಾಸಕರು, ಸಚಿವರು ಈ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ. ನಾನು ಹೇಳಿರುವುದು ಯಾವುದು ಸುಳ್ಳಲ್ಲ, ಎಲ್ಲಾ ನಿಜ. ಡೆವಲಪರ್ಸ್ ಯಾರು ಎಷ್ಟು ರೂಪಾಯಿ ಕೊಟ್ಟಿದ್ದಾರೆ ಎಂದು ನಮ್ಮ ಬಳಿ ಸಾಕ್ಷ್ಯಗಳಿದೆ. ಆತ 1,700 ಕೋಟಿಯನ್ನು ಡಿಕ್ಲೇರ್ ಮಾಡಿದ್ದಾನೆ. ಡಿಸಿಪಿಗೆ ಫೋನ್ ಮಾಡಿ ಅವನ ಹಿನ್ನೆಲೆಯನ್ನು ತೆಗೆದುಕೊಂಡಿದ್ದೇನೆ. 1,700 ಕೋಟಿ ಅಫಿಶಿಯಲ್ ಆಗಿ ತೋರಿಸಿದ್ದಾನೆ, ಅದರ ಎರಡರಷ್ಟು ಇದೆ ಎಂದು ವಿವರಿಸಿದರು. 

ಆತನ ಮೇಲೆ 40 ಕೇಸ್‍ಗಳಷ್ಟು ಎಫ್‍ಐಆರ್ ಇದೆ. 5 ಕೋಟಿಯಿಂದ 60 ಕೋಟಿವರೆಗೂ ಆತ ಫ್ರಾಡ್ ಮಾಡಿದ್ದಾನೆ. ಅವನನ್ನು 3  ತಿಂಗಳು ಗಡಿಪಾರು ಮಾಡಿ, ಜೈಲಿನಲ್ಲೂ ಇಟ್ಟಿದ್ದೇವು ಎಂದು ಡಿಸಿಪಿ ಹೇಳಿದ್ದಾರೆ. ಇಂತಹವನನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಡಿದೆ. ಈ ಕೇಸ್‍ಗಳನ್ನು ನೋಡಿ ನನಗೆ ಗಾಬರಿಯಾಗಿದೆ ಎಂದು ಎಂದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌