ಕೋವಿಡ್ ಪಾಸಿಟಿವ್: ಸದನದ ಕಲಾಪಕ್ಕೆ ಹಾಜರಾಗಲ್ಲ, ಸಭಾಪತಿಗೆ MLC ಪತ್ರ

Published : Sep 21, 2020, 03:04 PM ISTUpdated : Sep 21, 2020, 03:06 PM IST
ಕೋವಿಡ್ ಪಾಸಿಟಿವ್: ಸದನದ ಕಲಾಪಕ್ಕೆ ಹಾಜರಾಗಲ್ಲ, ಸಭಾಪತಿಗೆ MLC ಪತ್ರ

ಸಾರಾಂಶ

ಇಂದಿನಿಂದ ವಿಧಾನ ಮಂಡಲ ಮಳೆಗಾಲದ ಅಧಿವೇಶನ ಆರಂಭವಾಗುತ್ತಿದೆ. 10 ದಿನಗಳ ಕಾಲ ನಡೆಯಲಿರುವ ಅಧಿವೇಶನಕ್ಕೆ ಮತ್ತೋರ್ವ ವಿಧಾನಪರಿಷತ್ ಸದಸ್ಯ ಗೈರಾಗಿದ್ದಾರೆ.

ಬೆಂಗಳೂರು, (ಸೆ.21): ವಿಧಾನ ಪರಿಷತ್ ಸದಸ್ಯ ಜಿ ರಘು ಆಚಾರ್ ಅವರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಇಂದಿನಿಂದ ಆರಂಭಗೊಂಡಿರುವ ವಿಧಾನಮಂಡಲದ ಅಧಿವೇಶನಕ್ಕೆ ಗೈರು ಅಗಲಿದ್ದಾರೆ.

ವಿಧಾನ ಪರಿಷತ್ ಸದಸ್ಯ ಜಿ ರಘು ಆಚಾರ್ ಅವರಿಗೆ ಕೋವಿಡ್ 19 ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ವಿಧಾನ ಪರಿಷತ್ ಕಲಾಪದಲ್ಲಿ ಪಾಲ್ಗೊಳ್ಳುತ್ತಿಲ್ಲ.

ಕೊರೋನಾ ಲಸಿಕೆ ಉತ್ಪಾದನೆ; ಭಾರತದ ಮುಂದೆ ಹಲವು ಸವಾಲು! 

ಈ ಬಾರಿ ವಿಧಾನ ಪರಿಷತ್ ಅಧಿವೇಶನದಲ್ಲಿ ಪಾಲ್ಗೊಳ್ಳಲು ಕೋವಿಡ್ 19 ಪರೀಕ್ಷೆ ಕಡ್ಡಾಯ ಮಾಡಿದ್ದರ ಹಿನ್ನೆಲೆಯಲ್ಲಿ ರಘು ಆಚಾರ್ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಈ ಸಂಬಂಧ ವಿಧಾನ ಪರಿಷತ್ ಸಭಾಪತಿಗಳಿಗೆ ಜಿ. ರಘು ಆಚಾರ್ ಪತ್ರ ಬರೆದು ತಮಗೆ ಕೋವಿಡ್ ಪಾಸಿಟಿವ್ ಆಗಿರುವುದರಿಂದ ಸದನದ ಕಲಾಪದಲ್ಲಿ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಇಂದಿನಿಂದ ವಿಧಾನ ಮಂಡಲ ಮಳೆಗಾಲದ ಅಧಿವೇಶನ ಆರಂಭವಾಗುತ್ತಿದೆ. 10 ದಿನಗಳ ಕಾಲ ನಡೆಯಲಿರುವ ಅಧಿವೇಶನಕ್ಕೆ ಮೊದಲ ದಿನವೇ 18ಕ್ಕು ಹೆಚ್ಚು ಶಾಸಕರು ಗೈರಾಗಿದ್ದಾರೆ. ಕೋವಿಡ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಈ ಎಲ್ಲರೂ ಸದನಕ್ಕೆ ಗೈರುಹಾಜರಾಗಲಿದ್ದು, ಅವರಲ್ಲಿ ಐವರು ಸಚಿವರೂ ಸೇರಿದ್ದಾರೆ.

ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಬಸವರಾಜ್ ಹಾಗೂ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರಿಗೆ ಕೊರೋನಾ ವೈರಸ್ ಪಾಸಿಟಿವ್ ಆಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!