ಚುನಾವಣಾ ಆಯೋಗದ ಮೇಲೂ ಹಿಡಿತ ಸಾಧಿಸಲು ಹೊರಟ ಬಿಜೆಪಿ: ಡಿ.ಕೆ.​ಸು​ರೇಶ್‌

Published : Nov 19, 2022, 11:00 PM IST
ಚುನಾವಣಾ ಆಯೋಗದ ಮೇಲೂ ಹಿಡಿತ ಸಾಧಿಸಲು ಹೊರಟ ಬಿಜೆಪಿ: ಡಿ.ಕೆ.​ಸು​ರೇಶ್‌

ಸಾರಾಂಶ

ಮತದಾರರ ಪಟ್ಟಿ ಪರಿಷ್ಕರಣೆ ಸರ್ಕಾರದ ಹೊಣೆ, ಅದನ್ನು ಖಾಸಗಿ ಸಂಸ್ಥೆಗೆ ನೀಡಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವ ಕೆಲಸ ಮಾಡು​ತ್ತಿದೆ: ಸಂಸದ ಸುರೇಶ್‌

ರಾಮ​ನ​ಗರ(ನ.19): ಬಿಜೆಪಿ ಪಕ್ಷ ಕೆಲವು ಸ್ವ ಹಿತ ಸಂಸ್ಥೆಗಳ ಮೇಲೆ ಮಾತ್ರ ಹಿಡಿತ ಸಾಧಿಸಿತ್ತು. ಇದೀಗ ಚುನಾವಣಾ ಆಯೋಗದ ಮೇಲೂ ಹಿಡಿತ ಸಾಧಿಸಲು ಹೊರಟಿದೆ ಎಂದು ಸಂಸದ ಡಿ.ಕೆ.​ಸು​ರೇಶ್‌ ವಾಗ್ದಾಳಿ ನಡೆ​ಸಿ​ದರು.

ಸುದ್ದಿ​ಗಾ​ರ​ರೊಂದಿಗೆ ಮಾತ​ನಾ​ಡಿದ ಅವರು, ಮತದಾರರ ಪಟ್ಟಿಪರಿಷ್ಕರಣೆ ಮಾಡುವುದು ಸರ್ಕಾರದ ಹೊಣೆ. ಆ ಜವಾ​ಬ್ದಾ​ರಿ​ಯನ್ನು ಖಾಸಗಿ ಸಂಸ್ಥೆಗೆ ನೀಡಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವ ಕೆಲಸ ಮಾಡು​ತ್ತಿದೆ. ಇದರಲ್ಲಿ ಭಾಗಿ​ಯಾ​ಗಿ​ರುವ ಅಧಿಕಾರಿಗಳು, ಜನಪ್ರತಿನಿಧಿಗಳ ಮೇಲೆ ಚುನಾವಣಾ ಆಯೋಗ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ಈ ಅಕ್ರ​ಮದ ಕುರಿತು ಸಮಗ್ರ ತನಿಖೆಯಾಗಬೇಕು. ತನಿಖೆ ಹೆಸ​ರಿ​ನಲ್ಲಿ ದಾರಿ ತಪ್ಪಿ​ಸುವ ಕೆಲಸ ಮಾಡ​ಬಾ​ರದು. ಅಕ್ರಮದಲ್ಲಿ ಬೆಂಗಳೂರಿನ ಎಲ್ಲಾ ಸಚಿವರು ಪಾಲುದಾರರಾಗಿದ್ದಾರೆ. ಸ್ವತಃ ಮುಖ್ಯಮಂತ್ರಿಗಳೇ ಇದರ ಪಾಲುದಾರಿಕೆ ಹೊಂದಿದ್ದಾರೆ. ಆದ್ದ​ರಿಂದ ಈ ಕೂಡಲೇ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಒತ್ತಾ​ಯಿ​ಸಿ​ದರು.

ಸತೀಶ್‌ ಹೇಳಿಕೆ ದುರಾದೃಷ್ಟಕರ: ಬಿಜೆಪಿಗೆ ಹೋರಾಟ ಮಾಡುವ ನೈತಿಕತೆಯಿಲ್ಲ ಎಂದ ಡಿ.ಕೆ ಸುರೇಶ್

ಕೆಲವು ಬಿಜೆಪಿ ನಾಯಕರ ಅಧೀ​ನ​ದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಗಳಿಗೆ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡುವ ಕೆಲಸವನ್ನು ಕಾನೂನು ಬಾಹಿರವಾಗಿ ಕೊಟ್ಟಿದ್ದಾರೆ. ಆ ಮುಖಾಂತರ ಮತದಾರರ ಪಟ್ಟಿಯಲ್ಲಿ ಸಾಕಷ್ಟುಗೊಂದಲವನ್ನು ಸೃಷ್ಟಿಮಾಡಿದ್ದಾರೆ. ಸಾಕಷ್ಟುಮತಗಳನ್ನು ಡಿಲೀಟ್‌ ಮಾಡಿದ್ದಾರೆ. ಜೊತೆಗೆ ಅವರಿಗೆ ಬೇಕಾದ ಮತದಾರರನ್ನು ಸೇರಿಸಿದ್ದಾರೆ ಎಂದು ಆರೋ​ಪಿ​ಸಿ​ದರು.

ನಮ್ಮ ಪಕ್ಷದ ಉಸಾ​ಬರಿ ಬೇರೆ ಪಕ್ಷ​ದ​ವ​ರಿಗೆ ಬೇಡ. ನಮ್ಮ ಪಕ್ಷ​ದಲ್ಲಿ ಸೂಕ್ತ ಅಭ್ಯರ್ಥಿ ಇದ್ದಾರೆ. ನೀವು ನಿರೀಕ್ಷೆ ಮಾಡ​ದಂತಹ ರೀತಿ​ಯಲ್ಲಿ ಸ್ಥಳೀ​ಯರೇ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡು​ತ್ತಾರೆ ಕಾದು ನೋಡಿ ಎಂದು ಮಾಜಿ ಸಚಿವ ಸಿ.ಪಿ.​ಯೋ​ಗೇ​ಶ್ವರ್‌ಗೆ ತಿರು​ಗೇಟು ನೀಡಿ​ದ​ರು.

Ramanagara: ಬಿಜೆಪಿಯೇ ವಸೂಲಿ ಪಕ್ಷ: ಸಂಸದ ಸುರೇಶ್‌ ವಾಗ್ದಾಳಿ

ಜೆಡಿ​ಎಸ್‌ ಪಂಚ​ರತ್ನ ರಥ​ಯಾತ್ರೆಗೆ ಚಾಲನೆ ನೀಡಿ​ರುವ ಪ್ರಶ್ನೆಗೆ ಉತ್ತ​ರಿ​ಸಿದ ಸಂಸ​ದರು, ಬೇರೆ ಬೇರೆ ಪಕ್ಷದವರು ಪಕ್ಷ ಸಂಘಟನೆಗೆ ಅವರದ್ದೇ ಸ್ಟಾಟರ್ಜಿ ಮಾಡುತ್ತಾರೆ. ಅವರ ಪಕ್ಷದ ಸಿದ್ಧಾಂತಗಳ ಮೇಲೆ ಕಾರ್ಯಕ್ರಮಗಳನ್ನು ರೂಪಿಸುತ್ತಾರೆ. ನಮ್ಮ ಪಕ್ಷ ಸಂಘಟನೆ ಮಾಡಲು ನಾವು ಹಲವು ಕಾರ್ಯಕ್ರಮಗಳನ್ನು ರೂಪಿಸುತ್ತೇವೆ. ಅವರ ಪಕ್ಷದ ಆಂತರಿಕ ವಿಚಾರ ನಮಗೇಕೆ ಎಂದು ಹೇಳಿ​ದರು.

ವಿಧಾನ ಪರಿ​ಷತ್‌ ಸದಸ್ಯ ಸಿ.ಎಂ.ಲಿಂಗಪ್ಪ, ಮಾಜಿ ಶಾಸಕ ಕೆ.ರಾಜು, ಕೆಪಿ​ಸಿಸಿ ಪ್ರಧಾನ ಕಾರ್ಯ​ದರ್ಶಿ ಜಿಯಾ​ವುಲ್ಲಾ, ಜಿಪಂ ಮಾಜಿ ಅಧ್ಯಕ್ಷರಾದ ಇಕ್ಬಾಲ್‌ ಹುಸೇನ್‌, ಕೆ.ರ​ಮೇಶ್‌, ರಾಮ​ನ​ಗರ ನಗ​ರಾ​ಭಿ​ವೃದ್ಧಿ ಪ್ರಾಧಿ​ಕಾರ ಮಾಜಿ ಅಧ್ಯಕ್ಷ ಸಿಎನ್‌ಆರ್‌ ವೆಂಕ​ಟೇಶ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಚೇತನ್‌ಕುಮಾರ್‌ ಇತರರಿದ್ದ​ರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!
Karnataka News Live: ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!