ಕೆಲಸವಿಲ್ಲದೆ ಯೋಗೇಶ್ವರ್‌ ಗೊಂದಲ ಸೃಷ್ಟಿ: ಡಿ.ಕೆ.ಸುರೇಶ್‌

Published : Sep 10, 2023, 03:30 AM IST
ಕೆಲಸವಿಲ್ಲದೆ ಯೋಗೇಶ್ವರ್‌ ಗೊಂದಲ ಸೃಷ್ಟಿ: ಡಿ.ಕೆ.ಸುರೇಶ್‌

ಸಾರಾಂಶ

ಯೋಗೇಶ್ವರ್‌ ಹಿಂದೆಯೂ ಯಡಿಯೂರಪ್ಪ ಅವರನ್ನೂ ಬ್ಲಾಕ್‌ಮೇಲ್ ಮಾಡಿದರು. ಅದ್ಯಾವುದೋ ಸಿಡಿ ಇಟ್ಟುಕೊಂಡು ಸರ್ಕಾರವನ್ನೂ ಬೀಳಿಸಿದ್ದಾಯ್ತು. ಈಗ ಕಾಂಗ್ರೆಸ್‌ ಸರ್ಕಾರ ಕೆಡುವುತ್ತೇನೆ ಎನ್ನುತ್ತಿದ್ದಾರೆ. ಬರೀ ಸರ್ಕಾರ ಬೀಳಿಸೋ ಕೆಲಸ ಮಾತ್ರವೇ ಮಾಡೋದ? ಎಂದು ಪ್ರಶ್ನಿಸಿದ ಡಿ.ಕೆ.ಸುರೇಶ್‌ 

ಚನ್ನಪಟ್ಟಣ(ಸೆ.10): ವೈದ್ಯ ಕಾಲೇಜು ಕನಕಪುರದಲ್ಲೂ ಆಗುತ್ತೆ, ರಾಮನಗರದಲ್ಲೂ ಆಗುತ್ತೆ. ಮಾಡಲು ಕೆಲಸವಿಲ್ಲದೆ ಕೆಲವರು ಈ ಕುರಿತು ಗೊಂದಲ ಸೃಷ್ಟಿಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಅವರಿಗೆ ಸಂಸದ ಡಿ.ಕೆ.ಸುರೇಶ್‌ ತಿರುಗೇಟು ನೀಡಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಈ ಹಿಂದೆ ಯೋಗೇಶ್ವರ್‌ ಬ್ಲಾಕ್‌ಮೇಲ್‌ ಮಾಡಿದ್ದರು ಎಂದು ಏಕವಚನದಲ್ಲೇ ವಾಗ್ದಾಳಿ ಮಾಡಿದರು.

ಅವರು ನಗರದಲ್ಲಿ ಮಾತನಾಡಿ, ರಾಮನಗರದ ಮೆಡಿಕಲ್‌ ಕಾಲೇಜನ್ನು ವೈಯಕ್ತಿಕ ಲಾಭಕ್ಕೆ ಸ್ಥಳಾಂತರ ಮಾಡಲಾಗಿದೆ ಎಂಬ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಆರೋಪಕ್ಕೆ ಪ್ರತಿಕ್ರಿಯಿಸಿ ಅವರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

ಬಿಜೆಪಿ-ಜೆಡಿಎಸ್ ಒಟ್ಟಾದರೂ ಡಿ.ಕೆ.ಸುರೇಶ್ ಅವರನ್ನು ಸೋಲಿಸಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಆತ ಬಿಡದಿಯಲ್ಲಿ ರಿಯಲ್‌ ಎಸ್ಟೇಟ್‌ ಹೆಸರಲ್ಲಿ, ಮೆಗಾಸಿಟಿ ಮಾಡುತ್ತೇನೆಂದು ಜನರಿಗೆ ಟೋಪಿ ಹಾಕಿದ್ದಾಯ್ತು, ಆ ದಂಧೆ ಮಾಡಬೇಕಾದ ಅನಿವಾರ್ಯತೆಯಂತೂ ನಮಗಿಲ್ಲ. ಯೋಗೇಶ್ವರ್‌ ಹಿಂದೆಯೂ ಯಡಿಯೂರಪ್ಪ ಅವರನ್ನೂ ಬ್ಲಾಕ್‌ಮೇಲ್ ಮಾಡಿದರು. ಅದ್ಯಾವುದೋ ಸಿಡಿ ಇಟ್ಟುಕೊಂಡು ಸರ್ಕಾರವನ್ನೂ ಬೀಳಿಸಿದ್ದಾಯ್ತು. ಈಗ ಕಾಂಗ್ರೆಸ್‌ ಸರ್ಕಾರ ಕೆಡುವುತ್ತೇನೆ ಎನ್ನುತ್ತಿದ್ದಾರೆ. ಬರೀ ಸರ್ಕಾರ ಬೀಳಿಸೋ ಕೆಲಸ ಮಾತ್ರವೇ ಮಾಡೋದ? ಎಂದು ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಬದಲಿಗೆ ವರಿಷ್ಠರು ಸದ್ಯ ಒಪ್ಪಿಲ್ಲ : ಯತೀಂದ್ರ
ಪರಿಷತ್ತಿನಲ್ಲಿ ಬಸವರಾಜ ಹೊರಟ್ಟಿ ಬದಲಾವಣೆ ಇಲ್ಲ, ಈ ಕುರಿತು ಚರ್ಚೆ ಆಗಿಲ್ಲ: ಸಲೀಂ ಅಹ್ಮದ್