ಗೃಹ ಇಲಾಖೆ ಕಡ್ಲೆ ಮಿಠಾಯಿ ತಿನ್ನುತ್ತಿತ್ತಾ: ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್‌ ಆಕ್ರೋಶ

Published : Jan 23, 2023, 11:57 AM IST
ಗೃಹ ಇಲಾಖೆ ಕಡ್ಲೆ ಮಿಠಾಯಿ ತಿನ್ನುತ್ತಿತ್ತಾ: ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್‌ ಆಕ್ರೋಶ

ಸಾರಾಂಶ

‘ರಾಜ್ಯದಲ್ಲಿ ಕೋಮು ಕಲಹಕ್ಕಾಗಿ ಕೊಲೆಗಳನ್ನು ನಡೆಸುವ ಸಂಚು ರೂಪಿಸಲಾಗಿತ್ತು ಎಂಬ ಸಂಗತಿಯನ್ನು ಎನ್‌ಐಎ ಬಹಿರಂಗಪಡಿಸಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರೇ, ನಿಮ್ಮ ಗುಪ್ತಚರ ಇಲಾಖೆ ಕಡಲೆ ಮಿಠಾಯಿ ತಿನ್ನುತ್ತಿತ್ತೇ? ಅಥವಾ ಗುಪ್ತಚರ ಇಲಾಖೆ ಕೇವಲ ಕಾಂಗ್ರೆಸ್‌ ಚಲನವಲನ ಗಮನಿಸುವುದಕ್ಕೆ ಮಾತ್ರ ಸೀಮಿತವೇ’ ಎಂದು ರಾಜ್ಯ ಕಾಂಗ್ರೆಸ್‌ ಪ್ರಶ್ನಿಸಿದೆ. 

ಬೆಂಗಳೂರು (ಜ.23): ‘ರಾಜ್ಯದಲ್ಲಿ ಕೋಮು ಕಲಹಕ್ಕಾಗಿ ಕೊಲೆಗಳನ್ನು ನಡೆಸುವ ಸಂಚು ರೂಪಿಸಲಾಗಿತ್ತು ಎಂಬ ಸಂಗತಿಯನ್ನು ಎನ್‌ಐಎ ಬಹಿರಂಗಪಡಿಸಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರೇ, ನಿಮ್ಮ ಗುಪ್ತಚರ ಇಲಾಖೆ ಕಡಲೆ ಮಿಠಾಯಿ ತಿನ್ನುತ್ತಿತ್ತೇ? ಅಥವಾ ಗುಪ್ತಚರ ಇಲಾಖೆ ಕೇವಲ ಕಾಂಗ್ರೆಸ್‌ ಚಲನವಲನ ಗಮನಿಸುವುದಕ್ಕೆ ಮಾತ್ರ ಸೀಮಿತವೇ’ ಎಂದು ರಾಜ್ಯ ಕಾಂಗ್ರೆಸ್‌ ಪ್ರಶ್ನಿಸಿದೆ. ಈ ಬಗ್ಗೆ ಭಾನುವಾರ ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಕೋಮು ಕಲಹಕ್ಕಾಗಿ ಕೊಲೆಗಳನ್ನು ನಡೆಸುವ ಸಂಚು ರೂಪಿಸಲಾಗಿತ್ತು ಎಂಬ ಸಂಗತಿಯನ್ನು ಎನ್‌ಐಎ ಹೇಳಿದೆ. 

ಇದು ರಾಜ್ಯ ಗೃಹ ಇಲಾಖೆ ಹಾಗೂ ಗುಪ್ತಚರ ಇಲಾಖೆ ವೈಫಲ್ಯವಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದೆ. ರಾಜ್ಯ ಸರ್ಕಾರ ಕೋಮು ಗಲಭೆ ಸೃಷ್ಟಿಸುವುದರಲ್ಲಿ ಹಾಗೂ 40 ಪರ್ಸೆಂಟ್‌ ಕಮಿಷನ್‌ ಲೂಟಿ ಹೊಡೆಯುವುದರಲ್ಲಿ ಬ್ಯುಸಿಯಾಗಿದೆ. ಬಿಜೆಪಿಯ ಭ್ರಷ್ಟಾಚಾರಕ್ಕೆ ಭೂಮಿಯೇ ಬಾಯ್ತೆರೆಯುತ್ತಿದೆ. ಇಟ್ಟಮಡು ಮತ್ತಿತರ ಕಡೆ ರಸ್ತೆಗಳು ಬಾಯಿ ತೆಗೆದಿವೆ. ಭ್ರಷ್ಟ ಸರ್ಕಾರದ ಆಡಳಿತದಲ್ಲಿ ಎಲ್ಲೆಲ್ಲಿ ಏನೇನು ಆಗುತ್ತದೆಯೋ ಎಂದು ಜನ ಭೀತಿಯಲ್ಲಿ ಜೀವನ ನಡೆಸುವಂತಾಗಿದೆ ಎಂದು ಕಿಡಿಕಾರಿದೆ.

ಒಂದು ಪೈಸೆ ಲಂಚ ಪಡೆದಿದ್ದರೆ ರಾಜಕೀಯ ನಿವೃತ್ತಿ: ಸಿದ್ದು ಸವಾಲು

ಗೃಹ ಇಲಾಖೆ ಮಾನ ಹರಾಜು ಸಿಎಂ, ಆರಗ ಸಾಧನೆ: ‘ರಾಜ್ಯದ ಅತಿದೊಡ್ಡ ಹಗರಣದ ಕಿಂಗ್‌ಪಿನ್‌ ಪೊಲೀಸರನ್ನು ತಳ್ಳಿ ಪರಾರಿಯಾಗಿರುವುದು ಗೃಹ ಇಲಾಖೆ ನಿಷ್ಕಿ್ರಯತೆಗೆ ಹಿಡಿದ ಕೈಗನ್ನಡಿ. ಒಟ್ಟಿನಲ್ಲಿ ಗೃಹ ಇಲಾಖೆ ಮಾನವನ್ನು ಬೀದಿಯಲ್ಲಿ ಹರಾಜು ಹಾಕಿದ್ದೇ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಪೇಸಿಎಂ ಬಸವರಾಜ ಬೊಮ್ಮಾಯಿ ಸಾಧನೆ’ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೆವಾಲಾ ಕಿಡಿ ಕಾರಿದ್ದಾರೆ.

ಪಿಎಸ್‌ಐ ಹಗರಣದ ಪ್ರಮುಖ ಆರೋಪಿ ಆರ್‌.ಡಿ. ಪಾಟೀಲ್‌ ತಪ್ಪಿಸಿಕೊಂಡಿರುವ ಬಗ್ಗೆ ಕನ್ನಡಪ್ರಭ ಪ್ರಕಟಿಸಿರುವ ವರದಿಯನ್ನು ಟ್ವೀಟ್‌ ಮಾಡಿರುವ ಅವರು, ಇದೇನು ಸರ್ಕಾರವೇ ರಚಿಸಿದ ಷಡ್ಯಂತ್ರವೇ? ಪಿಎಸ್‌ಐ ಅಕ್ರಮದ ಕ್ರಿಮಿನಲ್‌ಗಳ ರಕ್ಷಣೆಗೆ ಸರ್ಕಾರವೇ ನಿಂತಿದೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೊಡ್ಡ ಸ್ಥಾನಕ್ಕೇರಿದವರು ಸಣ್ಣ ಮಾತನಾಡಬಾರದು: ಸಿದ್ದರಾಮಯ್ಯ ಹೇಳಿಕೆಗೆ ಸಂಸ್ಕಾರಯುತ ಪೆಟ್ಟು ನೀಡಿದ ಸಿಎಂ

ಇದೇ ವಿಷಯದ ಕುರಿತು ಕಾಂಗ್ರೆಸ್‌ ತನ್ನ ಅಧಿಕೃತ ಖಾತೆಯಲ್ಲೂ ಟ್ವೀಟ್‌ ಮಾಡಿದ್ದು, ಪಿಎಸ್‌ಐ ಹಗರಣದ ಆರೋಪಿ ಸಿಐಡಿ ಅಧಿಕಾರಿಗಳನ್ನೇ ತಳ್ಳಿ ಪರಾರಿಯಾಗುತ್ತಾನೆ. ಜತೆಗೆ ಫೇಸ್‌ಬುಕ್‌ ಲೈವ್‌ ಕೂಡ ಮಾಡುತ್ತಾನೆ. ಆದರೂ ಆತನನ್ನು ಪತ್ತೆ ಮಾಡಲು ಆಗಲಿಲ್ಲ ಯಾಕೆ? ಆರಗ ಜ್ಞಾನೇಂದ್ರ ಅವರೇ ಆರೋಪಿಯೊಬ್ಬ ಸರ್ಕಾರಕ್ಕೆ ಸವಾಲು ಹಾಕುತ್ತಿರುವುದು ನಾಚಿಕೆಗೇಡಲ್ಲವೇ? ಪೊಲೀಸರು ಈತನನ್ನು ಪತ್ತೆ ಮಾಡದಷ್ಟುಅಸಮರ್ಥರೇ ಅಥವಾ ಸರ್ಕಾರ ಆಡುತ್ತಿರುವ ನಾಟಕವೇ ಎಂದು ಸರಣಿ ಪ್ರಶ್ನೆಗಳನ್ನು ಎಸೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ