ಪ್ರಮಾದ ಮರುಕಳಿಸದಂತೆ ಕಾಂಗ್ರೆಸ್‌ನಲ್ಲಿ ತಂತ್ರ

Kannadaprabha News   | Asianet News
Published : Nov 16, 2020, 07:47 AM ISTUpdated : Nov 16, 2020, 09:48 AM IST
ಪ್ರಮಾದ ಮರುಕಳಿಸದಂತೆ ಕಾಂಗ್ರೆಸ್‌ನಲ್ಲಿ ತಂತ್ರ

ಸಾರಾಂಶ

ಬಸವ ಕಲ್ಯಾಣ ಹಾಗೂ ಮಸ್ಕಿ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್‌ ಜಾರಕಿಹೊಳಿ ಹಾಗೂ ಸತೀಶ್‌ ಜಾರಕಿಹೊಳಿ ಅವರಿಗೆ ಕಳೆದ ತಿಂಗಳ ಹಿಂದೆಯೇ ಹೊಣೆಗಾರಿಕೆ

ಬೆಂಗಳೂರು (ನ.16):  ಬಸವ ಕಲ್ಯಾಣ ಹಾಗೂ ಮಸ್ಕಿ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಕಳೆದ ಒಂದು ತಿಂಗಳ ಹಿಂದಿನಿಂದಲೇ ಕಾಂಗ್ರೆಸ್‌ ಪಕ್ಷವು ತೀವ್ರ ಸಿದ್ಧತೆ ಆರಂಭಿಸಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್‌ ಜಾರಕಿಹೊಳಿ ಹಾಗೂ ಸತೀಶ್‌ ಜಾರಕಿಹೊಳಿ ಅವರಿಗೆ ಕಳೆದ ತಿಂಗಳ ಹಿಂದೆಯೇ ಹೊಣೆಗಾರಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಉಭಯ ನಾಯಕರು ಕ್ಷೇತ್ರಗಳಲ್ಲಿ ಬೀಡುಬಿಟ್ಟು ಕಾರ್ಯತಂತ್ರ ಹೆಣೆಯುತ್ತಿದ್ದಾರೆ.

"

ಕಾಂಗ್ರೆಸ್‌ ಶಾಸಕರಾಗಿದ್ದ ಪ್ರತಾಪ್‌ಗೌಡ ಪಾಟೀಲ್‌ ಅನರ್ಹತೆ ಹಾಗೂ ಬಸವ ಕಲ್ಯಾಣ ಶಾಸಕರಾಗಿದ್ದ ಬಿ. ನಾರಾಯಣ ರಾವ್‌ ಅಕಾಲಿಕ ನಿಧನದಿಂದ ಉಭಯ ಕ್ಷೇತ್ರಗಳಿಗೆ ಉಪ ಚುನಾವಣೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮಸ್ಕಿ ಕ್ಷೇತ್ರದಲ್ಲಿ ಶತಾಯಗತಾಯ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಹೊಣೆಯನ್ನು ಸತೀಶ್‌ ಜಾರಕಿಹೊಳಿ ಹಾಗೂ ಬಸವ ಕಲ್ಯಾಣ ಕ್ಷೇತ್ರದ ಸಂಪೂರ್ಣ ಹೊಣೆಗಾರಿಕೆಯನ್ನು ಈಶ್ವರ್‌ ಖಂಡ್ರೆ ಅವರಿಗೆ ನೀಡಲಾಗಿದೆ.

ಉಪಚುನಾವಣೆ ದಿನಾಂಕ ಪ್ರಕಟವಾಗುವ ಮುನ್ನ ಮಸ್ಕಿಗೆ ದೀಪಾವಳಿ ಗಿಫ್ಟ್ ..

ಹೈಕಮಾಂಡ್‌ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸೂಚನೆಯಂತೆ ಈ ಇಬ್ಬರೂ ಕಳೆದ ಒಂದು ತಿಂಗಳ ಹಿಂದೆಯಿಂದಲೇ ಕ್ಷೇತ್ರದಲ್ಲಿ ಪಕ್ಷ ಸಂಘಟನೆ, ಅಭ್ಯರ್ಥಿ ಆಯ್ಕೆ ಸೇರಿದಂತೆ ಅಗತ್ಯ ಸಿದ್ಧತೆಗಳಲ್ಲಿ ತೊಡಗಿಸಿ ಕೊಂಡಿದ್ದಾರೆ. ಹೀಗಾಗಿ ಶಿರಾ, ಆರ್‌.ಆರ್‌.ನಗರ ಚುನಾವಣಾ ಪ್ರಚಾರದತ್ತ ಇಬ್ಬರೂ ಆಸಕ್ತಿ ತೋರಲಿಲ್ಲ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.

ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಅಂತಿಮ ಕ್ಷಣದಲ್ಲಿ ಅಭ್ಯರ್ಥಿ ಆಯ್ಕೆಯಿಂದ ಕಾಂಗ್ರೆಸ್‌ ಹಿನ್ನಡೆ ಉಂಟಾಯಿತು. ಹೀಗಾಗಿ ಮಸ್ಕಿ, ಬಸವ ಕಲ್ಯಾಣದಲ್ಲಿ ಅಂತಹ ತಪ್ಪು ಮರು ಕಳಿಸದಂತೆ ಸತೀಶ್‌ ಜಾರಕಿಹೊಳಿ, ಈಶ್ವರ್‌ ಖಂಡ್ರೆ ಅವರು ಮೊದಲೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕೆಪಿಸಿಸಿ ಅಧ್ಯಕ್ಷರು ಹಾಗೂ ವಿರೋಧಪಕ್ಷದ ನಾಯಕರ ಗಮನಕ್ಕೆ ತಂದಿದ್ದಾರೆ. ಬಣಗಳು ಉಂಟಾಗದಂತೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸಲು ಕಳೆದ ಒಂದು ತಿಂಗಳಿಂದ ಕೃಷಿ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಗಂಭೀರ ಪರಿಗಣನೆ

ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಹೈಕಮಾಂಡ್‌ ಒಂದು ತಿಂಗಳ ಹಿಂದೆಯೇ ಮಸ್ಕಿ ಉಸ್ತುವಾರಿ ನನಗೆ, ಬಸವ ಕಲ್ಯಾಣ ಉಸ್ತುವಾರಿ ಈಶ್ವರ್‌ ಖಂಡ್ರೆ ಅವರಿಗೆ ನೀಡಿದೆ. ಪಕ್ಷ ಸಂಘಟಿಸುವುದು, ಗೊಂದಲಗಳನ್ನು ನಿವಾರಿಸುವುದು, ಅಭ್ಯರ್ಥಿ ಆಯ್ಕೆ, ಚುನಾವಣೆ ಸಿದ್ಧತೆ ಸೇರಿದಂತೆ ಕಳೆದು ಒಂದು ತಿಂಗಳಿಂದ ಬಿಡುವಿಲ್ಲದೆ ಸಿದ್ಧತೆ ನಡೆಸುತ್ತಿದ್ದೇವೆ.

- ಸತೀಶ್‌ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್