ಸಿ.ಟಿ. ರವಿ, ಹೆಬ್ಬಾಳ್ಕರ್‌ ಕೇಸ್‌ ಪರಿಣಾಮ: ಸಭಾಪತಿ ಹೊರಟ್ಟಿ ಬದಲಿಗೆ ಕಾಂಗ್ರೆಸ್‌ ಪ್ಲ್ಯಾನ್‌!

Published : Jan 16, 2025, 06:00 AM IST
ಸಿ.ಟಿ. ರವಿ, ಹೆಬ್ಬಾಳ್ಕರ್‌ ಕೇಸ್‌ ಪರಿಣಾಮ: ಸಭಾಪತಿ ಹೊರಟ್ಟಿ ಬದಲಿಗೆ ಕಾಂಗ್ರೆಸ್‌ ಪ್ಲ್ಯಾನ್‌!

ಸಾರಾಂಶ

ಸಿ.ಟಿ.ರವಿ ಕೇಸ್ ಬಳಿಕ ಯೋಚನೆಗೆ ಬಲಬಂದಿದೆ. ಪ್ರಸ್ತುತ ವಿಧಾನ ಪರಿಷತ್ತಿನ ಒಟ್ಟು 75 ಸದಸ್ಯರ ಪೈಕಿ ಸದ್ಯ ಕಾಂಗ್ರೆಸ್ 33, ಬಿಜೆಪಿ 29, ಜೆಡಿಎಸ್‌ 8 ಸದಸ್ಯರನ್ನು ಹೊಂದಿದೆ. ಇದರ ಜೊತೆಗೆ ಒಬ್ಬರು ಪಕ್ಷೇತರ ಹಾಗೂ ಒಬ್ಬರು ಸಭಾಪತಿಯಾಗಿದ್ದಾರೆ. 3 ಸ್ಥಾನಗಳು ಖಾಲಿ ಇವೆ. 

ಬೆಂಗಳೂರು(ಡಿ.16): ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರಕರಣದ ಸಿಐಡಿ ತನಿಖೆ ವಿಷಯದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ತಾಳಿರುವ ನಿಲುವಿಗೆ ಅಸಮಾಧಾನಗೊಂಡಿರುವ ಕಾಂಗ್ರೆಸ್ ಪಕ್ಷ, ಇದೀಗ ಸಭಾಪತಿಗಳನ್ನೇ ಬದಲಿಸುವ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. 

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಬಲದಿಂದಾಗಿ ಬಸವರಾಜ ಹೊರಟ್ಟಿ ಸಭಾಪತಿ ಹುದ್ದೆಯಲ್ಲಿದ್ದಾರೆ. ಸದನದ ಅತ್ಯಂತ ಹಿರಿಯ ಸದಸ್ಯರಾಗಿರುವ ಹೊರಟ್ಟಿ ಬಗ್ಗೆ ಎಲ್ಲರಿಗೂ ಗೌರವ ಇದೆ. ಹಾಗಾಗಿ ಒಂದು ರೀತಿಯಲ್ಲಿ ಎಲ್ಲ ಪಕ್ಷಗಳ ಸಹಮತದ ಮೇರೆಗೆ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಒಂದು ರಾಜಕೀಯ ಪಕ್ಷವಾಗಿ ಕಾಂಗ್ರೆಸ್ ಬೇರೆ ಪಕ್ಷದ ಜೊತೆ ಗುರುತಿಸಿ ಕೊಂಡಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಲ್ಲಿ ಮುಂದುವರೆಸುವ ಬದಲು ತಮ್ಮ ಪಕ್ಷದವರೇ ಆ ಸ್ಥಾನದಲ್ಲಿರಲಿ ಎಂಬ ಯೋಚನೆ ಆರಂಭಿಸಿದೆ. 

ಸಿಟಿ ರವಿ-ಹೆಬ್ಬಾಳ್ಕರ್‌ ಅವಾಚ್ಯ ಶಬ್ದ ಪ್ರಕರಣ; ಸಿಐಡಿ ತನಿಖೆಗೆ ಆಕ್ಷೇಪ ಎತ್ತಿದ್ದ ಹೊರಟ್ಟಿಗೆ ಗೃಹ ಸಚಿ ತಿರುಗೇಟು!

ಸಿ.ಟಿ.ರವಿ ಕೇಸ್ ಬಳಿಕ ಯೋಚನೆಗೆ ಬಲಬಂದಿದೆ. ಪ್ರಸ್ತುತ ವಿಧಾನ ಪರಿಷತ್ತಿನ ಒಟ್ಟು 75 ಸದಸ್ಯರ ಪೈಕಿ ಸದ್ಯ ಕಾಂಗ್ರೆಸ್ 33, ಬಿಜೆಪಿ 29, ಜೆಡಿಎಸ್‌ 8 ಸದಸ್ಯರನ್ನು ಹೊಂದಿದೆ. ಇದರ ಜೊತೆಗೆ ಒಬ್ಬರು ಪಕ್ಷೇತರ ಹಾಗೂ ಒಬ್ಬರು ಸಭಾಪತಿಯಾಗಿದ್ದಾರೆ. 3 ಸ್ಥಾನಗಳು ಖಾಲಿ ಇವೆ. 

ಬಿಜೆಪಿ-ಜೆಡಿಎಸ್‌ಗಿದೆ ಬಲ: 

ಸದ್ಯ ಸಭಾಪತಿ ಹೊರಟ್ಟಿ ಸೇರಿ ಬಿಜೆಪಿ-ಜೆಡಿಎಸ್ ಮೈತ್ರಿ ಬಲ 38 ಇರುವುದರಿಂದ ಸಭಾಪತಿ ಸ್ಥಾನ ಬದಲಿ ಸಲು ಸಾಧ್ಯವಿಲ್ಲ. ಈ ತಿಂಗಳು 27ರಂದು ಜೆಡಿ ಎಸ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಅವರ ಸದಸ್ಯತ್ವ ಅವಧಿ ಮುಗಿಯಲಿದ್ದು, ನಂತರ ಮೈತ್ರಿ ಬಲ 37ಕ್ಕೆ ಇಳಿಯಲಿದೆ. 

ಸಿ.ಟಿ.ರವಿ ಕೇಸಲ್ಲಿ ನನ್ನ ತೀರ್ಪೇ ಅಂತಿಮ, ಸಿಐಡಿ ಏಕೆ?: ಪರಂಗೆ ಹೊರಟ್ಟಿ ಪತ್ರ

ಹಾಲಿ ಖಾಲಿ ಇರುವ ಮೂರು ನಾಮನಿರ್ದೇಶನ ಸ್ಥಾನ ಹಾಗೂ ತಿಪ್ಪೇಸ್ವಾಮಿ ಅವರಿಂದ ಖಾಲಿಯಾಗ ಲಿರುವ ಸ್ಥಾನಕ್ಕೆ ಸರ್ಕಾರ ನಾಮಕರಣ ಮಾಡಿದರೆ ಕಾಂಗ್ರೆಸ್ ಬಲ 37ಕ್ಕೆ ಏರಲಿದೆ. ಜತೆಗೆ ಒಬ್ಬ ಪಕ್ಷೇತರ ಸದಸ್ಯರ ಬೆಂಬಲ ಪಡೆದರೆ ಮಾತ್ರ ಬಹುಮತ 38 ಏರಿಕೆಯಾಗಿ ಸಭಾಪತಿ ಸ್ಥಾನಕ್ಕೆ ಹೊಸಬರನ್ನು ಆಯ್ಕೆ ಮಾಡಬಹುದು.

ಬದಲು ಹೇಗೆ? 

* ಸದ್ಯ ಮೇಲ್ಮನೇಲಿ ಬಿಜೆಪಿ ಮೈತ್ರಿಗಿದೆ ಬಹುಮತ 
* ಈ ಪರಿಸ್ಥಿತಿಯಲ್ಲಿ ಹೊರಟ್ಟಿ ಬದಲಾವಣೆ ಅಸಾಧ್ಯ . 4 ಹೊಸ ಸದಸ್ಯರ ನೇಮಕ ಬಳಿ ಸ್ಪಷ್ಟ ಚಿತ್ರಣ . 
* ಲಖನ್ ಜಾರಕಿಹೊಳಿ ಬೆಂಬಲಿಸಿದ್ರೆ ಸಭಾಪತಿ ಬದಲಾವಣೆ ಸುಲಭ 
* ಕಾಂಗ್ರೆಸ್ ವಲಯದಲ್ಲಿ ಈ ಬಗ್ಗೆ ಗಂಭೀರ ಚಿಂತನೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ