Karnataka Politics: ಬಿಜೆಪಿ ವಿರುದ್ಧ ಪಾದಯಾತ್ರೆಗೆ ಕಾಂಗ್ರೆಸ್‌ ಸಿದ್ಧತೆ

Published : May 27, 2022, 06:13 AM IST
Karnataka Politics: ಬಿಜೆಪಿ ವಿರುದ್ಧ ಪಾದಯಾತ್ರೆಗೆ ಕಾಂಗ್ರೆಸ್‌ ಸಿದ್ಧತೆ

ಸಾರಾಂಶ

*  ಆಗಸ್ಟಲ್ಲಿ ಮತ್ತೆ ಕಾಂಗ್ರೆಸ್‌ ಪಾದಯಾತ್ರೆ *  ಬಿಜೆಪಿ ವೈಫಲ್ಯಗಳ ವಿರುದ್ಧ ಸಮರ *  ಜೂ.1ರಂದು ಸುರ್ಜೇವಾಲ ಚರ್ಚೆ  

ಬೆಂಗಳೂರು(ಮೇ.27): ಬಿಜೆಪಿ ವೈಫಲ್ಯಗಳ ವಿರುದ್ಧ ರಾಜಧಾನಿ ಬೆಂಗಳೂರಿನಲ್ಲಿ ಆಗಸ್ಟ್‌ 9ರಂದು ರಾಜ್ಯ ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಳ್ಳಲಿರುವ 75 ಕಿ.ಮೀ. ಉದ್ದದ ಪಾದಯಾತ್ರೆ ಹಾಗೂ ನವ ಸಂಕಲ್ಪ ಶಿಬಿರದಲ್ಲಿ ಚರ್ಚಿಸಿದ ವಿಚಾರಗಳ ಅನುಷ್ಠಾನದ ಕುರಿತು ಚರ್ಚಿಸಲು ಜೂನ್‌ 1ರಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಪಾದಯಾತ್ರೆ ಕುರಿತು ಕುರಿತು ಚರ್ಚಿಸಲು ಜೂನ್‌ ಎರಡನೇ ವಾರದಲ್ಲಿ ಬೆಂಗಳೂರಿನಲ್ಲಿ ಕಾರ್ಯಾಗಾರ ಏರ್ಪಡಿಸಲಾಗಿದೆ. ಆ ಕಾರ್ಯಾಗಾರದ ಸಿದ್ಧತೆಗಳು, ಮುಂದಿನ ಒಂದು ವರ್ಷದಲ್ಲಿ ಪಕ್ಷ ಕೈಗೊಳ್ಳಬೇಕಿರುವ ಕಾರ್ಯಕ್ರಮಗಳು, ಬಿಬಿಎಂಪಿ ಚುನಾವಣೆ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳ ಸಿದ್ಧತೆಗಳ ಕುರಿತು ರಾಜ್ಯ ನಾಯಕರೊಂದಿಗೆ ಸುರ್ಜೇವಾಲಾ ಜೂ.1 ಹಾಗೂ 2ರಂದು ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

'ಡಿ.ಕೆ.ಶಿವಕುಮಾರ್‌ ಶೀಘ್ರದಲ್ಲೇ ಜೈಲಿಗೆ ಹೋಗ್ತಾರೆ'

ಇದೇ ವೇಳೆ ಎಐಸಿಸಿ ನವ ಸಂಕಲ್ಪ ಶಿಬಿರದಲ್ಲಿ ಕಾಂಗ್ರೆಸ್‌ನ ಪುನಶ್ಚೇತನಕ್ಕೆ ಕೈಗೊಳ್ಳಬೇಕಿರುವ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಗಿದೆ. ಇದನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸುವ ಕುರಿತು ರಾಜ್ಯಕ್ಕೆ ಆಗಮಿಸುತ್ತಿದ್ದೇನೆ. ತನ್ಮೂಲಕ ಭಾರತ ಕಲ್ಪನೆಯನ್ನು ಮರಳಿ ಪಡೆಯಲು ನಾವೆಲ್ಲಾ ಸಜ್ಜಾಗಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರಿಗೆ ಸುರ್ಜೇವಾಲಾ ಗುರುವಾರ ಸಂದೇಶ ಕಳುಹಿಸಿದ್ದಾರೆ.

75 ಕಿ.ಮೀ. ಪಾದಯಾತ್ರೆ

ಇನ್ನು 75 ಕಿ.ಮೀ. ಉದ್ದದ ಪಾದಯಾತ್ರೆಯಲ್ಲಿ ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು ಬ್ರ್ಯಾಂಡ್‌ ಬೆಂಗಳೂರನ್ನು ಹಾಳು ಮಾಡಿರುವುದು, ಶೇ.40 ಕಮಿಷನ್‌, ಬಿಜೆಪಿಯ ಕರ್ಮಕಾಂಡಗಳು, ತ್ಯಾಜ್ಯ, ರಸ್ತೆ ಗುಂಡಿ, ಕುಡಿಯುವ ಸಮಸ್ಯೆ ಸೇರಿದಂತೆ ನಗರದಲ್ಲಿ ಉಂಟಾಗಿರುವ ಸಮಸ್ಯೆಗಳ ಕುರಿತು ನಗರದ ಜನತೆಯ ಗಮನ ಸೆಳೆಯಲು ಕಾಂಗ್ರೆಸ್‌ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್