ಅದ್ಧೂರಿ ಸಿದ್ದರಾಮೋತ್ಸವಕ್ಕೆ ದಾವಣಗೆರೆ ಸಜ್ಜು: 8 ಲಕ್ಷ ಜನ ಭಾಗಿ ಸಾಧ್ಯತೆ

Published : Aug 03, 2022, 02:00 AM IST
ಅದ್ಧೂರಿ ಸಿದ್ದರಾಮೋತ್ಸವಕ್ಕೆ ದಾವಣಗೆರೆ ಸಜ್ಜು: 8 ಲಕ್ಷ ಜನ ಭಾಗಿ ಸಾಧ್ಯತೆ

ಸಾರಾಂಶ

ಚಲನಚಿತ್ರ ಸಂಗೀತ ನಿರ್ದೇಶಕ ಹಂಸಲೇಖ, ಸಾಧು ಕೋಕಿಲ, ಸಂಗೀತ ಕಟ್ಟಿ ಅವರಿಂದ ಸಂಗೀತ ಕಾರ್ಯಕ್ರಮದ ಮೂಲಕ ಸಮಾರಂಭ 

ದಾವಣಗೆರೆ(ಆ.03):  ಸಿದ್ದರಾಮಯ್ಯನವರ 75ನೇ ಜನ್ಮದಿನದ ಅಮೃತ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ಇಂದು(ಬುಧವಾರ) ಬೆಳಗ್ಗೆ 10 ಗಂಟೆಗೆ ಚಲನಚಿತ್ರ ಸಂಗೀತ ನಿರ್ದೇಶಕ ಹಂಸಲೇಖ, ಸಾಧು ಕೋಕಿಲ, ಸಂಗೀತ ಕಟ್ಟಿ ಅವರಿಂದ ಸಂಗೀತ ಕಾರ್ಯಕ್ರಮದ ಮೂಲಕ ಸಮಾರಂಭ ಶುರುವಾಗಲಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಮಾಜಿ ಸಚಿವ ಎಚ್‌.ಎಂ.ರೇವಣ್ಣ, ಸುಮಾರು ಆರೇಳು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಮಧ್ಯಾಹ್ನ 1ಗಂಟೆಗೆ ಎಐಸಿಸಿ ಮುಖಂಡ ರಾಹುಲ್‌ ಗಾಂಧಿ ವೇದಿಕೆಗೆ ಆಗಮಿಸಲಿದ್ದಾರೆ. ಬೀದರ್‌ನಿಂದ ಚಾಮರಾಜನಗರದವರೆಗೆ ನಾಲ್ಕೂ ದಿಕ್ಕಿನಿಂದ ವಾಹನಗಳು ಇಲ್ಲಿಗೆ ಬರಲಿವೆ. ಸುಮಾರು 300 ಎಕರೆ ಪ್ರದೇಶದಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ. ಬಸ್ಸು, ಕ್ರೂಸರ್‌, ಸ್ವಂತ ವಾಹನ, ದ್ವಿಚಕ್ರ ವಾಹನಗಳಲ್ಲಿ ಬರುವವರಿಗೆ ಪ್ರತ್ಯೇಕ ಸ್ಥಳ ನಿಗದಿಪಡಿಸಲಾಗಿದೆ. ಸಮಾರಂಭಕ್ಕೆ ಬಂದ ಲಕ್ಷಾಂತರ ಜನರಿಗೆ ಮಧ್ಯಾಹ್ನದ ಭೋಜನ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಸುಮಾರು 50 ಎಕರೆ ವಿಸ್ತಾರದ ಪ್ರದೇಶದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ದೊಡ್ಡ ಪ್ರಮಾಣದ ಪೆಂಡಾಲ್‌ ಅಳವಡಿಸಿದ್ದು, 4 ಲಕ್ಷ ಕುರ್ಚಿಗಳನ್ನು ಹಾಕಲಾಗಿದೆ. 2500 ಬಾಣಸಿಗರು ಅಡುಗೆ ಸಿದ್ಧತೆಯಲ್ಲಿ ತೊಡಗಿದ್ದಾರೆ. 6 ಲಕ್ಷ ಮೈಸೂರು ಪಾಕ್‌ ಸಿದ್ಧವಾಗಿದೆ. ಬಫೆ ವ್ಯವಸ್ಥೆ ಮಾಡಲಾಗಿದ್ದು, ಪಲಾವ್‌, ಮೊಸರನ್ನ, ಸಿಹಿ ಊಟದ ವ್ಯವಸ್ಥೆಯನ್ನು 400 ಕೌಂಟರ್‌ನಲ್ಲಿ ಮಾಡಲಾಗಿದೆ. ಬಂದವರಿಗೆ ಊಟ ಬಡಿಸಲು ಸ್ವಯಂ ಸೇವಕರ ವ್ಯವಸ್ಥೆ ಮಾಡಿದೆ. ಯಾವುದೇ ಗೊಂದಲ, ಗದ್ದಲ ಇಲ್ಲದೇ, ಸಮರ್ಪಕವಾಗಿ ಯುವಕರ ಪಡೆಯನ್ನು ಭೋಜನ ವ್ಯವಸ್ಥೆ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಿದ್ದರಾಮೋತ್ಸವಕ್ಕೆ ತೆರಳುತ್ತಿದ್ದ ವಾಹನ ಅಪಘಾತ, ಓರ್ವ ಸಾವು, ಸಿದ್ದರಾಮಯ್ಯ ಸಂತಾಪ

ಭರ್ಜರಿ ಸಿದ್ಧತೆ

8 ಲಕ್ಷ-ರಾಜ್ಯದ ವಿವಿಧೆಡೆಯಿಂದ ಆಗಮಿಸಲಿರುವ ಜನರು
8000-ಅಭಿಮಾನಿಗಳನ್ನು ಕರೆ ತರಲು ಮಾಡಿರುವ ಬಸ್ಸುಗಳು
35000ಕ್ಕೂ ಅಧಿಕ ವಾಹನಗಳು ದಾವಣಗೆರೆಯತ್ತ
6 ಲಕ್ಷ-ಮೈಸೂರು ಪಾಕ್‌
2500-ಬಾಣಸಿಗರಿಂದ ಮೊಸರನ್ನ, ಪಲಾವ್‌ ತಯಾರಿ
400-ಕೌಂಟರ್‌ಗಳಲ್ಲಿ ಬಫೆ ವ್ಯವಸ್ಥೆಯಲ್ಲಿ ಊಟ
500 ಎಕರೆ ಪ್ರದೇಶದಲ್ಲಿ ವಿಶಾಲ ವಾಟರ್‌ ಪೆಂಡಾಲ್‌ ಅಳವಡಿಕೆ
4 ಲಕ್ಷ ಕುರ್ಚಿಗಳ ವ್ಯವಸ್ಥೆ
300- ಸ್ವಯಂ ಸೇವಕರನ್ನು ವೇದಿಕೆ ಆವರಣದಲ್ಲಿ ನಿಯೋಜನೆ
33 ಎಲ್‌ಇಡಿ ಪರದೆಗಳ ಅಳವಡಿಕೆ
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!