ಕರ್ನಾಟಕ ರೀತಿ ಕಾಶ್ಮೀರದಲ್ಲೂ ಕಾಂಗ್ರೆಸ್‌ ಗ್ಯಾರಂಟಿ ಭರವಸೆ: ಮತದಾರರನ್ನ ಸೆಳೆಯಲು ಉಚಿತ ಯೋಜನಗೆಳು..!

Published : Sep 12, 2024, 04:57 AM IST
ಕರ್ನಾಟಕ ರೀತಿ ಕಾಶ್ಮೀರದಲ್ಲೂ ಕಾಂಗ್ರೆಸ್‌ ಗ್ಯಾರಂಟಿ ಭರವಸೆ: ಮತದಾರರನ್ನ ಸೆಳೆಯಲು ಉಚಿತ ಯೋಜನಗೆಳು..!

ಸಾರಾಂಶ

ಕಾಂಗ್ರೆಸ್‌ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮೈತ್ರಿಯಿಂದ ಜನರಿಗೆ 5 ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ' ಎಂದು ಹೇಳುವ ಮೂಲಕ ಮತದಾರರ ಗಮನ ಸೆಳೆಯಲು ಪ್ರಯತ್ನಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 

ಅನಂತನಾಗ್(ಜಮ್ಮುಕಾಶ್ಮೀರ)(ಸೆ.12): ಮುಂದಿನ ತಿಂಗಳು ನಡೆಯಲಿರುವ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಕರ್ನಾಟಕ ಮಾದರಿಯಲ್ಲಿಯೇ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಮಹಿಳೆಯ ರಿಗೆ ಮಾಸಿಕ 3 ಸಾವಿರ ರು. ಹಣಕಾಸಿನ ನೆರವು, 11 ಕೇಜಿ ಪಡಿತರ ಸೇರಿದಂತೆ 5 ಭರವಸೆಗಳನ್ನು ನೀಡಿದೆ. 

ದಕ್ಷಿಣ ಕಾಶ್ಮೀರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಗ್ಯಾರಂಟಿ ಭರವಸೆಗಳನ್ನು ಪ್ರಕಟಿಸಿದರು. 'ಕಾಂಗ್ರೆಸ್‌ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮೈತ್ರಿಯಿಂದ ಜನರಿಗೆ 5 ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ' ಎಂದು ಹೇಳುವ ಮೂಲಕ ಮತದಾರರ ಗಮನ ಸೆಳೆಯಲು ಪ್ರಯತ್ನಿಸಿದರು.

ಕಾಶ್ಮೀರದಲ್ಲಿ ಕರ್ನಾಟಕದ ರೀತಿ ಉಚಿತ ಭರವಸೆಗಳ ಬಿಜೆಪಿ ಪ್ರಣಾಳಿಕೆ ರಿಲೀಸ್‌..!

ಬಿಜೆಪಿ ಕೂಡ ಜಮ್ಮು- ಕಾಶ್ಮೀರ ಜನತೆಗೆ ಇಂಥದ್ದೇ ಉಚಿತ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಿತ್ತು. 

5 ಗ್ಯಾರಂಟಿಗಳು ಏನು? 

1 ಪ್ರತಿ ಕುಟುಂಬದ ಹಿರಿಯ ಮಹಿಳೆಗೆ ಮಾಸಿಕ 3 ಸಾವಿರ ರು. ಆರ್ಥಿಕ ನೆರವು 
2 ಪ್ರತಿ ಕುಟುಂಬಕ್ಕೆ ತಿಂಗಳಿಗೆ 11 .ಕೆ.ಜಿ ಧಾನ್ಯ ನೀಡುವ 
3 ಪಡಿತರ ಸ್ಟೀಂ ಮರುಜಾರಿ 3 ಮಹಿಳಾ ಉದ್ಯಮಿಗಳಿಗೆ 5 ಲಕ್ಷ ರು. ರವರೆಗೆ ಬಡ್ಡಿ ರಹಿತ ಸಾಲ 
4 ಪ್ರತಿ ಕುಟುಂಬಕ್ಕೆ 25 ಲಕ್ಷ ರು. ವರೆಗಿನ ಆರೋಗ್ಯ ವಿಮೆ 
5 ಮನಮೋಹನ ಸಿಂಗ್ ಕಾಲದಲ್ಲಿ ನೀಡಿದ್ದ ಕಾಶ್ಮೀರಿ 5 ಪಂಡಿತರಿಗೆ ಪುನರ್ವಸತಿಯ ಭರವಸೆ ಈಡೇರಿಸುವಿಕೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!