Gadag: ಕೇಂದ್ರ ಸರ್ಕಾರದ ಕುಟಿಲ ನೀತಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Published : Feb 07, 2023, 12:22 PM ISTUpdated : Feb 07, 2023, 12:23 PM IST
Gadag: ಕೇಂದ್ರ ಸರ್ಕಾರದ ಕುಟಿಲ ನೀತಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

ಸಾರಾಂಶ

ದೇಶದ ಬಡ ಜನರು ತಮ್ಮ ನಿತ್ಯದ ಉಳಿತಾಯವನ್ನು ಹೂಡಿಕೆ ಮಾಡಿರುವ ಎಲ್‌ಐಸಿಯ ಹಣವನ್ನು ಸರ್ಕಾರ ಅದಾನಿ ಕಂಪನಿಯಲ್ಲಿ ಹೂಡಿಕೆ ಮಾಡಿದೆ ಹಾಗೂ ಸರ್ಕಾರಿ ಸ್ವಾಮ್ಯದ ಎಸ್‌ಬಿಐನಿಂದ ಸಾಲ ವಿತರಿಸಿದ್ದು, ಅದಾನಿ ಕಂಪನಿ ಕುಸಿಯುತ್ತಿದ್ದು, ಈ ಎರಡೂ ಸಂಸ್ಥೆಗಳು ಸಹ ಆತಂಕದಲ್ಲಿವೆ. ಕೇಂದ್ರ ಸರ್ಕಾರದ ಈ ಕುಟಿಲ ನೀತಿಯನ್ನು ಜನತೆ ಗಮನಿಸುತ್ತಿದ್ದು, ಇದಕ್ಕೆ ಮುಂಬರುವ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡುತ್ತಾರೆ ಎಂದು ಶಾಸಕ ಎಚ್‌.ಕೆ. ಪಾಟೀಲ ಆರೋಪಿಸಿದರು.

ಗದಗ (ಫೆ.7) : ದೇಶದ ಬಡ ಜನರು ತಮ್ಮ ನಿತ್ಯದ ಉಳಿತಾಯವನ್ನು ಹೂಡಿಕೆ ಮಾಡಿರುವ ಎಲ್‌ಐಸಿಯ ಹಣವನ್ನು ಸರ್ಕಾರ ಅದಾನಿ ಕಂಪನಿಯಲ್ಲಿ ಹೂಡಿಕೆ ಮಾಡಿದೆ ಹಾಗೂ ಸರ್ಕಾರಿ ಸ್ವಾಮ್ಯದ ಎಸ್‌ಬಿಐನಿಂದ ಸಾಲ ವಿತರಿಸಿದ್ದು, ಅದಾನಿ ಕಂಪನಿ ಕುಸಿಯುತ್ತಿದ್ದು, ಈ ಎರಡೂ ಸಂಸ್ಥೆಗಳು ಸಹ ಆತಂಕದಲ್ಲಿವೆ. ಕೇಂದ್ರ ಸರ್ಕಾರದ ಈ ಕುಟಿಲ ನೀತಿಯನ್ನು ಜನತೆ ಗಮನಿಸುತ್ತಿದ್ದು, ಇದಕ್ಕೆ ಮುಂಬರುವ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡುತ್ತಾರೆ ಎಂದು ಶಾಸಕ ಎಚ್‌.ಕೆ. ಪಾಟೀಲ ಆರೋಪಿಸಿದರು.

ಅವರು ಸೋಮವಾರ ಬೆಟಗೇರಿ ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ಎಸ್‌ಬಿಐ ಮತ್ತು ಕೆನರಾ ಬ್ಯಾಂಕ್‌ಗಳ ಮುಂದೆ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಹೆಚ್.ಕೆ. ಪಾಟೀಲರಿಗೆ ಮನೆ ಇಲ್ವಾ- ಕೃಷಿ ವಿಜ್ಞಾನ ಕೇಂದ್ರದಲ್ಯಾಕೆ ಮಲ್ಕೊತಾರೆ : ಅನಿಲ್ ಮೆಣಸಿನಕಾಯಿ ಪ್ರಶ್ನೆ

ತಮ್ಮ ಆಪ್ತರಿಗೆ ಮತ್ತು ಕೆಲವೇ ಕೆಲವು ಕೋಟ್ಯಾಧಿಪತಿಗಳಿಗೆ ಲಾಭ ಮಾಡುವ ಉದ್ದೇಶದಿಂದ ಎಲ್‌ಐಸಿ ಮತ್ತು ಎಸ್‌ಬಿಐ ನಂತಹ ಸರ್ಕಾರಿ ಸಂಸ್ಥೆಗಳಲ್ಲಿ ದೇಶದ ಜನರ ಉಳಿತಾಯದ ಹಣವನ್ನು ಅದಾನಿ ಸಮೂಹದಂತಹ ಸಂಸ್ಥೆಗಳಲ್ಲಿ ಹೂಡಿಕೆ ಮಾಡಲು ಅವಕಾಶ ಕೊಟ್ಟಿದ್ದಾರೆ. ಇದು ದೇಶದ ಹಾಗೂ ಜನಸಾಮಾನ್ಯರಿಗೆ ಮಾಡಿರುವ ದ್ರೋಹವಾಗಿದೆ ಎಂದ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ, ಮಾಜಿ ಶಾಸಕ ಜಿ.ಎಸ್‌. ಪಾಟೀಲ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ನಿರಂತರವಾಗಿ ಬಡವರನ್ನು ಒಂದಿಲ್ಲೊಂದು ರೀತಿಯಲ್ಲಿ ತುಳಿತಕ್ಕೆ ಒಳಪಡಿಸುತ್ತಿದೆ. ಇದರಿಂದಾಗಿ ದೇಶದ ಬಡ ಮತ್ತು ಮಧ್ಯಮ ವರ್ಗದ ಜನರು ರೋಸಿ ಹೋಗಿದ್ದಾರೆ. ಇದೊಂದು ಉಳ್ಳವರ ಪರವಾದ ಸರ್ಕಾರ, ಬಡವರ ಬಗ್ಗೆ ಇವರಿಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದ ಅವರು, ಕೇಂದ್ರದ ಜನವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.

Assembly election:ಬಿಜೆಪಿಯ ಕುತಂತ್ರ ಬಯಲಿಗೆಳೆಯುತ್ತೇನೆ: ಹೊಸ ಪಕ್ಷ ಘೋಷಣೆ ಬೆನ್ನಲ್ಲೇ ಬಾಂಬ್‌ ಹಾಕಿದ ರೆಡ್ಡಿ

ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಜಿ.ಎಸ್‌. ಗಡ್ಡದೇವರಮಠ, ಡಿ.ಆರ್‌. ಪಾಟೀಲ, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಅಶೋಕ ಮಂದಾಲಿ, ಜಿಪಂ ಮಾಜಿ ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ, ವಾಸಣ್ಣ ಕುರುಡಗಿ, ವೀರಯ್ಯ ಸೋಮನಕಟ್ಟಿಮಠ, ಉಮರ್‌ಫಾರೂಕ್‌ ಹುಬ್ಬಳ್ಳಿ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ