ಮತದಾರರಿಗೆ ಕಾಂಗ್ರೆಸ್‌ ವಂಚನೆ ಸಾಬೀತು: ಮಂಗಳೂರು ದಕ್ಷಿಣ ಬಿಜೆಪಿ ಶಾಸಕ ವೇದವ್ಯಾಸ್‌ ಕಾಮತ್‌

Published : Jun 10, 2023, 11:00 PM IST
ಮತದಾರರಿಗೆ ಕಾಂಗ್ರೆಸ್‌ ವಂಚನೆ ಸಾಬೀತು: ಮಂಗಳೂರು ದಕ್ಷಿಣ ಬಿಜೆಪಿ ಶಾಸಕ ವೇದವ್ಯಾಸ್‌ ಕಾಮತ್‌

ಸಾರಾಂಶ

ಅಧಿಕಾರ ಹಿಡಿಯುವ ಒಂದೇ ಉದ್ದೇಶದಿಂದ ಮತದಾರರನ್ನು ವಂಚಿಸಿರುವುದು ಸ್ವತಃ ಸಚಿವರ ಹೇಳಿಕೆಯಿಂದ ಬಹಿರಂಗವಾಗಿದೆ. ಈ ಬಗ್ಗೆ ಕಾಂಗ್ರೆಸ್‌ ರಾಜ್ಯದ ಜನತೆಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ ವೇದವ್ಯಾಸ್‌ ಕಾಮತ್‌

ಮಂಗಳೂರು(ಜೂ.10):  ಗ್ಯಾರಂಟಿ ಘೋಷಣೆ ಅಗ್ಗದ ಜನಪ್ರಿಯತೆ ಎಂದು ಸ್ವತಃ ಕಾಂಗ್ರೆಸ್‌ ಮುಖಂಡ, ಕೃಷಿ ಸಚಿವ ಚೆಲುವರಾಯ ಸ್ವಾಮಿಯೇ ಹೇಳಿರುವುದು ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಮತದಾರರಿಗೆ ವಂಚಿಸಿರುವುದು ಸಾಬೀತಾಗಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ಹೇಳಿದ್ದಾರೆ.

‘ಚುನಾವಣೆಯ ಸಂದರ್ಭ ಗೆಲುವೇ ಅನಿವಾರ್ಯ. ಫಲಿತಾಂಶಕ್ಕಾಗಿ ಇವೆಲ್ಲವನ್ನೂ ಮಾಡಬೇಕು. ಇಲ್ಲದ್ದು, ಬಲ್ಲದ್ದು ಎಲ್ಲವನ್ನೂ ಮಾಡಬೇಕು. ಕೆಲವನ್ನು ಅನಿವಾರ್ಯವಾಗಿ ಒಪ್ಪಿಕೊಳ್ಳಬೇಕು...’ ಎಂದು ಹೇಳುವ ಮೂಲಕ ಸಚಿವರು ಕಾಂಗ್ರೆಸ್‌ ಮನಸ್ಥಿತಿಯನ್ನು ಬಹಿರಂಗಪಡಿಸಿದ್ದಾರೆ. ಅಧಿಕಾರ ಹಿಡಿಯುವ ಒಂದೇ ಉದ್ದೇಶದಿಂದ ಮತದಾರರನ್ನು ವಂಚಿಸಿರುವುದು ಸ್ವತಃ ಸಚಿವರ ಹೇಳಿಕೆಯಿಂದ ಬಹಿರಂಗವಾಗಿದೆ. ಈ ಬಗ್ಗೆ ಕಾಂಗ್ರೆಸ್‌ ರಾಜ್ಯದ ಜನತೆಯ ಕ್ಷಮೆ ಕೇಳಬೇಕು ಎಂದು ವೇದವ್ಯಾಸ್‌ ಕಾಮತ್‌ ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ್ದ ಶಾಸಕ ಪೂಂಜಾಗೆ ರಿಲೀಫ್, ತನಿಖೆಗೆ ಹೈಕೋರ್ಟ್ ತಡೆ!

ಗ್ಯಾರಂಟಿ ಘೋಷಣೆ ಚುನಾವಣೆ ಗಿಮಿಕ್‌ ಎಂದು ಸಚಿವರೇ ಹೇಳಿರುವುದು ಪುಕ್ಕಟೆ ವಿಚಾರದಲ್ಲಿ ಕಾಂಗ್ರೆಸ್‌ಗೆ ಯಾವುದೇ ಸ್ಪಷ್ಟತೆ ಇಲ್ಲದಿರುವುದನ್ನು ಸಾಬೀತುಪಡಿಸಿದೆ ಎಂದು ಅವರು ಪ್ರಕಟಣೆಯಲ್ಲಿ ಟೀಕಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!