Karnataka CM change politics: ಡಿಕೆಶಿಯನ್ನು ಸಿಎಂ ಮಾಡ್ತಾರೋ ಇಲ್ವೋ ಹೈಕಮಾಂಡ್‌ ಹೇಳ್ಲಿ, ಇಲ್ಲದಿದ್ರೆ...

Kannadaprabha News, Ravi Janekal |   | Kannada Prabha
Published : Feb 19, 2026, 08:02 AM IST
Mandya MLA Ganiga Ravikumar

ಸಾರಾಂಶ

Karnataka CM change politics ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವ ಬಗ್ಗೆ ಹೈಕಮಾಂಡ್ ಸ್ಪಷ್ಟನೆ ನೀಡಬೇಕೆಂದು ಮಂಡ್ಯ ಶಾಸಕ ಗಣಿಗ ರವಿಕುಮಾರ್ ಆಗ್ರಹಿಸಿದ್ದಾರೆ. ಈ ಗೊಂದಲದಿಂದ ಪಕ್ಷ ಹಾಗೂ ಸರ್ಕಾರದ ಇಮೇಜ್‌ಗೆ ಹಾನಿಯಾಗುತ್ತಿದೆ ಎಂದಿದ್ದಾರೆ.

 ಮಂಡ್ಯ (ಫೆ.19): ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿ ಮಾಡುತ್ತಾರೋ, ಇಲ್ಲವೋ ಎಂಬುದನ್ನು ಹೈಕಮಾಂಡ್‌ ಸ್ಪಷ್ಟಪಡಿಸಬೇಕು. ಇಲ್ಲದಿದ್ದರೆ ಪಕ್ಷದ ಜೊತೆ ಸರ್ಕಾರದ ಇಮೇಜ್‌ಗೂ ಹಾನಿಯಾಗಲಿದೆ ಎಂದು ಮಂಡ್ಯ ಶಾಸಕ ಗಣಿಗ ರವಿಕುಮಾರ್‌ ಹೇಳಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಡಿ.ಕೆ.ಶಿವಕುಮಾರ್‌ ಅವರು ಪಕ್ಷ ಸಂಘಟನೆಗೆ ಸಾಕಷ್ಟು ಶ್ರಮಿಸಿದ್ದಾರೆ. ನಿಷ್ಠಾವಂತ ನಾಯಕರಾಗಿ ಪಕ್ಷಕ್ಕೆ ದೊಡ್ಡ ಶಕ್ತಿಯಾಗಿ ನಿಂತಿದ್ದಾರೆ. ಸರ್ಕಾರ ಅಧಿಕಾರಕ್ಕೆ ಬರುವುದಕ್ಕೆ ಅವರ ಕೊಡುಗೆಯೂ ಇದೆ. ಅವರು ಮುಖ್ಯಮಂತ್ರಿಯಾಗಲು ಅರ್ಹರಾಗಿರುವುದರಿಂದ ಹೈಕಮಾಂಡ್‌ ಕೂಡಲೇ ನಿರ್ಧಾರ ಪ್ರಕಟಿಸುವುದು ಉತ್ತಮ ಎಂದರು.

ಸಚಿವ ಎಚ್.ಸಿ.ಮಹದೇವಪ್ಪನವರು ಶಾಸಕರನ್ನು ಬೀದಿ ನಾಯಿಗೆ ಹೋಲಿಸಿದ ವಿಚಾರವಾಗಿ ಪ್ರತಿಕ್ರಿಯಿಸಿ, ನಾಯಿ, ಪ್ರಾಮಾಣಿಕತೆ ಹಾಗೂ ನಿಯತ್ತಿನ ಸಂಕೇತ. ಹಾಗಾಗಿ, ಪಕ್ಷಕ್ಕೆ ನಿಯತ್ತಾಗಿರುವ ಶಾಸಕರು ಎಂಬ ಅರ್ಥದಲ್ಲಿ ಹೇಳಿರಬೇಕು. ಇನ್ನು, ಡಿ.ಕೆ.ಶಿವಕುಮಾರ್ ಎಂದರೆ ಕಾಂಗ್ರೆಸ್ ಪಕ್ಷಕ್ಕೆ ನಿಯತ್ತಾಗಿ ಇರುವವರು. ಕಾಂಗ್ರೆಸ್‌ ಹೈಕಮಾಂಡ್‌ನ‌ ನಿಯತ್ತಿ‌ನ ಸೈನಿಕ ಅವರು. ಕಳೆದ 40 ವರ್ಷದಿಂದ ಕಾಂಗ್ರೆಸ್‌ ಪಕ್ಷಕ್ಕೆ ಹಾಗೂ ಹೈಕಮಾಂಡ್ ಗೆ ನಿಯತ್ತಾಗಿದ್ದಾರೆ ಎಂದರು.

ಎರಡು ಬಾರಿ ಅವರನ್ನು ಮಂತ್ರಿ ಮಾಡಲಿಲ್ಲ, ಈಗ ಸಿಎಂ ಕೂಡ ಆಗಿಲ್ಲ. ಆದರೂ ಅವರು ಪಕ್ಷಕ್ಕೆ‌ ನಿಯತ್ತಾಗಿದ್ದಾರೆ. ಅದಕ್ಕಾಗಿ ಮಹದೇವಪ್ಪನವರು ಹಾಗೆ ಹೇಳಿರಬೇಕು ಎಂದು ಸಚಿವರಿಗೆ ಟಾಂಗ್‌ ನೀಡಿದರು.

ಸಿದ್ದರಾಮಯ್ಯ ಆಪ್ತ ಶಾಸಕರ ವಿದೇಶ ಪ್ರವಾಸ ಕುರಿತು ಪ್ರತಿಕ್ರಿಯಿಸಿ, ಅವರೆಲ್ಲಾ ಏತಕ್ಕಾಗಿ ವಿದೇಶ ಪ್ರವಾಸಕ್ಕೆ ಹೋಗಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಪ್ರಾಯೋಜಕರು ಕರೆದೊಯ್ದಿರಲಿ, ಅವರೇ ದುಡ್ಡು ಹಾಕೊಂಡು ವಿದೇಶಕ್ಕೆ ಹೋಗಿರಲಿ ಉದ್ದೇಶ ಏನು ಎನ್ನುವುದನ್ನು ಸ್ಪಷ್ಟಪಡಿಸಬೇಕಲ್ಲವೇ ಎಂದು ಪ್ರಶ್ನಿಸಿದರು.

ನಾನೂ ಬೇಕಿದ್ದರೆ, 50 ಶಾಸಕರನ್ನು ವಿದೇಶಕ್ಕೆ ಕರೆದುಕೊಂಡು ಹೋಗಬಹುದು. ಅದರಿಂದ ಸಿಎಂ ಬದಲಾಯಿಸಲು ಆಗೋಲ್ಲ. ಹೈಕಮಾಂಡ್ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ ಪುಲ್‌ಸ್ಟಾಪ್ ಹಾಕಬೇಕು. ಇಲ್ಲದಿದ್ದರೆ ಈ ಗೊಂದಲ ಇನ್ನೂ ಜಾಸ್ತಿಯಾಗುತ್ತೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

BJP-JDS Alliance: ಮೈತ್ರಿ ಚರ್ಚೆ ನಾಲ್ಕು ಗೋಡೆ ನಡುವೆ ಇರಬೇಕು; ನಿಖಿಲ್‌ ಎಚ್ಚರಿಕೆ ಕೊಟ್ಟಿದ್ದು ಯಾರಿಗೆ?
Tejasvi Surya metro protest case: ಅನುಮತಿ ಇಲ್ಲದೆ ಪ್ರತಿಭಟನೆ; ಸಂಸದ ತೇಜಸ್ವಿ ಸೂರ್ಯ ಸೇರಿ 9 ಮಂದಿಗೆ ನೋಟಿಸ್‌!