ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಅಧಿಕಾರ ನಿಶ್ಚಿತ: ರಫೀಕ್‌ ಪಕಾಲಿ

Published : Jan 31, 2023, 08:30 PM IST
ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಅಧಿಕಾರ ನಿಶ್ಚಿತ: ರಫೀಕ್‌ ಪಕಾಲಿ

ಸಾರಾಂಶ

ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವುದು ನಿಶ್ಚಿತ: ರಫೀಕ್‌ ಪಕಾಲಿ 

ಕೊಲ್ಹಾರ(ಜ.31):  ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಕೊಲ್ಹಾರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಫೀಕ್‌ ಪಕಾಲಿ ಹೇಳಿದರು.

ಪಟ್ಟಣದ ಟಿಪ್ಪುಸುಲ್ತಾನ್‌ ಸರ್ಕಲ್‌ ಬಳಿ ಕಾಂಗ್ರೆಸ್‌ ಪಕ್ಷದ ನಾಯಕ ರಾಹುಲ್‌ ಗಾಂಧಿ ಹಮ್ಮಿಕೊಂಡಿದ್ದ ಭಾರತ ಜೋಡೋ ಪಾದಯಾತ್ರೆ ಅಂತಿಮ ದಿನವಾದ ಸೋಮವಾರ ಕಾಶ್ಮೀರ ರಾಜಧಾನಿ ಶ್ರೀನಗರದಲ್ಲಿ ಮುಕ್ತಾಯಗೊಳ್ಳುವುದರ ಪ್ರಯುಕ್ತ ಪಕ್ಷದ ಆದೇಶದ ಹಿನ್ನೆಲೆಯಲ್ಲಿ ದೇಶಾದ್ಯಂತ ಮಹಾತ್ಮ ಗಾಂಧೀಜಿ ಅವರ ಪುಣ್ಯಸ್ಮರಣೆಯ ದಿನದಂದು ಡಾ.ಬಾಬಾಸಾಹೇಬ ಅಂಬೇಡ್ಕರ್‌ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಮತದಾರರ ಜೊತೆ ನಿರಂತರ ಸಂಪರ್ಕದಲ್ಲಿ ಇರಬೇಕು ಎಂದರು.

VIJAYAPURA: ಬಿಜೆಪಿ ಅಧಿಕಾರಕ್ಕೆ ಬರಲು ಶ್ರಮಿಸಿ: ಬಿ.ಎಲ್‌.ಸಂತೋಷ್

ಮಾಜಿ ಜಿಪಂ ಸದಸ್ಯ ಕಲ್ಲು ದೇಸಾಯಿ ಮಾತನಾಡಿ, ನಮ್ಮ ನಾಯಕ ರಾಹುಲ್‌ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 4080 ಕಿಮೀ ಪಾದಯಾತ್ರೆಯನ್ನು 12 ರಾಜ್ಯಗಳಲ್ಲಿ ಕ್ರಮಿಸುವ ಮೂಲಕ ಜನರ ನಾಡಿಮಿಡಿತವನ್ನು ಅರಿತು ದೇಶದಲ್ಲಿ ಬದಲಾವಣೆ ತರಲು ಸಾಮಾನ್ಯ ಜನರ ಕೂಗು ಹಾಗೂ ರೈತಾಪಿ ಜನರ ಸಂಕಷ್ಟಗಳನ್ನು ಅರಿಯಲು ದೇಶಾದ್ಯಂತ ಭಾರತ ಜೋಡೋ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದರು. ಅದು ಇಂದು ಕಾಶ್ಮೀರದಲ್ಲಿ ರಾಷ್ಟ್ರಧಜಾರೋಹಣ ಮಾಡುವುದರ ಮೂಲಕ ಮುಕ್ತಾಯಗೊಂಡಿತು. ದೇಶದಲ್ಲಿ ಬದಲಾವಣೆ ತರಲು ಹಮ್ಮಿಕೊಂಡ ಪಾದಯಾತ್ರೆಗೆ ಎಲ್ಲ ರಾಜ್ಯಗಳಲ್ಲಿ ಅಭೂತಪೂರ್ವ ಬೆಂಬಲ ಸಿಕ್ಕಿದೆ ಎಂದರು ಹೇಳಿದರು.

ಈ ಸಂದರ್ಭದಲ್ಲಿ ಪಪಂ ಸದಸ್ಯ ಚನಮ್ಮಲ್ಲಪ್ಪ ಗಿಡ್ಡಪ್ಪಗೋಳ, ನಿಂಗಪ್ಪ ಗಣಿ, ವಿಜಯ ಮಹಾಂತೇಶ ಗಿಡ್ಡಪ್ಪಗೋಳ, ಶ್ರೀಶೈಲ ಮುಳವಾಡ, ಕಾಂಗ್ರೆಸ್‌ ಮುಖಂಡರಾದ ಬಸವರಾಜ ಹುಲ್ಯಾಳ, ನಬೀಸಾಬ ಹೊನ್ಯಾಳ, ದಸ್ತಗೀರ ಕಾಖಂಡಕಿ, ಗೈಬುಸಾಬ ನದಾಫ್‌, ದಶರಥ ಈಟಿ, ರಾಜು ಇವಣಗಿ, ಹನೀಫ್‌ ಮಕಾನದಾರ, ಸಿಡ್ಲೆಪ್ಪ ಮಾದರ, ಯಮನೂರಿ ಮಾಕಾಳೆ ಸೇರಿದಂತೆ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಕ್ಕಿ ಅಕ್ರಮದಲ್ಲಿ ಬಿಜೆಪಿಯವರೇ ಶಾಮೀಲು: ಸಚಿವ ಪ್ರಿಯಾಂಕ್ ಖರ್ಗೆ
ಬಂಡವಾಳ ಆಕರ್ಷಣೆಗೆ ರಾಜ್ಯಗಳ ನಡುವೆ ಸ್ಪರ್ಧೆ ಹೆಚ್ಚಾಗಿದೆ: ಸಚಿವ ಎಂ.ಬಿ.ಪಾಟೀಲ್‌