ಡಿಕೆಶಿ ಹೆಸರಲ್ಲಿ ಜನರಿಗೆ ಮೋಸ: ಕಾಂಗ್ರೆಸ್‌ ನಾಯಕಿ ಪಕ್ಷದಿಂದ ಉಚ್ಛಾಟನೆ

Published : Feb 28, 2021, 10:38 PM IST
ಡಿಕೆಶಿ ಹೆಸರಲ್ಲಿ ಜನರಿಗೆ ಮೋಸ: ಕಾಂಗ್ರೆಸ್‌ ನಾಯಕಿ ಪಕ್ಷದಿಂದ ಉಚ್ಛಾಟನೆ

ಸಾರಾಂಶ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಕಾಂಗ್ರೆಸ್‌ ನಾಯಕಿಯನ್ನು ಇದೀಗ ಪಕ್ಷದಿಂದ ಉಚ್ಛಾಟಿಸಲಾಗಿದೆ.

ಹುಬ್ಬಳ್ಳಿ, (ಫೆ.28): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರಲ್ಲಿ ಜನರಿಗೆ ಪಂಗನಾಮ ಹಾಕಿದ ಹುಬ್ಬಳ್ಳಿಯ ಕಾಂಗ್ರೆಸ್ ನಾಯಕಿಯನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

 ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಸವದತ್ತಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ಡಿಕೆ ಶಿವಕುಮಾರ್ ಕಪ್ಪು ಹಣದಿಂದ ಕಡಿಮೆ ಬಡ್ಡಿಯಲ್ಲಿ ಸಾಲ ನೀಡುತ್ತೇನೆ ಎಂದು ಪೂರ್ಣಿಮಾ ಅವರು ಜನರನ್ನು ನಂಬಿಸಿ ಅವರಿಂದ ಲಕ್ಷ ಲಕ್ಷ ಹಣ ವಸೂಲಿ ಮಾಡಿ ಪಂಗನಾಮ ಹಾಕಿ ಪರಾರಿಯಾಗಿಯಾಗಿದ್ದಾರೆ. 35ಕ್ಕೂ ಹೆಚ್ಚು ಜನರಿಗೆ ಮೋಸ ಮಾಡಿರುವ ಆರೋಪ ಕೇಳಿಬಂದಿದೆ.

ಸೈಟ್ ಕೊಡಿಸುವ ನೆಪದಲ್ಲಿ 30 ಕ್ಕೂ ಹೆಚ್ಚು ಮಂದಿಗೆ ಕೈ ನಾಯಕಿಯಿಂದ ವಂಚನೆ

ತನಗೆ 10 ಸಾವಿರ ರೂ. ನೀಡಿದರೆ ಸಾಲ ಕೊಡಿಸುವೆ ಎಂದು ನಂಬಿಸಿ ವಂಚಿಸುತ್ತಿದ್ದ ಪೂರ್ಣಿಮಾ ವಿರುದ್ಧ ಮೋಸ ಹೋದವರು ಹಳೆ ಹಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದ್ರೆ, ಪೂರ್ಣಿಮಾ ಅವರು ಪರಾರಿಯಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸಿದ್ದಾರೆ.

ಪೂರ್ಣಿಮಾ ಕೇವಲ ಡಿಕೆಶಿ ಹೆಸರು ಮಾತ್ರವೇ ಅಲ್ಲದೆ ಶಾಸಕರಾದ ಪ್ರಕಾಶ್ ಅಬ್ಬಯ್ಯ ಹೆಸರು ಬಳಸಿ ಸಹ ವಂಚಿಸಿದ್ದರು ಎನ್ನಲಾಗಿದ್ದು "ನಾನು ಕೆಪಿಸಿಸಿ ಕಚೇರಿಯಿಂದ ಕರೆ ಮಾಡಿದ್ದೇನೆ, ನನಗೆ 10 ಸಾವಿರ ನೀಡಿದರೆ ಡಿಕೆಶಿ ಅವರ ಕಪ್ಪು ಹಣದಿಂದ ನಿಮಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುತ್ತೇನೆ ಎಂದು ಪೂರ್ಣಿಮಾ ಜನರಿಗೆ ನಂಬಿಸುತ್ತಿದ್ದರು ಎಂದು ತಿಳಿದುಬಂದಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ
ಹೈಕಮಾಂಡ್‌ ನಿರ್ಧಾರವೇ ಅಂತಿಮ: ಸಿಎಂ ಬದಲು ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ