ಪಂಜಾಬ್ ಸ್ಥಳೀಯ ಸಂಸ್ಧೆ ಚುನಾವಣೆ: ಕೈ ಮೇಲುಗೈ, ಕೃಷಿ ಕಾಯ್ದೆ ಬಿಜೆಪಿಗೆ ಕಂಟಕವಾಯ್ತಾ?

Published : Feb 17, 2021, 08:03 PM IST
ಪಂಜಾಬ್ ಸ್ಥಳೀಯ ಸಂಸ್ಧೆ ಚುನಾವಣೆ: ಕೈ ಮೇಲುಗೈ, ಕೃಷಿ ಕಾಯ್ದೆ ಬಿಜೆಪಿಗೆ ಕಂಟಕವಾಯ್ತಾ?

ಸಾರಾಂಶ

ಪಂಜಾಬ್ ಸ್ಥಳೀಯ ಸಂಸ್ಧೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗಿದ್ದು, ಬಿಜೆಪಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ಕಂಟಕವಾಯ್ತಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಚಂಡಿಗಢ, (ಫೆ.17): ಪಂಜಾಬ್ ಸ್ಥಳೀಯ ಚುನಾವಣಾ ಫಲಿಂತಾಶ ಪ್ರಕಟವಾಗುತ್ತಿದ್ದು, ಆಡಳಿತಾರೂಢ ಕಾಂಗ್ರೆಸ್ ಜಯಭೇರಿ ಭಾರಿಸಿದೆ. 

ಒಟ್ಟು 8 ಪುರಸಭೆಗಳ 2,302 ವಾರ್ಡ್ ಗಳಿಗೆ ಚುನಾವಣೆ ನಡೆದಿದ್ದು, 109 ಮುನ್ಸಿಪಲ್ ಕೌನ್ಸಿಲ್ ಗಳಿಗೆ ಚುನಾವಣೆ ನಡೆದಿತ್ತು. ಇದರ ಫಲಿತಾಂಶ ಇಂದು (ಬುಧವಾರ) ಪ್ರಕಟವಾಗಿದ್ದು,  8ರಲ್ಲಿ 7 ಮಹಾನಗರ ಪಾಲಿಕೆಗಳನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಬಿಜೆಪಿಗೆ ದೊಡ್ಡ ಆಘಾತ ನೀಡಿದೆ.

ಮೋಘಾ, ಹೋಶೈರಪುರ್, ಕಾಪುರ್ತಲಾ, ಅಭೋಹರ್, ಪಠಾಣಕೋಟ್, ಬಟಾಲಾ, ಮತ್ತು ಬಟಿಂಡಾ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು, 53 ವರ್ಷಗಳ ನಂತರ ಕಾಂಗ್ರೆಸ್ ಪುನಃ ಈ ಸಾಧನೆ ಮಾಡಿದೆ. 

ಕೃಷಿ ಕಾಯ್ದೆ ನಿಷ್ಕ್ರಿಯಕ್ಕೆ ಪಂಜಾಬ್‌ ಗೊತ್ತುವಳಿ!

ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಪಂಜಾಬ್​ನ ಬಹುತೇಕ ರೈತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಫಲಿತಾಂಶ ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. 

ಇನ್ನು ಫಲಿತಾಂಶದ ಕುರಿತು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪ್ರತಿಕ್ರಿಯಿಸಿದ್ದು,  ಇದು 2022ರ ಚುನಾವಣೆಯ ಟ್ರೈಲರ್ ಮಾತ್ರ, ಪಿಚ್ಚರ್ ಅಭಿ ಬಾಕಿ ಹೈ ಎಂದಿದ್ದಾರೆ.

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನ ವಿರೋಧಿಸಿ ಪಂಜಾಬ್ ರೈತರ ಹೋರಾಟ ಮುಂದುವರಿದಿದೆ. ಹಲವು ಅಡೆತಡೆಗಳ ಮಧ್ಯೆಯೂ ಪಂಜಾಬ್ ರೈತರು ದಿಲ್ಲಿಯಲ್ಲಿ ಪ್ರತಿಭಟನೆ ಮುಂದುವರಿಸಿದ್ದು, ಈ ಕೃಷಿ ಕಾಯ್ದೆ ಕಾನೂನು ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಮೇಲೆ ಭಾರೀ ಪರಿಣಾಮ ಬೀರಿದೆ ಎಂದು ವಿಶ್ಲೀಷಣೆ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!