ಕಾಂಗ್ರೆಸ್‌ನಿಂದ ಸಮಾಜ ಇಬ್ಭಾಗ ಮಾಡುವ ಹುನ್ನಾರ: ಸಿ.ಟಿ.ರವಿ

Published : Dec 26, 2022, 02:00 AM IST
ಕಾಂಗ್ರೆಸ್‌ನಿಂದ ಸಮಾಜ ಇಬ್ಭಾಗ ಮಾಡುವ ಹುನ್ನಾರ: ಸಿ.ಟಿ.ರವಿ

ಸಾರಾಂಶ

ಬಿಜೆಪಿ ಮೀಸಲಾತಿ ವಿರೋಧಿ ಎನ್ನುವುದು ಕಾಂಗ್ರೆಸ್‌ನ ಮತ್ತೊಂದು ಮಾಮೂಲಿ ಸುಳ್ಳು. ಆದರೆ, ಮೀಸಲಾತಿಯನ್ನು ರಾಜ್ಯದಲ್ಲಿ ಹೆಚ್ಚಿಸಿದ್ದೇ ನಮ್ಮ ಸರ್ಕಾರ: ಸಿ.ಟಿ.ರವಿ 

ಚಿಕ್ಕಮಗಳೂರು(ಡಿ.26):  ಅಭಿವೃದ್ಧಿ ಮತ್ತು ಹಿಂದುತ್ವದ ಅಜೆಂಡಾ ಇಟ್ಟುಕೊಂಡು ಬಿಜೆಪಿ ರಾಜಕಾರಣ ಮಾಡಿದರೆ, ಕಾಂಗ್ರೆಸ್‌ ಪಕ್ಷ ಜಾತ್ಯತೀತತೆಯನ್ನು ಪ್ರಚೋದಿಸುತ್ತ ಸಮಾಜವನ್ನು ಇಬ್ಭಾಗ ಮಾಡಿ ಲಾಭ ಪಡೆಯುವ ಹುನ್ನಾರ ನಡೆಸಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದರು. 

ಜಿಲ್ಲಾ ಬಿಜೆಪಿ ಕಾರ್ಯಕಾರಿಣಿಯಲ್ಲಿ ಭಾನುವಾರ ಮಾತನಾಡಿ, ಕಾಂಗ್ರೆಸಿಗರು ಜಾತೀಯತೆ ಅಜೆಂಡಾ ಇಟ್ಟುಕೊಂಡು ನಮ್ಮ ವಿರುದ್ಧ ಸುಳ್ಳುಗಳನ್ನು ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಸಂವಿಧಾನ ವಿರೋಧಿ ಎನ್ನುವುದು ಕಾಂಗ್ರೆಸ್‌ ಹೇಳುವ ಮೊದಲ ಸುಳ್ಳು. ಸಂವಿಧಾನ ಗೌರವ್‌ ದಿವಸ್‌ ಆರಂಭ ಆಗಿದ್ದೇ ಮೋದಿ ಅವರು ಪ್ರಧಾನಿ ಆದ ನಂತರ. ಬಿಜೆಪಿಯ​ನ್ನು ಅಂಬೇಡ್ಕರ್‌ ವಿರೋಧಿ ಎಂದು ಕರೆದರೂ ಎಲ್ಲಾದರೂ ಅಂಬೇಡ್ಕರ್‌ ಅವರಿಗೆ ಅಗೌರವವಾದರೆ ಕೂಡಲೇ ಆರೆಸ್ಸೆಸ್‌, ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದರು. ಆದರೆ ಅಂಬೇಡ್ಕರ್‌ ಅವರ ಪಂಚಧಾಮಗಳನ್ನು ಪಂಚತೀರ್ಥ ಎಂದು ಕರೆದು ಅಭಿವೃದ್ಧಿಪಡಿಸಿದ್ದು ಮೋದಿ. ಕಾಂಗ್ರೆಸ್‌ ಅಂಬೇಡ್ಕರ್‌ರನ್ನು ಸೋಲಿಸಿದ್ದಲ್ಲದೆ, ಅವರು ಬದುಕಿದ್ದಾಗಲೂ, ಸತ್ತಾಗಲೂ ಅನ್ಯಾಯ ಮಾಡಿತ್ತು ಎಂದು ದೂರಿದರು.

ಜೆಡಿಎಸ್‌ಗೆ ಮರಳಲು ದತ್ತಗೆ ಗಡುವು ; ಪ್ರಜ್ವಲ್ ರೇವಣ್ಣ

ಬಿಜೆಪಿ ಮೀಸಲಾತಿ ವಿರೋಧಿ ಎನ್ನುವುದು ಕಾಂಗ್ರೆಸ್‌ನ ಮತ್ತೊಂದು ಮಾಮೂಲಿ ಸುಳ್ಳು. ಆದರೆ, ಮೀಸಲಾತಿಯನ್ನು ರಾಜ್ಯದಲ್ಲಿ ಹೆಚ್ಚಿಸಿದ್ದೇ ನಮ್ಮ ಸರ್ಕಾರ. ಬಡ್ತಿ ಮೀಸಲಾತಿ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ವ್ಯತಿರಿಕ್ತ ತೀರ್ಪು ಬಂದಾಗ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ, ಪರವಾಗಿ ಪ್ರಮಾಣಪತ್ರ ಸಲ್ಲಿಸಿತು. ಇದನ್ನು ಮರೆಮಾಚುವ ಪ್ರಯತ್ನ ವಿರೋಧಿಗಳದ್ದು. ಈ ಸುಳ್ಳುಗಳ ಜೊತೆಗೆ ಜಾತಿಯನ್ನು ಪ್ರಚೋದಿಸಿ, ಸಮಾಜವನ್ನು ಒಡೆದು ರಾಜಕೀಯ ಲಾಭ ಪಡೆಯುವುದು ಕಾಂಗ್ರೆಸ್‌ ಮಾಡುವ ಮತ್ತೊಂದು ಕೆಲಸ ಎಂದು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಇಂದಿನಿಂದ ಕಾವೇರಲಿದೆ ಉತ್ತರ ಕರ್ನಾಟಕದ ಚರ್ಚೆ-3 ದಿನ ವಿಧಾನಮಂಡಲದಲ್ಲಿ ಈ ಬಗ್ಗೆ ಕಲಾಪ
ಅಧಿವೇಶನದಲ್ಲಿ ನಾವು ರಾಜ್ಯದ ರೈತರಿಗೋಸ್ಕರ ಹೋರಾಡುತ್ತೇವೆ: ಆರ್‌.ಅಶೋಕ್‌