ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಲೆಲ್ಲಾ ದರಿದ್ರ ಜೊತೆಗೆ ತರುತ್ತದೆ: ಚಲವಾದಿ ನಾರಾಯಣಸ್ವಾಮಿ ಆರೋಪ

Published : Oct 11, 2023, 12:42 PM IST
ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಲೆಲ್ಲಾ ದರಿದ್ರ ಜೊತೆಗೆ ತರುತ್ತದೆ: ಚಲವಾದಿ ನಾರಾಯಣಸ್ವಾಮಿ ಆರೋಪ

ಸಾರಾಂಶ

ರಾಜ್ಯದಲ್ಲಿ ಪ್ರತಿಬಾರಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ದರಿದ್ರವನ್ನು ಜೊತೆಗೇ ತರುತ್ತದೆ. ಯಾವುದೇ ಕಾರಣಕ್ಕೂ ರೈತರನ್ನು ಕೈ ಬಿಡಬಾರದಿತ್ತು.

ಬೆಂಗಳೂರು (ಅ.11): ರಾಜ್ಯದಲ್ಲಿ ಪ್ರತಿಬಾರಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ದರಿದ್ರವನ್ನು ಜೊತೆಗೇ ತರುತ್ತದೆ. ಯಾವುದೇ ಕಾರಣಕ್ಕೂ ರೈತರನ್ನು ಕೈ ಬಿಡಬಾರದಿತ್ತು ಎಂದು ವಿಧಾನ ಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆರೋಪ ಮಾಡಿದ್ದಾರೆ. 

ಈ ಕುರಿತು ಮಾಧ್ಯುಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ದರಿದ್ರವನ್ನು ಜೊತೆಗೇ ತರುತ್ತದೆ. ರೈತರನ್ನು ಕೈ ಬಿಡಬಾರದಿತ್ತು. ಕೇಂದ್ರ ಹಣ ಕೊಟ್ಟಿಲ್ಲ ಅಂತ ಬಿಜೆಪಿ ಸರ್ಕಾರ ಇದ್ದಾಗ ಯಾವತ್ತೂ ಹೇಳಿಲ್ಲ. ಈಗ ಕಾಂಗ್ರೆಸ್ ಕೇಂದ್ರದ ಕಡೆ ಕೈ ತೋರಿಸ್ತಿದೆ. ರಾಜ್ಯದ 193 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ ಅಂತ ನೀವೇ ಹೇಳಿದ್ದೀರಿ. ಕೇವಲ ಗ್ಯಾರಂಟಿಗಳನ್ನು ಮಾತ್ರ ಗಮನಿಸೋದಾ ನೀವು. ಹಣಕಾಸು ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಿ. ನಾವು ಖಾಲಿ ಆಗಿದ್ದೀವಿ ಅಂತಾ ಘೋಷಣೆ ಮಾಡಿಕೊಳ್ಳಿ ಎಂದು ಹೇಳಿದರು.

ಭಾರತ ಇನ್ನೊಂದು ಇಸ್ರೇಲ್ ಆಗಬಾರದು ಅನ್ನೋದಾದ್ರೆ ಮತ್ತೊಮ್ಮೆ ಮೋದಿ ಗೆಲ್ಲಿಸಿ: ಯತ್ನಾಳ್‌

ಶಾಸಕರ ಅನುದಾನ ಎಲ್ಲವನ್ನೂ ಬೇರೆ ಕೆಲಸಗಳಿಗೆ ಬಳಸಿಕೊಳ್ಳಲಾಗ್ತಿದೆ. ಬ್ರಾಂಡ್ ಬೆಂಗಳೂರು ಅಂತಾ ಹೇಳಿಕೊಳ್ತೀರಿ. ಬ್ರಾಂಡ್ ಅಲ್ಲ ಬ್ಯಾಂಡ್ ಬೆಂಗಳೂರು ಇದು. ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ನಗರ ಬೆಂಗಳೂರು. ಇದನ್ನು ನೀವೇನು ಹೊಸದಾಗಿ ಮಾಡಬೇಕಾಗಿಲ್ಲ. ಬೆಂಗಳೂರು ಸುತ್ತ ನೀವು ಮಾಡ್ತಾ ಇರೋ ಬ್ರಾಂಡ್ ಗೊತ್ತಿದೆ ನಮಗೆ. ಮೊದಲು ರೈತರ ಬಗ್ಗೆ ಯೋಚನೆ ಮಾಡಿ. ಇಲ್ಲಿನ ರೈತರಿಗೆ ನೀರಿಲ್ಲ. ತಮಿಳುನಾಡು ರೈತರ ಬಗ್ಗೆ ಮಾತಾಡ್ತೀರಾ. ಇಲ್ಲಿನವರಿಗೆ ಕೊಡಲು ನೀರಿಲ್ಲ. ಚುನಾವಣೆಗಾಗಿ ಯಾರನ್ನೋ ಓಲೈಕೆ ಮಾಡಬಾರದು ಎಂದು ಟೀಕಿಸಿದರು.

ರಾಜ್ಯದಲ್ಲಿ ಯಾವೊಬ್ಬ ಮತದಾರರೂ ನಿಮ್ಮ ಮುಖ ನೋಡಿ ಓಟ್ ಹಾಕಿಲ್ಲ. ಗ್ಯಾರಂಟಿಗಳನ್ನು ನೋಡಿ ಓಟ್ ಹಾಕಿದ್ದಾರೆ. ನುಡಿದಂತೆ ನಡೆವ ಸರ್ಕಾರ ಅಂತೀರಲ್ಲ, ಏನು ನುಡಿದಂತೆ ನಡೆಸಿದ್ದೀರಾ ಹೇಳಿ? ನಮ್ಮ ಕಾರ್ಯಕರ್ತರು ಬೀದಿಗಿಳಿದು ಹೋರಾಟ ಮಾಡ್ತಾರೆ. ನಿಮ್ಮ ಶಾಸಕರ ಮನೆ ಮನೆಗೆ ಬಂದು ಹೋರಾಟ ಮಾಡ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!