ಕರ್ನಾಟಕದಿಂದ ಕಾಂಗ್ರೆಸ್‌ ಬ್ಯಾನ್‌ ಆಗಲಿದೆ: ಬಿ.ವೈ. ವಿಜಯೇಂದ್ರ ಟೀಕೆ

Published : May 04, 2023, 11:31 PM IST
ಕರ್ನಾಟಕದಿಂದ ಕಾಂಗ್ರೆಸ್‌ ಬ್ಯಾನ್‌ ಆಗಲಿದೆ: ಬಿ.ವೈ. ವಿಜಯೇಂದ್ರ ಟೀಕೆ

ಸಾರಾಂಶ

ಬಿಜೆಪಿ ಸುನಾಮಿಯಿಂದ ಕಾಂಗ್ರೆಸ್ಸಿಗರು ಹತಾಶರಾಗಿದ್ದಾರೆ, ಅವರಿಗೆಲ್ಲ ಸೋಲಿನ ಭೀತಿ ಕಾಡಲಾರಂಭಿಸಿದೆ. ಶೀಘ್ರವಾಗಿ ಕರ್ನಾಟಕದಿಂದ ಕಾಂಗ್ರೆಸ್‌ ಬ್ಯಾನ್‌ ಆಗಲಿದೆ.

ವರದಿ:- ಮಲ್ಲಿಕಾರ್ಜುನ ಹೊಸಮನಿ, ಏಷಿಯಾನೆಟ್ ಸುವರ್ಣನ್ಯೂಸ್ 

ಬಾಗಲಕೋಟೆ (ಮೇ 04): ರಾಜ್ಯದಲ್ಲಿ ಬಿಜೆಪಿ ಸುನಾಮಿಯಿಂದ ಕಾಂಗ್ರೆಸ್ಸಿಗರು ಹತಾಶರಾಗಿದ್ದಾರೆ, ಅವರಿಗೆಲ್ಲ ಸೋಲಿನ ಭೀತಿ ಕಾಡಲಾರಂಭಿಸಿದೆ. ಶೀಘ್ರವಾಗಿ ಕರ್ನಾಟಕದಿಂದ ಕಾಂಗ್ರೆಸ್‌ ಬ್ಯಾನ್‌ ಆಗಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಗೆದ್ದೆ ಬಿಟ್ಟಿದ್ದೀವಿ ಅಂತ ಬೀಗುತ್ತಿದ್ದ ಕಾಂಗ್ರೆಸ್ಸಿಗರು  ಪ್ರಧಾನಿ ನರೇಂದ್ರ ಮೋದಿಯವರ ಬಿರುಗಾಳಿಯಿಂದ ಹರಾಶರಾಗಿದ್ದಾರೆ ಎಂದರು.

ಮೋದಿ & ಅಮಿತ್ ಶಾ ಪ್ರಚಾರದಿಂದ ಬಿಜೆಪಿ ಸುನಾಮಿ ಅಲೆಯಿದೆ. ಮೋದಿ ಮತ್ತು ಅಮಿತ್ ಶಾ ಪ್ರವಾಸ ಹೆಚ್ಚಾದಂತೆಲ್ಲಾ ಕಾಂಗ್ರೆಸ್ಸಿಗರು ಹತಾಶರಾಗಿದ್ದಲ್ಲದೆ, ಸೋಲು ಅವರ ಎದುರಿಗೆ ಕಾಣಲಾರಂಭಿಸಿದೆ ಎಂದರು. ಬಿಜೆಪಿ ಪಕ್ಷಕ್ಕೆ ರಾಜ್ಯದ ಜನ ಆಶೀರ್ವಾದ ಮಾಡುತ್ತಿದ್ದಾರೆ ಅಂತ ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಸೋಲಿನ ಭೀತಿ ಕಾಂಗ್ರೆಸ್ಸಿಗರ ಬೆನ್ನು ಹತ್ತಿದೆ ಎಂದರು. ಕರ್ನಾಟಕದಿಂದಲೇ ಕಾಂಗ್ರೆಸ್ ಬ್ಯಾನ್ ಆಗಲಿದೆ. ಇನ್ನು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ಬ್ಯಾನ್ ವಿಷಯ ಕುರಿತು ಮಾತನಾಡಿದ ಅವರು ಈಗಾಗಲೇ ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಸ್ತಿತ್ವ ಕಳೆದುಕೊಂಡಿದೆ ಎಂದು ಹೇಳಿದರು.

ಪ್ರಧಾನಿ ಮೋದಿ ಸೋಲಿನ ಭಯದಿಂದ, ಗಲ್ಲಿ ಗಲ್ಲಿ ಸುತ್ತಾಡ್ತಿದಾರೆ! ಎಚ್. ವಿಶ್ವನಾಥ್ ಟೀಕೆ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ಬ್ಯಾನ್ ಮಾಡಿದ್ದು,,ದೇಶದಲ್ಲಿಯೇ ಕಾಂಗ್ರೆಸ್ ಬ್ಯಾನ್ ಆಗುತ್ತದೆ. ಕರ್ನಾಟಕದಿಂದಲೂ ಕಾಂಗ್ರೆಸ್ ಬ್ಯಾನ್ ಆಗುತ್ತದೆ. ದೇಶ ಭಕ್ತ ಸಂಘಟನೆಯನ್ನು ಪಿಎಫ್ ಐಗೆ  ಹೋಲಿಸಿದ್ದು ಸರಿಯಲ್ಲ ಎಂದರು.  ಕಾಂಗ್ರೆಸ್ ಗೆ ವಿನಾಶಕಾಲೇ ವಿಪರೀತ ಬುದ್ದಿ ಎಂಬಂತಾಗಿದೆ. ಅದು ಮನಸಿನಲ್ಲಿರುವ ವಿಷವನ್ನು ಕಕ್ಕುತ್ತಿರೋದು ಒಳ್ಳೆಯದು. ಜನತೆಗೆ ಕಾಂಗ್ರೆಸ್ ಬುದ್ದಿ ಮನವರಿಕೆ ಆಗುತ್ತಿದೆ. ರಾಜ್ಯದ ಜನ ಕಾಂಗ್ರೆಸ್ ಗೆ ಅವಕಾಶ ಕೊಡೋದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾನೇ ಇದೆಲ್ಲ ಆಗೋದು. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರೋಲ್ಲ  ಎಂದರು.

ಮುಧೋಳ ಮತಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಭರ್ಜರಿ ರೋಡ್ ಶೋ ನಡೆಯಿತು. ಬಿಜೆಪಿ ಅಭ್ಯರ್ಥಿ ಸಚಿವ ಗೋವಿಂದ ಕಾರಜೋಳ ಪರ ವಿಜಯೇಂದ್ರ ಪ್ರಚಾರ ಕೈಗೊಂಡರು. ಮುಧೋಳ ಪಟ್ಟಣದಲ್ಲಿ ಶಿವಾಜಿ ಸರ್ಕಲ್ ನಿಂದ ಆರಂಭವಾದ ರೋಡ್ ಶೋ ಅಂಬೇಡ್ಕರ್ ಸರ್ಕಲ್, ಬಸವೇಶ್ವರ ಸರ್ಕಲ್, ಬಸ್ ನಿಲ್ದಾಣ ಮೂಲಕ ಗಾಂಧಿ ಸರ್ಕಲ್ ವರೆಗೆ ನಡೆಯಿತು.

ಕಡ್ಡಾಯ ಮತದಾನ ಮಾಡುವಂತೆ ಮನವಿ ಮಾಡಿದ ನವ ವಧು-ವರರು: ಕೋಲಾರ (ಮೇ 04):  ಕೋಲಾರ ಜಿಲ್ಲೆಯ ಮುಳಬಾಗಲಿನಲ್ಲಿ ನೂತನವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ಮೇ 10ರಂದು ತಪ್ಪದೇ ಮತದಾನ ಮಾಡುವಂತೆ ಮದುವೆಗೆ ಬಂದ ಸಂಬಂಧಿಕರಿಗೆ,ಅತಿಥಿಗಳಿಗೆ ವಿಭಿನ್ನವಾಗಿ ಕರೆ ನೀಡಿದರು.

ಉಡುಪಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ: ಭಾರಿ ಕೊಡುಗೆ

ನೂತನ ದಂಪತಿ ಚರಣ್ ರಾಜ್ ಮತ್ತು ಪ್ರಮೀಳಾ ಮತ್ತು ಅವರ ಸಂಬಂಧಿಕರು ಸುಮಾರು 600 ಮಂದಿ ಆಹ್ವಾನಿತರಿಗೆ ಮತ ಹಾಕುವಂತೆ ಫಲಕಗಳನ್ನು ಹಿಡಿದು ಅರಿವು ಮೂಡಿಸುವ ಮೂಲಕ ಗಮನಸೆಳೆದಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮುತ್ಯಾಲಪೇಟೆಯಲ್ಲಿರುವ ಶ್ರೀ ಉದ್ಭವ ಶಿವಲಿಂಗೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ ವಿವಾಹ ಸಮಾರಂಭದಲ್ಲಿ ಈ ಘಟನೆ ನಡೆದಿದ್ದು,ಮುಳಬಾಗಲು ಕ್ಷೇತ್ರದ ಚುನಾವಣಾ ಸ್ವೀಪ್ ಅಧಿಕಾರಿಗಳ ಆಲೋಚನೆಯಿಂದ ಈ ರೀತಿ ವಿಭಿನ್ನವಾಗಿ ಜಾಗೃತಿ ಮೂಡಿಸಲಾಗಿದ್ದು,ಆರೋಗ್ಯ ನಿರೀಕ್ಷಕಿ ಪ್ರತಿಭಾ ಇದೇ ವೇಳೆ ಭಾಗಿಯಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಪುತ್ರ ಯತೀಂದ್ರ ಹೇಳಿಕೆ ವಿವಾದ; ಬೆಳಗಾವಿಯಲ್ಲಿ ಡಿಕೆಶಿ ಅಲರ್ಟ್, ಆಪ್ತರ ಲಂಚ್ ಮೀಟಿಂಗ್!
ನಮಗೆ ಭಿಕ್ಷುಕರಂತೆ ಭಿಕ್ಷೆ ಹಾಕ್ತಾರೆ; ₹10,000 ಕೋಟಿ ಅನುದಾನ ಕೊಡಿ, ಇಲ್ಲ ಪ್ರತ್ಯೇಕ ರಾಜ್ಯ ಮಾಡಿ-ರಾಜು ಕಾಗೆ