ಲೋಕಸಭಾ ಚುನಾವಣೆ 2024: ರಾಜ್ಯದಲ್ಲಿ ಕಾಂಗ್ರೆಸ್‌ಗೆ 24ಕ್ಕೂ ಹೆಚ್ಚಿನ ಸ್ಥಾನ, ಆಜಾದ್

Published : Apr 27, 2024, 09:05 AM IST
ಲೋಕಸಭಾ ಚುನಾವಣೆ 2024: ರಾಜ್ಯದಲ್ಲಿ ಕಾಂಗ್ರೆಸ್‌ಗೆ 24ಕ್ಕೂ ಹೆಚ್ಚಿನ ಸ್ಥಾನ, ಆಜಾದ್

ಸಾರಾಂಶ

ದೇಶದಲ್ಲಿ ಬಿಜೆಪಿ ಪಕ್ಷ ಕೇವಲ 180 ಸ್ಥಾನಗಳನ್ನು ಗಳಿಸುವದರ ಮೂಲಕ ಹೀನಾಯವಾಗಿ ಪರಾಭವಗೊಳ್ಳುತ್ತದೆ. ಈಗಿನ ಪ್ರಧಾನ ಮಂತ್ರಿಗಳು ಈ ಹಿಂದೆ ದೇಶದ ಜನರಿಗೆ ಭರವಸೆ ನೀಡಿರುವದು ಮರೀಚಿಕೆಯಾಗಿದೆ: ಎ.ಎಚ್. ಆಜಾದ್ ಪೇಂಟರ್ 

ಗಂಗಾವತಿ(ಏ.27):  ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 24 ರಿಂದ 26 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಕಾಂಗ್ರೆಸ್ ಮುಖಂಡ ಎ.ಎಚ್.ಆಜಾದ್ ಪೇಂಟರ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಎ.ಎಚ್.ಆಜಾದ್ ಪೇಂಟರ್ ಅವರು, 1965 ರಿಂದ ದೇಶದ ರಾಜಕೀಯ ಗಮನಿಸುತ್ತಾ ಬಂದಿರುತ್ತೇನೆ. ಕೀಳು ಮಟ್ಟದ ರಾಜಕೀಯಲ್ಲಿ ರಾಜಕೀಯ ಪಕ್ಷಗಳು ಇರುವದು ಕಾಣುತ್ತೇವೆ. ಈಗಿನ ರಾಜ್ಯ ಸರಕಾರ ಹಲವಾರು ಯೋಜನೆಗಳನ್ನು ಅನುಷ್ಟಾನಗೊಳಿಸಿದೆ. ಅದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧೀಮಂತ ನಾಯಕರಾಗಿದ್ದಾರೆ. ಇವರು ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ಅವರನ್ನು  ಸೇರಿಸಿಕೊಂಡು ಪ್ರಚಾರ ಸಮಿತಿ ಅದ್ಯಕ್ಷರನ್ನಾಗಿ ಮಾಡುವದರ ಜೊತೆಗೆ ಪ್ರಚಾರ ಕೈಗೊಂಡರೆ ರಾಜ್ಯದಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳಿಸಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದ್ದಾರೆ. 

ಕೊಪ್ಪಳ : ಸಂಗಣ್ಣ ಕರಡಿ ಬೆನ್ನಲ್ಲೇ 50ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಸೇರ್ಪಡೆ

ದೇಶದಲ್ಲಿ ಬಿಜೆಪಿ ಪಕ್ಷ ಕೇವಲ 180 ಸ್ಥಾನಗಳನ್ನು ಗಳಿಸುವದರ ಮೂಲಕ ಹೀನಾಯವಾಗಿ ಪರಾಭವಗೊಳ್ಳುತ್ತದೆ. ಈಗಿನ ಪ್ರಧಾನ ಮಂತ್ರಿಗಳು ಈ ಹಿಂದೆ ದೇಶದ ಜನರಿಗೆ ಭರವಸೆ ನೀಡಿರುವದು ಮರೀಚಿಕೆಯಾಗಿದೆ. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕುತ್ತೇವೆ. ವರ್ಷದಲ್ಲಿ 2 ಕೋಟಿ ಉದ್ಯೋಗಗಳನ್ನು ಸೃಷ್ಟಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ವಿದೇಶದಿಂದ ಕಪ್ಪು ಹಣ ತರುತ್ತೇವೆ ಎಂದು ಸುಳ್ಳು ಹೇಳಿ 10 ವರ್ಷ ರಾಜಕೀಯ ಮಾಡಿ ಕಾಲಹರಣ ಮಾಡಿದ್ದಾರೆ ಎಂದು ಕಿಡಿ ಕಾರಿದ್ದಾರೆ. 

ಹೀಗಾಗಿ ರಾಜ್ಯದ ಜನತೆ ಕಾಂಗ್ರೆಸ್‌ಗೆ ಮತ ಹಾಕಿ ಅತಿ ಹೆಚ್ಚು ಸ್ಥಾನ ಗೆಲ್ಲಿಸಬೇಕೆಂದು ಎ.ಎಚ್. ಆಜಾದ್ ಪೇಂಟರ್ ಮನವಿ ಮಾಡಿಕೊಂಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ಅಗತ್ಯ: ಛಲವಾದಿ ನಾರಾಯಣಸ್ವಾಮಿ