100 ಕ್ಷೇತ್ರಗಳ ಟಿಕೆಟ್‌ ಫೈನಲ್‌: ಕಾಂಗ್ರೆಸ್‌ ಮಹತ್ವದ ಸಭೆ

Published : Jan 29, 2023, 07:58 AM IST
100 ಕ್ಷೇತ್ರಗಳ ಟಿಕೆಟ್‌ ಫೈನಲ್‌: ಕಾಂಗ್ರೆಸ್‌ ಮಹತ್ವದ ಸಭೆ

ಸಾರಾಂಶ

ಫೆಬ್ರವರಿ 10ರೊಳಗೆ 100ಕ್ಕೂ ಹೆಚ್ಚು ಅಭ್ಯರ್ಥಿಗಳ ಪ ಟ್ಟಿಅಂತಿಮಗೊಳಿಸಲು ಪಕ್ಷವು ಭರ್ಜರಿ ಕಸರತ್ತು ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಮೂವರು ಮೇರು ನಾಯಕರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಅವರು ನಗರದ ಖಾಸಗಿ ಹೊಟೇಲ್‌ನಲ್ಲಿ ಫೆ. 1ರಂದು ಸಭೆ ಸೇರಲಿದ್ದಾರೆ. 

ಬೆಂಗಳೂರು(ಜ.29): ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲು ಪಕ್ಷದ ಅಭ್ಯರ್ಥಿಗಳಿಗೆ ಹೆಚ್ಚು ಸಮಯಾವಕಾಶ ನೀಡುವ ಉದ್ದೇಶದಿಂದ ಶೀಘ್ರ ಟಿಕೆಟ್‌ ಅಂತಿಮಗೊಳಿಸಲು ನಿರ್ಧರಿಸಿರುವ ಕಾಂಗ್ರೆಸ್‌ ನಾಯಕತ್ವವು ಫೆ. 1ರಂದು ಮಹತ್ವದ ಸಭೆ ಆಯೋಜಿಸಿದೆ. ಫೆಬ್ರವರಿ 10ರೊಳಗೆ 100ಕ್ಕೂ ಹೆಚ್ಚು ಅಭ್ಯರ್ಥಿಗಳ ಪ ಟ್ಟಿಅಂತಿಮಗೊಳಿಸಲು ಪಕ್ಷವು ಭರ್ಜರಿ ಕಸರತ್ತು ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಮೂವರು ಮೇರು ನಾಯಕರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಅವರು ನಗರದ ಖಾಸಗಿ ಹೊಟೇಲ್‌ನಲ್ಲಿ ಫೆ. 1ರಂದು ಸಭೆ ಸೇರಲಿದ್ದಾರೆ. ಈ ಸಭೆಯಲ್ಲಿ 100ಕ್ಕೂ ಹೆಚ್ಚು ಅಭ್ಯರ್ಥಿಗಳ ಹೆಸರು ಅಖೈರುಗೊಳಿಸುವ ಸಾಧ್ಯತೆಯಿದೆ.

ಕೆಪಿಸಿಸಿಯ ಪ್ರದೇಶ ಚುನಾವಣಾ ಸಮಿತಿ ಸಭೆ ಫೆ.2ರಂದು ನಡೆಯಲಿದ್ದು, ಈ ಸಭೆಗೆ ಪೂರ್ವಭಾವಿಯಾಗಿ ಸಿದ್ದರಾಮಯ್ಯ, ಶಿವಕುಮಾರ್‌ ಹಾಗೂ ಸುರ್ಜೇವಾಲಾ ಅವರು ಅಭ್ಯರ್ಥಿಗಳ ಹೆಸರು ಅಖೈರುಗೊಳಿಸಲು ಫೆ.1ರಂದು ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಟ್ವಿಸ್ಟ್: ರಾಜಕೀಯದ ದಿಕ್ಕು ಬದಲಿಸುತ್ತಾ ಈ ಸುದ್ದಿ?

ಚುನಾವಣಾ ಸಮಿತಿಯಲ್ಲಿ ಸುಮಾರು 30ಕ್ಕೂ ಹೆಚ್ಚು ಸದಸ್ಯರು ಇದ್ದಾರೆ. ಹೀಗಾಗಿ ಈ ಸಭೆಯಲ್ಲಿ ವಿಸ್ತಾರವಾದ ಚರ್ಚೆ ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯಲ್ಲೇ ಪ್ರತಿಕ್ಷೇತ್ರಕ್ಕೂ ಬಂದಿರುವ ಪ್ಯಾನೆಲ್‌ (ಪ್ರತಿಕ್ಷೇತ್ರಕ್ಕೂ ಎರಡಕ್ಕಿಂತ ಹೆಚ್ಚು ಹೆಸರು ಇರುವ ಪಟ್ಟಿ)ನಲ್ಲಿ ಯಾರಿಗೆ ಟಿಕೆಟ್‌ ಕೊಡಬಹುದು ಎಂಬ ಬಗ್ಗೆ ಮೂವರೂ ನಾಯಕರು ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ. ಈ ನಿರ್ಧಾರವನ್ನು ಚುನಾವಣಾ ಸಮಿತಿ ಸಭೆಗೆ ತಿಳಿಸಿ ಅಭಿಪ್ರಾಯ ಸಂಗ್ರಹಿಸುತ್ತಾರೆ. ಇದಾದ ನಂತರ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಹೈಕಮಾಂಡ್‌ ಅನುಮೋದನೆಗೆ ಕಳುಹಿಸಲಾಗುವುದು. ಈ ಪಟ್ಟಿಗೆ ಕಾಂಗ್ರೆಸ್‌ ಹೈಕಮಾಂಡ್‌ ಫೆ. 10ರೊಳಗೆ ಒಪ್ಪಿಗೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಧಿವೇಶನ ವೇಳೆ ಹಳೆಯ ಬೇಡಿಕೆಗಳ ಹೊಸ ಕೂಗು!
ಸದನದಲ್ಲಿ ಆಡಳಿತ, ವಿಪಕ್ಷ ಭಾರೀ ಕದನ ಸಂಭವ!