ಮಹಿಳೆ ಎಳೆದಾಡಿದ ಸಿದ್ದು ವಿರುದ್ಧ ಕಾಂಗ್ರೆಸ್‌ ಆಕ್ರೋಶ

Kannadaprabha News   | Asianet News
Published : Nov 13, 2020, 07:11 AM IST
ಮಹಿಳೆ ಎಳೆದಾಡಿದ ಸಿದ್ದು ವಿರುದ್ಧ ಕಾಂಗ್ರೆಸ್‌ ಆಕ್ರೋಶ

ಸಾರಾಂಶ

ಮಹಿಳೆಯನ್ನು ಎಳೆದಾಡಿದ ಸಿದ್ದು ವಿರುದ್ಧ ಕಾಂಗ್ರೆಸ್ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಬೆಂಗಳೂರು (ನ.13):  ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರ ಪುರಸಭೆ ಚುನಾವಣೆ ವೇಳೆ ಬಿಜೆಪಿ ಶಾಸಕ ಸಿದ್ದು ಸವದಿ ಹಾಗೂ ಅವರ ಬೆಂಬಲಿಗರು ಮಹಿಳಾ ಸದಸ್ಯೆಯರನ್ನು ಎಳೆದಾಡಿ ದೌರ್ಜನ್ಯ ನಡೆಸಿರುವುದರ ವಿರುದ್ಧ ಕಾಂಗ್ರೆಸ್‌ ಉಗ್ರ ಹೋರಾಟ ನಡೆಸಲಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ಮಹಾಲಿಂಗಪುರ ಘಟನೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ‘ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ವೇಳೆ ಮಹಿಳಾ ಸದಸ್ಯೆಯರ ಮೇಲೆ ಸಿದ್ದು ಸವದಿ ಮತ್ತು ಅವರ ಬೆಂಬಲಿಗರು ಎಳೆದಾಡಿ ಹಲ್ಲೆ ಮಾಡಿದ್ದಾರೆ. 

ಮಹಿಳೆ ಜೊತೆ ಅನುಚಿತ ವರ್ತನೆ; ಹಳೆ ವಿಡಿಯೋ ಹರಿಬಿಟ್ಟು ಕಾಂಗ್ರೆಸ್‌ಗೆ ಠಕ್ಕರ್ ನೀಡಿದ ಬಿಜೆಪಿ

ಒಬ್ಬ ಶಾಸಕನಾಗಿ ಮಹಿಳೆಯರ ಮೇಲೆ ಈ ರೀತಿ ದೌರ್ಜನ್ಯ, ಗೂಂಡಾಗಿರಿ ನಡೆಸಿರುವುದು ಎಷ್ಟುಸರಿ. ಕಾಂಗ್ರೆಸ್‌ ಇದನ್ನು ತೀವ್ರವಾಗಿ ಖಂಡಿಸುತ್ತದೆ. ಬಿಜೆಪಿಯವರು ತಾವು ಬಹಳ ಸುಸಂಸ್ಕೃತರು ಎಂದು ಹೇಳಿಕೊಳ್ಳುತ್ತಾರೆ. ಇದೇನಾ ಬಿಜೆಪಿಯವರ ಸಂಸ್ಕೃತಿ, ಇದನ್ನೇನಾ ತಮ್ಮ ಶಾಸಕರಿಗೆ ಕಲಿಸಿಕೊಟ್ಟಿರುವುದು?’ ಎಂದು ತರಾಟೆಗೆ ತೆಗೆದುಕೊಂಡರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ