ಕಾಂಗ್ರೆಸ್‌ ಗೆಲ್ಲಲ್ಲ, ಗೆದ್ದರೂ ಸಿದ್ದು ಸಿಎಂ ಆಗಲ್ಲ: ಪ್ರಹ್ಲಾದ ಜೋಶಿ

Published : May 07, 2023, 01:30 AM IST
ಕಾಂಗ್ರೆಸ್‌ ಗೆಲ್ಲಲ್ಲ, ಗೆದ್ದರೂ ಸಿದ್ದು ಸಿಎಂ ಆಗಲ್ಲ: ಪ್ರಹ್ಲಾದ ಜೋಶಿ

ಸಾರಾಂಶ

ಸ್ವಾತಂತ್ರ್ಯ ನಂತರದ 60 ವರ್ಷಗಳ ಆಡಳಿತದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಕಾಂಗ್ರೆಸ್‌ ಪಕ್ಷ ಯಾವುದೇ ರೀತಿಯಲ್ಲಿ ಶ್ರಮಿಸಲಿಲ್ಲ. ಎಲ್ಲರನ್ನೂ ಬರೀ ಮತ ಪಡೆಯುವ ಸಲುವಾಗಿ ಬಳಸಿಕೊಂಡಿತು ಎಂದು ಕಿಡಿಕಾರಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ 

ಧಾರವಾಡ(ಮೇ.07):  ಕಾಂಗ್ರೆಸ್‌ ಈ ಬಾರಿ ಅಧಿಕಾರಕ್ಕೆ ಬರುವುದಿಲ್ಲ. ಒಂದು ವೇಳೆ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅ​ಧಿಕಾರಕ್ಕೆ ಬಂದರೂ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. 

ನಗರದಲ್ಲಿ ಶನಿವಾರ ನಡೆದ ಹು-ಧಾ ಪಶ್ಚಿಮ ಕ್ಷೇತ್ರದ ಹಿಂದುಳಿದ ವರ್ಗಗಳ ಸಭೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್‌ ಪಕ್ಷ ಹಾಲುಮತದ ಸಿದ್ದರಾಮಯ್ಯ ಅವರನ್ನು ತಮ್ಮ ಮತಗಳಿಕೆಗೆ ಮಾತ್ರ ಬಳಸಿಕೊಳ್ಳುತ್ತಿದೆ. ಹಿಂದುಳಿಗ ವರ್ಗಗಳ ಬಗ್ಗೆ ಕಾಂಗ್ರೆಸ್‌ಗೆ ಯಾವುದೇ ಕಾಳಜಿಯಿಲ್ಲ ಎಂದರು.

ಜಗದೀಶ್‌ ಶೆಟ್ಟರ್‌ ಪರಿಸ್ಥಿತಿ ನೋಡಿದರೆ ಅಯ್ಯೋ ಅನಿಸುತ್ತೆ: ಈಶ್ವರಪ್ಪ

ಸ್ವಾತಂತ್ರ್ಯ ನಂತರದ 60 ವರ್ಷಗಳ ಆಡಳಿತದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಕಾಂಗ್ರೆಸ್‌ ಪಕ್ಷ ಯಾವುದೇ ರೀತಿಯಲ್ಲಿ ಶ್ರಮಿಸಲಿಲ್ಲ. ಎಲ್ಲರನ್ನೂ ಬರೀ ಮತ ಪಡೆಯುವ ಸಲುವಾಗಿ ಬಳಸಿಕೊಂಡಿತು ಎಂದು ಕಿಡಿಕಾರಿದರು. ಆದರೆ, ಮೋದಿ ನೇತೃತ್ವದ ಸರ್ಕಾರ ಅ​ಧಿಕಾರಕ್ಕೆ ಬಂದ ನಂತರ ಓಬಿಸಿ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ಕಲ್ಪಿಸಿತು. ಇದು ಹಿಂದುಳಿದ ವರ್ಗಗಳ ಮೇಲೆ ಬಿಜೆಪಿಗಿರುವ ಕಾಳಜಿಗೆ ನಿದರ್ಶನವಾಗಿದೆ. ಓಬಿಸಿ ವರ್ಗಕ್ಕೆ ಮೀಸಲಾತಿ ಹೆಚ್ಚಳ, ವೈದ್ಯಕೀಯ ಅಧ್ಯಯನದಲ್ಲಿಯೂ ಮೀಸಲಾತಿ ನಿಗದಿ, ವಿದ್ಯಾರ್ಥಿ ನಿಲಯಗಳಿಗೆ ಕೋಟ್ಯಾಂತರ ರೂ.ಅನುದಾನ ನೀಡಲಾಗಿದೆ. ಶಿಷ್ಯವೇತನ ಹೆಚ್ಚಳ ಮಾಡಲಾಗಿದೆ. ಮುದ್ರಾ ಯೋಜನೆಯಲ್ಲಿಯೂ ಈ ವರ್ಗಗಳಿಗೆ ಹೆಚ್ಚು ಅನುಕೂಲ ಆಗಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ