ಲೋಕಸಮರ: ಈ ಬಾರಿ ದಕ್ಷಿಣ ಕನ್ನಡದಲ್ಲಿ ಬದಲಾವಣೆ ಪಕ್ಕಾ! ದಿನೇಶ್‌ ಗುಂಡೂರಾವ್ ಭವಿಷ್ಯ!

Published : Feb 17, 2024, 10:10 AM ISTUpdated : Feb 17, 2024, 10:39 AM IST
ಲೋಕಸಮರ: ಈ ಬಾರಿ ದಕ್ಷಿಣ ಕನ್ನಡದಲ್ಲಿ ಬದಲಾವಣೆ ಪಕ್ಕಾ! ದಿನೇಶ್‌ ಗುಂಡೂರಾವ್ ಭವಿಷ್ಯ!

ಸಾರಾಂಶ

ಕೊಡಗಿನಲ್ಲಿ ನಾವು ಗೆದ್ದೇ ಇಲ್ಲ ಗೆದ್ದೇ ಇಲ್ಲ ಅಂತಿದ್ರು. ಮೊನ್ನೆ ಎರಡು ಶಾಸಕ‌ ಸ್ಥಾನಗಳನ್ನ ಗೆದ್ದಿದೇವೆ. ಅದೇ ರೀತಿ ಜ‌ನರ ಮನಸ್ಸನ್ನ ನಾವು ಗೆಲ್ಲಬೇಕು. ಈ ಸಲ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದು ಬದಲಾವಣೆ ಆಗುತ್ತೆ. ಜನರಿಗೂ ಇದನ್ನು‌ ನೋಡಿ‌ನೋಡಿ‌ ಅವರಿಗೂ ಸಾಕಾಗಿ ಹೋಗಿದೆ ಎಂದು ಹೇಳಿದ ಸಚಿವ ದಿನೇಶ್ ಗುಂಡೂರಾವ್ 

ಮಂಗಳೂರು(ಫೆ.17): ಮಂಗಳೂರಲ್ಲಿ ನಾವು ಪಾರ್ಲಿಮೆಂಟ್ ಗೆಲ್ಲೋದಕ್ಕೆ ಆಗಿಲ್ಲ‌ ಇದನ್ನ ಒಪ್ಪಿಕೊಳ್ತೇವೆ. ಆದ್ರೆ ನಮ್ಮ ಪ್ರಯತ್ನವನ್ನು ನಾವು ಮಾಡ್ತೇವೆ. ಜನರ ಮುಂದೆ ಕೊಟ್ಟಿರುವ ಮಾತು ಉಳಿಸಿಕೊಂಡಿರುವ ಸರ್ಕಾರ ನಮ್ಮದು. ಒಳ್ಳೆಯ ಕೆಲಸ ಮಾಡಲು ಮುಖ್ಯಮಂತ್ರಿಗಳು ಮುಂದೆ ಹೆಜ್ಜೆ ಇಡ್ತಿದ್ದಾರೆ. ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪ್ರತಿಪಾದನೆ ಮಾಡ್ತಿದ್ದಾರೆ. ಜನರ ವಿಶ್ವಾಸ ಗಳಿಸಲು ನಮ್ಮ ಪ್ರಾಮಾಣಿಕ ಪ್ರಯತ್ನ ಇದ್ದೇ ಇರುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಇಂದು(ಶನಿವಾರ) ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು, ಕೊಡಗಿನಲ್ಲಿ ನಾವು ಗೆದ್ದೇ ಇಲ್ಲ ಗೆದ್ದೇ ಇಲ್ಲ ಅಂತಿದ್ರು. ಮೊನ್ನೆ ಎರಡು ಶಾಸಕ‌ ಸ್ಥಾನಗಳನ್ನ ಗೆದ್ದಿದೇವೆ. ಅದೇ ರೀತಿ ಜ‌ನರ ಮನಸ್ಸನ್ನ ನಾವು ಗೆಲ್ಲಬೇಕು. ಈ ಸಲ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದು ಬದಲಾವಣೆ ಆಗುತ್ತೆ. ಜನರಿಗೂ ಇದನ್ನು‌ ನೋಡಿ‌ನೋಡಿ‌ ಅವರಿಗೂ ಸಾಕಾಗಿ ಹೋಗಿದೆ ಎಂದು ಹೇಳಿದ್ದಾರೆ. 

'ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ' ತೀವ್ರ ಚರ್ಚೆ ಹುಟ್ಟುಹಾಕಿದ ಶಾಸಕ ಹರೀಶ್ ಪೂಂಜಾರ ಮತ್ತೊಂದು ಪೋಸ್ಟ್!

ಬರೀ ಧರ್ಮ, ಜಾತಿ, ಸ್ವಾರ್ಥ, ಪ್ರಚೋದನಕಾರಿ ಮಾತು ಇದೇ ಅಗಿದೆ. ಈ ಬಗ್ಗೆ ಜನರಿಗೆ ಅರ್ಥವಾಗುವ ರೀತಿ ನಾವು ಪ್ರಚಾರ ಮಾಡ್ತೇವೆ. ನಿಮಗೆ ಅಭಿವೃದ್ಧಿ, ಶಾಂತಿ, ನೆಮ್ಮದಿ ಬೇಕಾ ಅಥವಾ ಈ ಮಾತುಗಳನ್ನೇ ಕೇಳಿಕೊಂಡು ಹೋಗ್ಬೇಕಾ ಎಂಬ ಪ್ರಶ್ನೆಯನ್ನು ಜನರ ಮುಂದಿಡುತ್ತೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!