'ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ 25,000 ಮತಗಳ ಅಂತರದಿಂದ ಗೆಲುವುದು ನಿಶ್ಚಿತ'

Published : Oct 04, 2021, 07:30 PM ISTUpdated : Oct 04, 2021, 07:33 PM IST
'ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ 25,000 ಮತಗಳ ಅಂತರದಿಂದ ಗೆಲುವುದು ನಿಶ್ಚಿತ'

ಸಾರಾಂಶ

* ರಂಗೇರಿದ ಸಿಂದಗಿ ವಿಧಾನಸಭಾ ಉಪಚುನಾವಣೆ * ಕಾಂಗ್ರೆಸ್‌ನಿಂದ ಅಶೋಕ್ ಮನಗೂಳಿ ಅಖಾಡಕ್ಕೆ * 25,000 ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸದಲ್ಲಿ ಕಾಂಗ್ರೆಸ್ ನಾಯಕರು

ವಿಜಯಪುರ, (ಅ.04): ಜಿಲ್ಲೆಯ ಸಿಂದಗಿ ವಿಧಾಸನಭಾ ಕ್ಷೇತ್ರಕ್ಕೆ ಉಪಚುನಾವಣೆ  (Sindagi Assembly By Election)  ದಿನಾಂಕ ನಿಗದಿಯಾಗಿದ್ದು, ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ.

ಇನ್ನು ಈ ಬಗ್ಗೆ ಸಿಂದಗಿಯಲ್ಲಿ ಇಂದು (ಅ.04) ಪ್ರತಿಕ್ರಿಯಿಸಿರುವ ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ (Eshwar Khandre),  ಅಕ್ಟೋಬರ್ 30ರಂದು ನಡೆಯುವ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿಕಾಂಗ್ರೆಸ್ 25,000 ಮತಗಳ ಅಂತರದಿಂದ ಗೆಲುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿಂದಗಿ ವಿಧಾನಸಭೆ ಬೈ ಎಲೆಕ್ಷನ್​ಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್​

ಕಾಂಗ್ರೆಸ್ (Congress) ನಾಯಕರು ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ. ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ. ಸಿಂದಗಿ, ಹಾನಗಲ್ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲ್ಲುತ್ತೇವೆ. ಒಮ್ಮತದ ಅಭ್ಯರ್ಥಿಯಾಗಿ ಅಶೋಕ್ ಮನಗೂಳಿಯನ್ನು ಆಯ್ಕೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು. 

ಅಕ್ಟೋಬರ್ 8ರಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಲಾಗುತ್ತೆ. ಬಿಜೆಪಿ ದುರಾಡಳಿತಕ್ಕೆ ಮತದಾರರು ತಕ್ಕ ಪಾಠ ಕಲಿಸುತ್ತಾರೆ ಎಂದರು.

ಕಾಂಗ್ರೆಸ್‌ನಿಂದ ಅಶೋಕ್ ಮನಗೂಳಿ ಅಖಾಡಕ್ಕಿಳಿದಿದ್ರೆ, ಜೆಡಿಎಸ್‌ನಿಂದ ನಾಜಿಯಾ ಶಕೀಲ್ ಅಂಗಡಿ ಅವರು ಸ್ಪರ್ಧಿಸಿದ್ದಾರೆ. ಇನ್ನು ಬಿಜೆಪಿ ಇನ್ನೂ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿಲ್ಲ. 

ಅ.8 ರಂದು ನಾಮ ಪತ್ರ ಸಲ್ಲಿಕೆ ಕೊನೆಯ ದಿನವಾಗಿದೆ. ಅ.11 ರಂದು ನಾಮ ಪತ್ರಗಳ ಪರಿಶೀಲನೆ ನಡೆಯಲಿದೆ. ಅ.13 ನಾಮಪತ್ರ ಹಿಂಪಡೆಯುವ ಕೊನೆಯ ದಿನವಾಗಿರಲಿದೆ. ನ. 2ರಂದು ಮತ ಎಣಿಕೆ ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ