ನಾಮಪತ್ರ ವಾಪಸ್ ಪಡೆದು ಚುನಾವಣಾ ಅಖಾಡದಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ

Published : Oct 31, 2020, 03:57 PM ISTUpdated : Oct 31, 2020, 04:03 PM IST
ನಾಮಪತ್ರ ವಾಪಸ್ ಪಡೆದು ಚುನಾವಣಾ ಅಖಾಡದಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ

ಸಾರಾಂಶ

ಬಿಜೆಪಿ ಅಭ್ಯರ್ಥಿ ಸಲ್ಲಿಸಿದ್ದ ನಾಮಪತ್ರವನ್ನು ವಾಪಸ್ ಪಡೆದು ಚುನಾವಣಾ ಅಖಾಡದಿಂದೆ ಸರಿದಿದ್ದಾರೆ. ಇದರಿಂದ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಹಾವೇರಿ, (ಅ.31): ಇಲ್ಲಿನ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಇಂದು (ಶನಿವಾರ) ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ.

ಅಧ್ಯಕ್ಷ-ಉಪಾಧ್ಯಕ್ಷ ಎರಡು ಸ್ಥಾನಗಳಲ್ಲಿ ಗೆದ್ದುಕೊಂಡಿದೆ. ಅಧ್ಯಕ್ಷರಾಗಿ‌ ಸಂಜೀವ ಕುಮಾರ ನೀರಲಗಿ, ಉಪಾಧ್ಯಕ್ಷರಾಗಿ ಜಹೀದಾಬಾನು ಜಮಾದಾರ ಅವಿರೋಧ ಆಯ್ಕೆಯಾದರು.

ಆಪರೇಷನ್ ಕಮಲ ಸಕ್ಸಸ್: ಸಚಿವ ಸುಧಾಕರ್ ವರ್ಚಸ್‌ನಿಂದ ಕಾಂಗ್ರೆಸ್‌ಗೆ ಮರ್ಮಾಘಾತ

ಬಿಜೆಪಿ ಸದಸ್ಯರ ಸಂಖ್ಯಾ ಬಲ ಕೊರತೆ ಹಿನ್ನೆಲೆ ಬಿಜೆಪಿ ಬೆಂಬಲಿತ ಬಸವರಾಜ ಬೆಳವಡಿ ನಾಮಪತ್ರ ಹಿಂಪಡೆದಿದ್ದರಿಂದ ಕಾಂಗ್ರೆಸ್ ಸಂಜೀವಕುಮಾರ ನೀರಲಗಿ ಅವಿರೋಧವಾಗಿ ಗೆಲುವು ಸಾಧಿಸಿದರು.

ನಗರಸಭೆ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಹಾಗೂ ಬಿಜೆಪಿ ಭಾರಿ ಪೈಪೋಟಿ ನಡೆಸಿದ್ದವು. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯಲ್ಲಿ ಪಕ್ಷೇತರರು ನಿರ್ಣಾಯಕರಾಗಿದ್ದರು. ಅಂತಿಮವಾಗಿ ನ4 ಪಕ್ಷೇತರರ ಬೆಂಬಲ ಪಡೆಯುವ ಮೂಲಕ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಿತು.

ಚುನಾವಣಾಧಿಕಾರಿಗಳು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಘೋಷಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ