ಇಂದಿರಾ ಗಾಂಧಿಯಿಂದ ಸಿದ್ದರಾಮಯ್ಯನವರೆಗೆ ಕಾಂಗ್ರೆಸ್ ಪಕ್ಷದ ಎಲ್ಲರೂ ಬಡವರ ಪರ ಕೆಲಸ ಮಾಡಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್

By Kannadaprabha NewsFirst Published Mar 5, 2024, 8:49 AM IST
Highlights

ಭಾರತೀಯ ಜನತಾ ಪಾರ್ಟಿಗೆ ಕೇವಲ ಶ್ರೀಮಂತ ಉದ್ಯಮಿಗಳ ಪರವಾಗಿ ಕೆಲಸ ಮಾಡುವುದು ಗೊತ್ತು. ಆದರೆ ಇಂದಿರಾ ಗಾಂಧಿಯವರಿಂದ ಹಿಡಿದು ಸಿದ್ದರಾಮಯ್ಯನವರವರೆಗೆ ಕಾಂಗ್ರೆಸ್ ಪಕ್ಷದ ಎಲ್ಲರೂ ಬಡವರ ಪರ ಕೆಲಸ ಮಾಡುತ್ತ ಬಂದಿದ್ದಾರೆ. ಬಡವರಿಗಾಗಿ ನೂರಾರು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಳಗಾವಿ (ಮಾ.5): ಭಾರತೀಯ ಜನತಾ ಪಾರ್ಟಿಗೆ ಕೇವಲ ಶ್ರೀಮಂತ ಉದ್ಯಮಿಗಳ ಪರವಾಗಿ ಕೆಲಸ ಮಾಡುವುದು ಗೊತ್ತು. ಆದರೆ ಇಂದಿರಾ ಗಾಂಧಿಯವರಿಂದ ಹಿಡಿದು ಸಿದ್ದರಾಮಯ್ಯನವರವರೆಗೆ ಕಾಂಗ್ರೆಸ್ ಪಕ್ಷದ ಎಲ್ಲರೂ ಬಡವರ ಪರ ಕೆಲಸ ಮಾಡುತ್ತ ಬಂದಿದ್ದಾರೆ. ಬಡವರಿಗಾಗಿ ನೂರಾರು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ತಾಲೂಕು ಆಡಳಿತ, ತಾಪಂ ಬೆಳಗಾವಿ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಆಸ್ತಿ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡವರ ಪಟ್ಟಿ ಬಿಡುಗಡೆ, ಬಿಬಿಎಂಪಿ ವಲಯವಾರು ಲಿಸ್ಟ್ ಇಲ್ಲಿದೆ

ರಾಜ್ಯ ಕಾಂಗ್ರೆಸ್ ಸರ್ಕಾರ ಬಡ ಜನರ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಮಧ್ಯವರ್ತಿಗಳಿಲ್ಲದೆ ಜಾರಿಯಾಗುತ್ತಿರುವ ಅಪರೂಪದ ಯೋಜನೆ ಇದಾಗಿದೆ. ಈ ಗ್ಯಾರಂಟಿ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ರಾಜ್ಯದ ಎಲ್ಲ ಕಡೆ ಗ್ಯಾರಂಟಿ ಸಮಾವೇಶಗಳನ್ನು ಆಯೋಜಿಸಲಾಗುತ್ತಿದೆ. ಗ್ಯಾರಂಟಿ ಯೋಜನೆಗಳು ಎಷ್ಟರ ಮಟ್ಟಿಗೆ ಜನರಿಗೆ ತಲುಪಿದೆ? ಯೋಜನೆಯಿಂದ ಜನರಿಗೆ ಹೇಗೆ ಪ್ರಯೋಜನವಾಗುತ್ತಿದೆ. ಯಾರಿಗಾದರೂ ತಲುಪದಿದ್ದರೆ ಅದಕ್ಕೆ ಕಾರಣವೇನು ಎನ್ನುವುದನ್ನೆಲ್ಲ ತಿಳಿಯುವುದಕ್ಕಾಗಿ ಎಲ್ಲ ಕಡೆ ಸಮಾವೇಶ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಬಿಜೆಪಿಯವರಿಗೆ ಕೇವಲ ಅಂಬಾನಿ, ಅದಾನಿಯಂತಹ ಶ್ರೀಮಂತ ಉದ್ಯಮಿಗಳಿಗೆ ಯೋಜನೆಗಳನ್ನು ಸಂತೋಷವಾಗುತ್ತದೆ. ಆದರೆ ಬಡವರಿಗಾಗಿ ಕೆಲಸ ಮಾಡುವುದು ಕಾಂಗ್ರೆಸ್ ಪಕ್ಷ. ಇಂದಿರಾಗಾಂಧಿ ಕಾಲದಿಂದ ಇಂದಿನ ಸಿದ್ದರಾಮಯ್ಯನವರವರೆಗೆ ಬಡವರಿಗಾಗಿ ಕಾಂಗ್ರೆಸ್ ಎಷ್ಟೊಂದು ಯೋಜನೆಗಳನ್ನು ಜಾರಿಗೆ ತಂದಿದೆ ಎನ್ನುವುದನ್ನು ನೋಡಿ. ಈ ಯೋಜನೆಗಳಿಂದ ಜನರ ಜೀವನಕ್ಕೆ ಅನುಕೂಲವಾಗುತ್ತಿದೆ ಎಂದ ಅವರು, ಕಾಂಗ್ರೆಸ್ ತನ್ನ 6ನೇ ಗ್ಯಾರಂಟಿಯಾಗಿರುವ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವಧನ ಏರಿಸುವುದಕ್ಕೂ ಬದ್ದವಾಗಿದೆ ಎಂದು ತಿಳಿಸಿದರು.

ನಾನು ರಾಜ್ಯದ ಎಲ್ಲೇ ಹೋದರೂ ನನ್ನ ಗ್ರಾಮೀಣ ಕ್ಷೇತ್ರವನ್ನು ಸ್ಮರಿಸಿ, ಸುಳೇಬಾವಿಯ ಮಹಾಲಕ್ಷ್ಮೀ, ಉಚಗಾಂವ್ ಮಳೆಕರ್ಣಿಕಾ ದೇವರಿಗೆ ವಂದಿಸಿ ಭಾಷಣ ಆರಂಭಿಸುತ್ತೇನೆ. ನಿಮ್ಮ ಆಶೀರ್ವಾದದಿಂದಾಗಿ 7 ಕೋಟಿ ಜನರಿಗೆ ಮಂತ್ರಿಯಾಗಿ ನಾನು ಕೆಲಸ ಮಾಡಲು ಸಾಧ್ಯವಾಗಿದೆ ಎಂದು ಸಚಿವರು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಕಾಂಗ್ರೆಸ್ ಪಕ್ಷ ಸದಾ ಬಡವರ, ಜನಸಾಮಾನ್ಯರ ಪರವಾಗಿ ನಿಲ್ಲುವ ಪಕ್ಷ. ಆದರೆ ಬಿಜೆಪಿಯವರು ಯಾರ ಪರ ನಿಂತಿದ್ದಾರೆ ಎನ್ನುವುದನ್ನು ತಿಳಿಸಬೇಕು. ಶ್ರೀಮಂತ ಉದ್ಯಮಿಗಳ ಪರವಾಗಿ ಮಾತ್ರ ನಿಲ್ಲುವುದು ನಿಮ್ಮ ಧ್ಯೇಯವೇ ಎಂದು ಪ್ರಶ್ನಿಸಿದರು.

'ನಾವು ಮಕ್ಳು ಮರಿ ಈಗ ಹೊಟ್ಟೆತುಂಬಾ ಉಣ್ತಿವಮ್ಮ': ಸಚಿವೆ ಹೆಬ್ಬಾಳ್ಕರ್ ಗಲ್ಲ ಸವರಿ ಗ್ಯಾರಂಟಿಗೆ ಮೆಚ್ಚುಗೆ ಸೂಚಿಸಿದ ವೃದ್ಧೆ

ರಾಜ್ಯದ ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿದ್ದಲ್ಲದೆ ₹3.71 ಲಕ್ಷ ಕೋಟಿಗಳ ಬಜೆಟ್ ಅನ್ನು ಮಂಡಿಸಿದೆ. ಗ್ಯಾರಂಟಿ ಜೊತೆಗೆ ಅಭಿವೃದ್ಧಿಯಲ್ಲೂ ನಾವು ಹಿಂದೆ ಬಿದ್ದಿಲ್ಲ. ಆದರೆ ಕೇಂದ್ರ ಸರ್ಕಾರ ನಮ್ಮ ತೆರಿಗೆ ಹಣವನ್ನು ನಮಗೆ ಕೊಡುತ್ತಿಲ್ಲ. ಬೇರೆ ರಾಜ್ಯಗಳಿಗೆ ದೊಡ್ಡ ಪ್ರಮಾಣದಲ್ಲಿ ನೆರವು ನೀಡುವ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಾತ್ರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಅವರು ಏನೇ ಅನ್ಯಾಯ ಮಾಡಿದರೂ ನಮ್ಮ ಗ್ಯಾರಂಟಿಯೂ ಇರುತ್ತದೆ. ಅಭಿವೃದ್ಧಿಯೂ ಇರುತ್ತದೆ. ಜನರು ಸಂಶಯ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.

click me!