15 ಶಾಸಕರಿಗೆ ಮಾತ್ರ ನಿಗಮ ಅಧ್ಯಕ್ಷಗಿರಿ, 2.5 ವರ್ಷ ಮಾತ್ರ ಅಧಿಕಾ​ರಾವಧಿ: ಡಿಕೆಶಿ

Published : Sep 06, 2023, 02:30 AM IST
15 ಶಾಸಕರಿಗೆ ಮಾತ್ರ ನಿಗಮ ಅಧ್ಯಕ್ಷಗಿರಿ, 2.5 ವರ್ಷ ಮಾತ್ರ ಅಧಿಕಾ​ರಾವಧಿ: ಡಿಕೆಶಿ

ಸಾರಾಂಶ

ನಾನು ಮಾತ್ರ ಮಂತ್ರಿಯಾಗಿ, ಉಳಿದ ಶಾಸಕರಿಗೆ ಅಧಿಕಾರ ಸಿಗದಿದ್ದರೆ ತಪ್ಪಲ್ಲವೇ? ಎಲ್ಲರಿಗೂ ಅವಕಾಶ ಸಿಕ್ಕೇ ಸಿಗು​ತ್ತದೆ. ನಿಗಮ-ಮಂಡಳಿಗಳಲ್ಲಿ ಶಾಸಕರು ಹಾಗೂ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

ಕನಕಪುರ/ರಾಮನಗರ(ಸೆ.06):  ನಿಗ​ಮ-ಮಂಡ​ಳಿ ನೇಮ​ಕಾ​ತಿ ವೇಳೆ 15 ಮಂದಿ ಕಾಂಗ್ರೆಸ್‌ ಶಾಸ​ಕ​ರಿಗೆ ಮಾತ್ರ ಅವಕಾಶ ಕೊಡು​ತ್ತೇ​ವೆ. ಉಳಿದ ಸ್ಥಾನಗಳನ್ನು ಕಾರ್ಯಕರ್ತರಿಗೆ ನೀಡಲಿದ್ದು, ಅವರಿಗೆ ಎರಡೂವರೆ ವರ್ಷದ ಅಧಿಕಾ​ರಾ​ವಧಿ ನೀಡು​ತ್ತೇವೆ ಎಂದು ಉಪ ಮುಖ್ಯ​ಮಂತ್ರಿ ಡಿ.ಕೆ.​ಶಿ​ವ​ಕು​ಮಾರ್‌ ಹೇಳಿ​ದ್ದಾರೆ.

ಕನ​ಕ​ಪು​ರ​ದಲ್ಲಿ ಮಂಗ​ಳ​ವಾರ ಸುದ್ದಿ​ಗಾ​ರರ ಜತೆಗೆ ಮಾತ​ನಾಡಿ, ನಾನು ಮಾತ್ರ ಮಂತ್ರಿಯಾಗಿ, ಉಳಿದ ಶಾಸಕರಿಗೆ ಅಧಿಕಾರ ಸಿಗದಿದ್ದರೆ ತಪ್ಪಲ್ಲವೇ? ಎಲ್ಲರಿಗೂ ಅವಕಾಶ ಸಿಕ್ಕೇ ಸಿಗು​ತ್ತದೆ. ನಿಗಮ-ಮಂಡಳಿಗಳಲ್ಲಿ ಶಾಸಕರು ಹಾಗೂ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು. ಕಾಂಗ್ರೆ​ಸ್‌ನ ಎಲ್ಲಾ ಶಾಸಕರು ನಿಗಮ-ಮಂಡಳಿಗಳಲ್ಲಿ ಅವಕಾಶ ಕೇಳುತ್ತಿಲ್ಲ. 20-25 ಮಂದಿ ಮಾತ್ರ ಕೇಳುತ್ತಿದ್ದಾರೆ. ಅದರಲ್ಲಿ 15 ಮಂದಿಗೆ ನಿಗ​ಮ-ಮಂಡಳಿ ನೇಮಕ ವೇಳೆ ಅವ​ಕಾಶ ನೀಡು​ತ್ತೇವೆ ಎಂದು ತಿಳಿ​ಸಿ​ದ​ರು.

ರಾಹುಲ್‌ಗಾಂಧಿ ಯಾತ್ರೆಗೆ 1 ವರ್ಷ ಹಿನ್ನೆಲೆ; ನಾಡಿದ್ದು ಕಾಂಗ್ರೆಸ್‌ ಮತ್ತೆ ಪಾದಯಾತ್ರೆ

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಮುಖ್ಯಮಂತ್ರಿಗಳು ನಿಯಮ ಬದಲಾವಣೆ ಮಾಡುತ್ತಿರುವ ಕುರಿತ ಪ್ರಶ್ನೆ​ಗೆ, ಅದು ಆಡಳಿತಾತ್ಮಕ ವಿಚಾರ. ಆಡಳಿತಕ್ಕೆ ಅನುಕೂಲವಾಗುವಂತೆ ಕೆಲ​ವೊಂದು ಬದ​ಲಾ​ವಣೆ ಮಾಡಲಾಗುತ್ತದೆ. ಪ್ರತಿ ಸರ್ಕಾರ ಬಂದಾಗಲೂ ಈ ರೀತಿಯ ಬದ​ಲಾ​ವಣೆ ಆಗು​ತ್ತದೆ ಎಂದು ಪ್ರತಿ​ಕ್ರಿ​ಯಿ​ಸಿ​ದ​ರು.

ನಾಳೆ ಪಾದ​ಯಾ​ತ್ರೆ:

ಭಾರತ್‌ ಜೋಡೋ ಯಾತ್ರೆಗೆ ಸೆ.7ರಂದು ಒಂದು ವರ್ಷ ತುಂಬುತ್ತದೆ. ಇದೇ ನೆನಪಿಗೆ ಬೆಂಗ​ಳೂ​ರಿ​ನ​ಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಬೇಕು ಎನ್ನುವ ಆಲೋಚನೆ ಇತ್ತು. ಬೆಂಗಳೂರಿನಲ್ಲಿ ಟ್ರಾಫಿಕ್‌ ಸಮಸ್ಯೆ ಆಗುತ್ತದೆ ಎನ್ನುವ ಕಾರಣಕ್ಕೆ ರಾಮನಗರದಲ್ಲಿ ಆ ಕಾರ್ಯ​ಕ್ರಮ ಮಾಡುತ್ತಿದ್ದೇವೆ. ಪಾದ​ಯಾ​ತ್ರೆ​ಯಲ್ಲಿ ಮುಖ್ಯಮಂತ್ರಿಗಳೂ ನಮ್ಮ ಜೊತೆ ಹೆಜ್ಜೆ ಹಾಕಲಿದ್ದಾರೆ ಎಂದು ಡಿ.ಕೆ.​ಶಿ​ವ​ಕು​ಮಾರ್‌ ತಿಳಿ​ಸಿ​ದ​ರು.

ಮೇಕೆದಾಟು ಪಾದಯಾತ್ರೆ ವೇಳೆ ಚಳವಳಿಗಾರರು ಎಲ್ಲಿದ್ರು?: ಡಿಕೆಶಿ

ಅದೇ ದಿನ ಸಚಿವ ಸಂಪುಟ ಸಭೆಯೂ ಇರುವ ಕಾರಣ ಇತರೆ ಸಚಿವರಿಗೆ ಸೆ.8ರಂದು ಪಾದ​ಯಾತ್ರೆ ಮಾಡಬಹುದು ಎಂದು ಸೂಚನೆ ನೀಡಿದ್ದೇವೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಒಂದು ಗಂಟೆ ಕಾಲ ಸಂಜೆ 5ರಿಂದ 6 ಗಂಟೆ ತನಕ ಈ ಕಾರ್ಯಕ್ರಮ ನಡೆಯಲಿದೆ ಎಂದು ಶಿವಕುಮಾರ್‌ ಹೇಳಿದರು.

20-25 ಶಾಸಕರಷ್ಟೇ ಹುದ್ದೆ ಕೇಳುತ್ತಿದ್ದಾರೆ

ನಾನು ಮಾತ್ರ ಮಂತ್ರಿಯಾಗಿ, ಉಳಿದ ಶಾಸಕರಿಗೆ ಅಧಿಕಾರ ಸಿಗದಿದ್ದರೆ ತಪ್ಪಲ್ಲವೇ? ಎಲ್ಲರಿಗೂ ಅವಕಾಶ ಸಿಕ್ಕೇ ಸಿಗು​ತ್ತದೆ. ನಿಗಮ-ಮಂಡಳಿಗಳಲ್ಲಿ ಅವಕಾಶ ನೀಡಲಾಗುವುದು. ಕಾಂಗ್ರೆ​ಸ್‌ನ ಎಲ್ಲಾ ಶಾಸಕರು ನಿಗಮ-ಮಂಡಳಿಗಳಲ್ಲಿ ಅವಕಾಶ ಕೇಳುತ್ತಿಲ್ಲ. 20-25 ಮಂದಿ ಮಾತ್ರ ಕೇಳುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!