ಕುಮಾರಸ್ವಾಮಿ ಫೋಟೋದೊಂದಿಗೆ 'ಮಿಣಿ ಮಿಣಿ' ಶಬ್ಧ ಬಳಸುವವರಿಗೆ ಖಡಕ್ ಎಚ್ಚರಿಕೆ

Published : Feb 02, 2020, 06:57 PM IST
ಕುಮಾರಸ್ವಾಮಿ ಫೋಟೋದೊಂದಿಗೆ 'ಮಿಣಿ ಮಿಣಿ' ಶಬ್ಧ ಬಳಸುವವರಿಗೆ ಖಡಕ್ ಎಚ್ಚರಿಕೆ

ಸಾರಾಂಶ

ಕುಮಾರಸ್ವಾಮಿ ಇರುವ ವಿಡಿಯೋ ಅಥವಾ ಫೋಟೋದೊಂದಿಗೆ “ಮಿಣಿ ಮಿಣಿ’ ಶಬ್ದ ಬಳಸುವುದಕ್ಕೆ ಕೋರ್ಟ್ ತಡೆ ನೀಡಿದೆ.ಇದರಿಂದ ಕುಮಾರಸ್ವಾಮಿ ಟ್ರೋಲ್ ಗಳಿಂದ ಕೊಂಚ ನಿಟ್ಟುಸಿರುವ ಬಿಡುವಂತಾಗಿದೆ.

ಬೆಂಗಳೂರು, [ಫೆ.02]: ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಚಿತ್ರ ಅಥವ ಹೆಸರಿನ ಜೊತೆ 'ಮಿಣಿ ಮಿಣಿ' ಶಬ್ದ ಬಳಸಿ ಅಪಹಾಸ್ಯ ಮಾಡಬಾರದು ಎಂದು ನ್ಯಾಯಾಲಯ ಆದೇಶ ನೀಡಿದೆ. 

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು  'ಮಿಣಿ ಮಿಣಿ ಪೌಡರ್' ಎಂದು ಹೇಳಿಕೆ ನೀಡಿದ್ದರು. ಇದು ಸಾಮಾಜಿಕ ಜಾಲತಾಣಗಳಲ್ಲಿ  ಭಾರೀ ಸದ್ದು ಮಾಡುತ್ತಿದೆ. ಅಷ್ಟೇ ಅಲ್ಲದೇ ಎಚ್ ಡಿಕೆ ಫೋಟೋ ಹಾಗೂ ವಿಡಿಯೋಗಳೊಂದಿಗೆ ಫುಲ್ ಟ್ರೋಲ್ ಆಗುತ್ತಿದೆ.

ಮಿಣಿ ಮಿಣಿ ಪೌಡರ್‌ಗೆ ಸಿಡಿಮಿಡಿ: ಕೋರ್ಟ್ ಮೆಟ್ಟಿಲೇರಿದ ದೇವೇಗೌಡರ ಕುಡಿ!

ಇದರಿಂದ ನೊಂದುಕೊಂಡಿರುವ ಕುಮಾರಸ್ವಾಮಿ,  'ಮಿಣಿ ಮಿಣಿ ಪೌಡರ್' ಪದ ಬಳಕೆಗೆ ನಿರ್ಬಂಧ ಹೇರಬೇಕೆಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸುವ ಮೂಲಕ ಮನವಿ ಮಾಡಿಕೊಂಡಿದ್ದರು.

ಕುಮಾರಸ್ವಾಮಿ ಪರ ವಕೀಲ ಇಸ್ಮಾಯಿಲ್ ಸಲ್ಲಿಸಿದ್ ಅರ್ಜಿಯನ್ನು ಪರಿಗಣಿಸಿದ ಕೋರ್ಟ್, ಯಾವುದೇ ಕಾರಣಕ್ಕೂ ಕುಮಾರಸ್ವಾಮಿ ಚಿತ್ರ ಅಥವ ಹೆಸರಿನ ಜೊತೆ 'ಮಿಣಿ ಮಿಣಿ' ಶಬ್ದ ಬಳಸಬಾರದು ಎಂದು ನಿರ್ಬಂಧಿಸಿ ಆದೇಶ ಹೊರಡಿಸಿದೆ.

ಪತ್ರಿಕೆ, ಟಿ.ವಿ ಚಾನೆಲ್‌, ಸಾಮಾಜಿಕ ಜಾಲತಾಣ ಸೇರಿ ಯಾವುದೇ ಮಾಧ್ಯಮಗಳಲ್ಲಿ ಮಿಣಿ ಮಿಣಿ ಪದವನ್ನು ಕುಮಾರಸ್ವಾಮಿ ಚಿತ್ರ ಅಥವಾ ವಿಡಿಯೋದೊಂದಿಗೆ ಸೇರಿಸಿ ಪ್ರಕಟಣೆ ಅಥವಾ ಪ್ರಸಾರ ಮಾಡಬಾರದು ಕೋರ್ಟ್ ಸೂಚಿಸಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಬಳಿಕ ಎಚ್. ಡಿ. ಕುಮಾರಸ್ವಾಮಿ ಹೇಳಿಕೆಯೊಂದನ್ನು ನೀಡಿದ್ದರು. ಆಗ ಬಳಕೆ ಮಾಡಿದ 'ಮಿಣಿ ಮಿಣಿ' ಪದ ಭಾರಿ ಚರ್ಚೆಗೆ ಕಾರಣವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತ ಟ್ರೋಲ್ ಗಳು  ಹರಿದಾಡುತ್ತಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!