ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಸಿ.ಪಿ.ಯೋಗೇಶ್ವ‌ರ್‌ ಬಿಜೆಪಿ ಅಭ್ಯರ್ಥಿಯಾದ್ರೂ ಜೆಡಿಎಸ್ ಬೆಂಬಲ!

Published : Jul 05, 2024, 01:24 PM ISTUpdated : Jul 05, 2024, 01:37 PM IST
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಸಿ.ಪಿ.ಯೋಗೇಶ್ವ‌ರ್‌ ಬಿಜೆಪಿ ಅಭ್ಯರ್ಥಿಯಾದ್ರೂ ಜೆಡಿಎಸ್ ಬೆಂಬಲ!

ಸಾರಾಂಶ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮಾಜಿ ಶಾಸಕ ಸಿ.ಪಿ.ಯೋಗೇಶ್ವ‌ರ್‌ ಸ್ಪರ್ಧಿಸಿದರೂ ಅವರಿಗೆ ಬೆಂಬಲ ನೀಡುವ ಬಗ್ಗೆ ಜೆಡಿಎಸ್ ಪಾಳೆಯದಲ್ಲಿ ಒಲವು ವ್ಯಕ್ತವಾಗಿದೆ. 

ಬೆಂಗಳೂರು (ಜು.05): ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮಾಜಿ ಶಾಸಕ ಸಿ.ಪಿ.ಯೋಗೇಶ್ವ‌ರ್‌ ಸ್ಪರ್ಧಿಸಿದರೂ ಅವರಿಗೆ ಬೆಂಬಲ ನೀಡುವ ಬಗ್ಗೆ ಜೆಡಿಎಸ್ ಪಾಳೆಯದಲ್ಲಿ ಒಲವು ವ್ಯಕ್ತವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರನ್ನು ಕಣಕ್ಕಿಳಿಸುವಲ್ಲಿ ಮತ್ತು ಗೆಲ್ಲಿಸುವಲ್ಲಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಗೆಲುವಿಗೆ ಯೋಗೇಶ್ವರ್ ಶ್ರಮ ಸಾಕಷ್ಟು ಇದೆ. ಈ ಋಣ ತೀರಿಸಲು ಯೋಗೇಶ್ವರ್ ಅವರನ್ನು ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಲ್ಲಿಸಿ ಗೆಲ್ಲಿಸಬೇಕು ಎಂಬ ಅಭಿಪ್ರಾಯ ಜೆಡಿಎಸ್‌ ಮುಖಂಡರಿಂದಲೇ ವ್ಯಕ್ತವಾಗುತ್ತಿದೆ ಎಂದು ತಿಳಿದುಬಂದಿದೆ. 

ಎಚ್.ಡಿ.ಕುಮಾರಸ್ವಾಮಿ ಸಹ ಉಪಚುನಾವಣೆ ಘೋಷಣೆಯಾದ ಬಳಿಕ ಅಭ್ಯರ್ಥಿ ಆಯ್ಕೆ ಎಂದು ಹೇಳಿದರೂ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಕಾರ್ಯಕರ್ತರು, ಸ್ಥಳೀಯ ಸಿ.ಪಿ.ಯೋಗೇಶ್ವರ್ ನಾಯಕರಲ್ಲಿ ಅವರೇ ಅಭ್ಯರ್ಥಿ ಎಂಬ ನಿಲುವು ಬಿತ್ತಿದ್ದಾರೆ. ಅವರನ್ನು ಗೆಲ್ಲಿಸುವಲ್ಲಿ ಅವಿರತವಾಗಿ ಶ್ರಮಿಸಲು ಉಭಯಪಕ್ಷಗಳಕಾರ್ಯಕರ್ತರು ಸಹ ಮುಂದಾಗಿದ್ದಾರೆ. ಆದರೂ ಬಿಜೆಪಿ-ಜೆಡಿಎಸ್‌ನ ಹೈಕಮಾಂಡ್ ತೀರ್ಮಾನವೇ ಅಂತಿಮವಾ ಗಿರುವುದರಿಂದ ಯಾರಿಗೆ ಟಿಕೆಟ್ ಲಭಿಸಲಿದೆ ಎಂಬುದು ತೀವ್ರ ಕೂತುಹಲ ಮೂಡಿಸಿದೆ. ವಿಧಾನಸಭೆ ಚುನಾವಣೆಯಲ್ಲಿ ಭದ್ರಕೋಟೆ ಎನಿಸಿದ ಭಾಗದಲ್ಲಿಯೇ ಜೆಡಿಎಸ್ ಸೋಲನುಭವಿಸಿದೆ. 

ಇದರಿಂದ ಪಕ್ಷದ ಕಾರ್ಯಕರ್ತರ ಹುಮ್ಮಸ್ಸು ಕಡಿಮೆಯಾಗಿದೆ. ಭದ್ರಕೋಟೆ ಯಾಗಿರುವ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಹೊಸ ಹುಮ್ಮಸ್ಸು ಬರಬೇಕಾದರೆ ಯೋಗೇಶ್ವರ್ ಅವರನ್ನು ಜೆಡಿಎಸ್‌ನಿಂದ ಸ್ಪರ್ಧಿಸಿ ಗೆಲ್ಲಿಸಿಕೊಳ್ಳ ಬೇಕು ಎಂಬುದು ಸ್ಥಳೀಯ ಜೆಡಿಎಸ್‌ ನಾಯಕರ ಅಭಿಪ್ರಾಯವಾಗಿದೆ. ಈ ನಿಟ್ಟಿನಲ್ಲಿಯೇ ಯೋಗೇಶ್ವರ್ ಅವರನ್ನು ಜೆಡಿಎಸ್‌ನಿಂದಲೇ ಕಣಕ್ಕಿಳಿಯುವಂತೆ ಮಾಡಲು ಒತ್ತಾಯಗಳು ಕೇಳಿ ಬಂದಿವೆ. ಆದರೆ, ಯೋಗೇಶ್ವರ್‌ಗೆ ಜೆಡಿಎಸ್‌ನಿಂದ ಸ್ಪರ್ಧಿಸಲು ಆಸಕ್ತಿ ಇಲ್ಲ. ಬಿಜೆಪಿಯಿಂದಲೇ ಟಿಕೆಟ್ ಸಿಕ್ಕರೆ ಮಾತ್ರ ಉಪಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಹೊಂದಿದ್ದಾರೆ. 

ಸಿಎಂ ಸಿದ್ದು ತಾಕತ್ತಿದ್ದರೆ ಸರ್ಕಾರ ವಿಸರ್ಜಿಸಿ ಚುನಾವಣೆಗೆ ಬನ್ನಿ: ಬಿ.ಎಸ್.ಯಡಿಯೂರಪ್ಪ

ಒಂದು ವೇಳೆ ಬಿಜೆಪಿಯಿಂದ ಟಿಕೆಟ್ ಸಿಗದಿದರೆ ವಿಧಾನಪರಿಷತ್ ಸದಸ್ಯತ್ವ ಸ್ಥಾನದಲ್ಲಿಯೇ ಮು೦ದುವರೆಯುವ ಇಚ್ಛೆಯನ್ನು ಹೊಂದಿದ್ದಾರೆ ಎಂದು ಹೇಳಲಾಗಿದೆ. ಬಿಜೆಪಿ-ಜೆಡಿಎಸ್‌ ಮೈತ್ರಿಗೂಯೋಗೇಶ್ವರ್ ಕಾರಣಕರ್ತರಾಗಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಮೈತ್ರಿಯಾಗಿ ಕಣಕ್ಕಿಳಿದು ಕಾಂಗ್ರೆಸ್‌ಗೆ ತಿರುಗೇಟು ನೀಡಲು ತಂತ್ರಗಾರಿಕೆ ರೂಪಿಸುವಲ್ಲಿ ಯೋಗೇಶ್ವರ್ ಪಾತ್ರ ಸಹ ಇದೆ. ಉಭಯ ಪಕ್ಷಗಳ ಸ್ಥಳೀಯ ನಾಯಕರಿಗೂ ಯೋಗೇಶ್ವರ್ ಪಾತ್ರದ ಬಗ್ಗೆ ತಿಳಿದಿದೆ. ಹೀಗಾಗಿ ಅವರಿಗೆ ಬೆಂಬಲ ನೀಡಲು ಎರಡೂ ಪಕ್ಷಗಳ ನಾಯಕರು ಒಲವು ಹೊಂದಿದ್ದಾರೆ. ಆದರೆ, ಮುಂದಿನ ದಿನದಲ್ಲಿ ಎರಡು ಪಕ್ಷಗಳ ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: ನಮ್ಮನ್ನೇಕೆ ವೈರಿಗಳಂತೆ ನೋಡುತ್ತೀರಿ? ನಾವು ಸಹೋದ್ಯೋಗಿಗಳು: ಡಿಸಿಎಂ ಡಿಕೆ ಶಿವಕುಮಾರ್