
ನವದೆಹಲಿ(ಏ.07): ಲೋಕಸಭಾ ಚುನಾವಣೆ ಹಿನ್ನೆಲೆ ಸಿಪಿಐ ಪಕ್ಷ ಶನಿವಾರ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪಕ್ಷ ಅಧಿಕಾರಕ್ಕೆ ರಾಜ್ಯಪಾಲ ಹುದ್ದೆಯನ್ನೇ ರದ್ದು, ಸಿಎಎ ಕಾಯ್ದೆ ರದ್ದು, ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯಕ್ಕೆ ಇರುವ ಇರುವ ಶೇ.50ರ ಮೀಸಲು ಮಿತಿ ರದ್ದು ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.
ಕಾಂಗ್ರೆಸ್ ಪ್ರಣಾಳಿಕೆ ಮುಸ್ಲಿಂ ಲೀಗ್ ಪ್ರಣಾಳಿಕೆ ರೀತಿ ಇದೆ: ಪ್ರಧಾನಿ ಮೋದಿ
ಪ್ರಣಾಳಿಕೆ ಮುಖ್ಯಾಂಶ
• ಸಿಎಎ ಕಾಯ್ದೆ ರದ್ದು/ ರಾಜ್ಯಪಾಲರ ಕಚೇರಿ ರದ್ದು. ರಾಜ್ಯಗಳಿಗೆ ಹೆಚ್ಚಿನ ಅಧಿಕಾರದ ಭರವಸೆ. ಎಸ್ಸಿ, ಎಸ್ಟಿ, ಒಬಿಸಿಗಳಿಗೆ ಇರುವ ಶೇ.50 ಮೀಸಲಾತಿ ರದ್ದತಿ.
• ನರೇಗಾ ದಿನಗೂಲಿ 700ಕ್ಕೆ ಹೆಚ್ಚಳ.
. ಅಸಮಾನತೆ ತೊಡೆದು ಹಾಕಲು ಕ್ರಮ.
• ಶ್ರೀಮಂತರಿಗೆ ಹೆಚ್ಚು ತೆರಿಗೆ/ ಖಾಸಗಿ ವಲಯದಲ್ಲೂ ಮೀಸಲು
• ಸಿಬಿಐ ಮತ್ತು ಇ.ಡಿ ಸಂಸತ್ತಿನ ಕಣ್ಣಾವಲು ವ್ಯಾಪ್ತಿಗೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.