ಹೊಂದಾಣಿಕೆ ಲೆಕ್ಕ ಪಕ್ಕಾ.. ಸಮನ್ವಯ ಸಮಿತಿ ಸಭೆಯಲ್ಲಿ ಫೈನಲ್ ಟಚ್?

Published : Jan 23, 2019, 08:04 PM ISTUpdated : Jan 23, 2019, 08:20 PM IST
ಹೊಂದಾಣಿಕೆ ಲೆಕ್ಕ ಪಕ್ಕಾ.. ಸಮನ್ವಯ ಸಮಿತಿ ಸಭೆಯಲ್ಲಿ ಫೈನಲ್ ಟಚ್?

ಸಾರಾಂಶ

ಆಪರೇಶನ್ ಕಮಲದ ಸುದ್ದಿಗಳೆಲ್ಲ ಒಂದು ಹಂತಕ್ಕೆ ತಲುಪಿದ ನಂತರ  ದೋಸ್ತಿ ಸರ್ಕಾರದ ಸಮನ್ವಯ ಸಮಿತಿ ಸಭೆ ಜನವರಿ 24 ರಂದು ನಡೆಯಲಿದೆ.

ಬೆಂಗಳೂರು[ಜ. 23]  ಆಪರೇಷನ್ ಕಮಲದ ಭೀತಿ ಹಾಗೂ ಕಾಂಗ್ರೆಸ್ ಶಾಸಕರ ಮಾರಾಮಾರಿ ಗೊಂದಲದ ನಡುವೆ  ದೋಸ್ತಿ ಸರ್ಕಾರ ಸಮನ್ವಯ ಸಮಿತಿ ಸಭೆ ನಡೆಯಲಿದೆ.

ಜೆಡಿಎಸ್ ಮತ್ತು ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ಹೊಂದಾಣಿಕೆ ಮಾಡಿಕೊಂಡೆ ಬಿಜೆಪಿ ಎದುರಿಸಲು ಸಿದ್ಧವಾಗಿವೆ ಎನ್ನಲಾಗಿದ್ದು ಈ ಸಭೆಯಲ್ಲಿ ಸೀಟು ಹಂಚಿಕೆ ಅಂತಿಮ ರೂಪ ಪಡೆದುಕೊಳ್ಳಲಿದೆ. ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಮೊದಲು 12 ಸ್ಥಾನ ಬಿಟ್ಟುಕೊಡಲು ಕೇಳಿದ್ದರು, ನಂತರ 8 ಸ್ಥಾನ ಎಂದಿದ್ದರು. ಸಭೆಯಲ್ಲಿ ಶೇಕಡಾವಾರು ಲೆಕ್ಕ ಅಂತಿಮವಾಗಲಿದೆ.

ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ನಾಳೆ ಸಂಜೆ ಸಭೆ ಕರೆದಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಭಾಗವಹಿಸಲಿದ್ದಾರೆ. ಹಾಗಾದರೆ ಸಮನ್ವಯ ಸಮಿತಿಯಲ್ಲಿ ಏನು ಚರ್ಚೆ ಆಗಬಹುದು?

* ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಲೋಕಸಭಾ ಚುನಾವಣೆ ಸೀಟು ಹಂಚಿಕೆ

* ಲೋಕಸಭಾ ಚುನಾವಣೆ ಹಿನ್ನೆಲೆ ಇಟ್ಟುಕೊಂಡು ಜನಪ್ರಿಯ ಬಜೆಟ್ ಮಂಡನೆ

* ಶಾಸಕರ ನಡುವಿನ ಗಲಾಟೆ ಮತ್ತು ಆನಂದ್ ಸಿಂಗ್ ಹಾಗೂ ಗಣೇಶ್ ಮನವೊಲಿಕೆ

* ಅಸಮಾಧಾನಿತ ಶಾಸಕರ ಕ್ಷೇತ್ರಕ್ಕೆ ಅನುದಾನ ಹಂಚಿಕೆ


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದ್ವೇಷ ಭಾಷಣ ಶಾಸನ ಕಾಂಗ್ರೆಸ್ ಕ್ರೂರ ಸಂಪ್ರದಾಯದ ಪ್ರತಿಬಿಂಬ: ಪ್ರಲ್ಹಾದ್ ಜೋಶಿ ಕಿಡಿ
ಪ್ರೀತಿಯಿಂದ ಊಟಕ್ಕೆ ಕರೀತಾರೆ ಬೇಡ ಅನ್ನೋಕಾಗುತ್ತಾ: ಡಿ.ಕೆ.ಶಿವಕುಮಾರ್