ಡಿಕೆಶಿ ಸಲಹೆಯಂತೆ ಯತೀಂದ್ರ ವಿಡಿಯೋಗೆ ಸಿಎಸ್‌ಆರ್‌ ಸ್ವರೂಪ: ಎಚ್‌ಡಿಕೆ

Published : Nov 18, 2023, 08:43 AM IST
ಡಿಕೆಶಿ ಸಲಹೆಯಂತೆ ಯತೀಂದ್ರ ವಿಡಿಯೋಗೆ ಸಿಎಸ್‌ಆರ್‌ ಸ್ವರೂಪ: ಎಚ್‌ಡಿಕೆ

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಕಲಿ ಮುಖ್ಯಮಂತ್ರಿ (ಉಪಮುಖ್ಯಮಂತ್ರಿ) ಡಿ.ಕೆ.ಶಿವಕುಮಾರ್ ಕೊಟ್ಟ ಸಲಹೆಯ ಮೇರೆಗೆ ತಮ್ಮ ಪುತ್ರನ ಕಾಸಿಗಾಗಿ ಹುದ್ದೆ ವಿಡಿಯೋ ವಿವಾದಕ್ಕೆ ಸಿಎಸ್‌ಆರ್‌ (ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ) ಅನುದಾನದ ಸ್ವರೂಪ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. 

ಬೆಂಗಳೂರು (ನ.18): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಕಲಿ ಮುಖ್ಯಮಂತ್ರಿ (ಉಪಮುಖ್ಯಮಂತ್ರಿ) ಡಿ.ಕೆ.ಶಿವಕುಮಾರ್ ಕೊಟ್ಟ ಸಲಹೆಯ ಮೇರೆಗೆ ತಮ್ಮ ಪುತ್ರನ ಕಾಸಿಗಾಗಿ ಹುದ್ದೆ ವಿಡಿಯೋ ವಿವಾದಕ್ಕೆ ಸಿಎಸ್‌ಆರ್‌ (ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ) ಅನುದಾನದ ಸ್ವರೂಪ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜಕೀಯ ದ್ವೇಷ, ಅಸೂಯೆಯಿಂದ ಆರೋಪ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. 

ಆದರೆ, ಅವರು ಈ ವಿಡಿಯೋಗೆ ಸಂಬಂಧಿಸಿ ಸತ್ಯಗಳನ್ನು, ಸಾಕ್ಷ್ಯಗಳನ್ನು ತಿರುವಿದ ರೀತಿ ನೋಡಿದರೆ ನನಗೆ ಅಚ್ಚರಿ ಉಂಟಾಗಿದೆ. ಸಿಎಸ್‌ಆರ್‌ ಅನುದಾನ ಬಗ್ಗೆ ಮುಖ್ಯಮಂತ್ರಿಗಳು ಸೃಷ್ಟಿ ಮಾಡಿದ ಕಟ್ಟುಕಥೆ ಎಂದು ಟೀಕಾ ಪ್ರಹಾರ ನಡೆಸಿದರು. ಮುಖ್ಯಮಂತ್ರಿಗಳ ಪುತ್ರನ ವಿಡಿಯೋ ಬೆಳಗ್ಗೆ 7 ಗಂಟೆಗೆ ರಿಲೀಸ್ ಆಯಿತು. ಸಿದ್ದರಾಮಯ್ಯ ಅವರು ಮಧ್ಯಾಹ್ನ 3 ಗಂಟೆಗೆ ಸಿಎಸ್‌ಆರ್‌ ಅನುದಾನ ಪಟ್ಟಿ ರಿಲೀಸ್ ಮಾಡಿದರು. ವಿಡಿಯೋ ರಿಲೀಸ್ ಆದ ಕೂಡಲೇ ಕರೆದು ಸಿಎಸ್‌ಆರ್‌ ಅನುದಾನ ಎಂದು ಹೇಳಬೇಕಿತ್ತು. ಆದರೆ, 3 ಗಂಟೆವರೆಗೂ ಯಾಕೆ ಹೇಳಲಿಲ್ಲ. 

ವಿದ್ಯುತ್ ಕಳವು: 68526 ರು. ದಂಡ ಕಟ್ಟಿ ಕರೆಂಟ್‌ ಕಳ್ಳ ಎನ್ನುವುದನ್ನು ನಿಲ್ಲಿಸಿ ಎಂದ ಎಚ್‌ಡಿಕೆ

ಇದನ್ನು ಯಾರಾದರೂ ನಂಬುತ್ತಾರಾ? ಒಂದು ಶಾಲೆಗೆ 2.5 ಲಕ್ಷ ರು. ಸಿಎಸ್‌ಆರ್‌ ಅನುದಾನ ತೆಗೆದುಕೊಳ್ಳುತ್ತಾರೆಯೇ? ವಿಧಾನಮಂಡಲ ಅಧಿವೇಶನದಲ್ಲಿ ಇದನ್ನು ಪ್ರಸ್ತಾಪ ಮಾಡುತ್ತೇನೆ ಎಂದು ಹೇಳಿದರು. ವಿವೇಕಾನಂದ ಎನ್ನುವವರು ಯಾರು ಎಂಬುದನ್ನು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಯಾಕೆ ಕೇಳಿದರು? ಕ್ಷೇತ್ರದ ಕೆಡಿಪಿ ಸಮಿತಿ ಅಧ್ಯಕ್ಷರಾದ ಅವರಿಗೆ ತಮ್ಮ ಕ್ಷೇತ್ರದ ಶಿಕ್ಷಣಾಧಿಕಾರಿ ಯಾರೂ ಎಂದು ಗೊತ್ತಿಲ್ಲವೆ? ಸಿದ್ದರಾಮಯ್ಯನ ಹುಂಡಿ ಗ್ರಾಮದ ಸರ್ಕಾರಿ ಶಾಲೆಗೂ ಯಾಕೆ ಹಣ ಕೊಟ್ಟಿಲ್ಲ?

ಕಾಂಗ್ರೆಸ್‌ ಸೇಡಿನ ರಾಜಕೀಯಕ್ಕೆ ಜಗ್ಗೋಲ್ಲ, ಯಾವ ತನಿಖೆಗೂ ಸಿದ್ಧ: ಎಚ್‌ಡಿಕೆ ಸವಾಲ್‌

ಆ ಶಾಲೆ ಹೇಗಿದೆ ಎನ್ನುವುದು ಇವರಿಗೆ ಗೊತ್ತಿಲ್ಲವೇ? ವರಣಾ ನೋಡಿಕೊಳ್ಳಲು ಬೇರೆ ಅಧಿಕಾರಿ ಇದ್ದಾರೆ. ಮಹದೇವ್ ಬಳಿ ಯಾಕೆ ಹೋಯಿತು ಎಂದು ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದರು. ಸತ್ಯ ಹೇಳಿದ್ದಕ್ಕೆ ನನ್ನ ವಿರುದ್ಧ ಟೀಕೆಗಳ ಸುರಿಮಳೆಯಾಗುತ್ತಿದೆ. ಕಾಂಗ್ರೆಸ್ ಪಕ್ಷದ ಪುಢಾರಿಗಳು ಏನೇ ಸರ್ಟಿಫಿಕೇಟ್ ಕೊಟ್ಟರೂ ಸಮಚಿತ್ತವಾಗಿ ಸ್ವೀಕಾರ ಮಾಡುತ್ತೇನೆ. ವಿಡಿಯೋ ಹೊರ ಬಂದ ದಿನದಂದು ನಕಲಿ ಮುಖ್ಯಮಂತ್ರಿಗಳು ಮುಖ್ಯಮಂತ್ರಿಗಳ ಹೋಗಿ ಸಿಎಸ್‌ಆರ್‌ ಅನುದಾನ ಎಂಬುದಾಗಿ ಹೇಳುವಂತೆ ಹೇಳಿಕೊಟ್ಟಿದ್ದಾರೆ ಎಂದು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Political Row: ಗೋವು, ಟೋಪಿ, ಲಸಿಕೆ, ಪಾಕಿಸ್ತಾನ ಪದಗಳನ್ನ ತೆಗೆದರೆ ಬಿಜೆಪಿ ಸಾಯುತ್ತದೆ.. ಎಂದ ಆ ನಾಯಕ ಯಾರು?
ಶಾಸಕ ಚಂದ್ರು ಲಮಾಣಿ 5 ಲಕ್ಷ ರೂ. ಪ್ರಕರಣದಲ್ಲಿ ಮುಜುಗರದಿಂದ ಪಾರಾಗಲು ಬಿಜೆಪಿ ಪ್ಲಾನ್