ಸಿ.ಟಿ.ರವಿ ನೀರಿನಿಂದ ಹೊರತೆಗೆದ ಮೀನು : ಎಚ್‌ಡಿ ತಮ್ಮಯ್ಯ

Published : May 31, 2023, 03:24 PM IST
ಸಿ.ಟಿ.ರವಿ  ನೀರಿನಿಂದ ಹೊರತೆಗೆದ ಮೀನು : ಎಚ್‌ಡಿ ತಮ್ಮಯ್ಯ

ಸಾರಾಂಶ

: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಸಿ.ಟಿ. ರವಿ ಅವರು ನೀರಿನಿಂದ ಹೊರ ತೆಗೆದ ಮೀನಿನಂತೆ ಆಗಿದ್ದಾರೆ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಅವರು ಗಂಭೀರವಾಗಿ ಆರೋಪ ಮಾಡಿದ್ದಾರೆ.

ಚಿಕ್ಕಮಗಳೂರು, (ಮೇ 30) : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಸಿ.ಟಿ. ರವಿ ಅವರು ನೀರಿನಿಂದ ಹೊರ ತೆಗೆದ ಮೀನಿನಂತೆ ಆಗಿದ್ದಾರೆ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಅವರು ಗಂಭೀರವಾಗಿ ಆರೋಪ ಮಾಡಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಕಳೆದುಕೊಂಡಿದ್ದರಿಂದ ಅವರು ವಿಲವಿಲ ಒದ್ದಾಡುತ್ತಿದ್ದಾರೆ. 10 ವರ್ಷಗಳಿಂದ ಅಂಡಾ-ಬಂಡಾ ಅಧಿಕಾರದಲ್ಲಿ ಇದ್ದರು. ಆಕಾಶದ ಮೇಲೆ ಹಾರಾಡುತ್ತಿದ್ದರು. ಭೂಮಿ ಮೇಲೆ ನಡೆಯುತ್ತಿರಲಿಲ್ಲ. ಬಡವರ, ದೀನ ದಲಿತರ, ಅಲ್ಪಸಂಖ್ಯಾತರ ಬಗ್ಗೆ ನೆನಪು ಇರಲಿಲ್ಲ ಎಂದರು.

ನನಗೆ ಪತ್ರ ಬರೆದಿದ್ದಾರೆ, ಅವರ ಪತ್ರದ ಬಗ್ಗೆ ಖುಷಿ ಇದೆ. 19 ವರ್ಷಗಳ ಬಳಿಕ ಜನರ ಬಗ್ಗೆ ಕಾಳಜಿ ಬಂದಿರೋದು ಸಂತೋಷ ಎಂದ ಅವರು, ಅವರಿಗೆ ಸಾಮಾನ್ಯ ಜ್ಞಾನ ಇಲ್ಲ, ಜಿಲ್ಲಾ ಡಳಿತವನ್ನು ದುರ್ಬಳಕೆ ಮಾಡಿಕೊಂಡು, ಚುನಾವಣೆ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತರಿಗೆ ಕರೆದು ಹೆದರಿಸಿದ್ದಾರೆ. ನಾವು ಆ ರೀತಿ ಹೆದರಿಕೆ ಹಾಕಿದೀನಾ, ಅವರಿಗೆ ಓಟ್‌ ಹಾಕಿದವರಿಗೆ ದೂರವಾಣಿಯಲ್ಲಿ ಮಾತನಾಡಿದಿನಾ ಎಂದು ಪ್ರಶ್ನಿಸಿದರು.

ಅಭಿವೃದ್ಧಿ ಕೆಲಸ ಚೆನ್ನಾಗಿದ್ರೆ ಯಾರೇ ಕಂಟ್ರಾಕ್ಟರ್‌ ಆಗಿದ್ರು ನನ್ನ ತಕರಾರಿಲ್ಲ. ಕಾಮಗಾರಿ ಚೆನ್ನಾಗಿಲ್ಲ ಅಂದ್ರೆ ಸಂಬಂಧಿಕರೇ ಆದರೂ ಒಪ್ಪಲ್ಲ. ಎಷ್ಟೇ ದೊಡ್ಡ ವ್ಯಕ್ತಿಯಾದ್ರು ಬಿಡಲ್ಲ, ಅದಕ್ಕೆ ಅಧಿಕಾರಿಗಳು ಉತ್ತರ ನೀಡುತ್ತಾರೆ ಎಂದರು.

ಸಿದ್ದರಾಮಯ್ಯ ಸಿಎಂ ಆಗ್ತಿದ್ದಂತೆ ಅರ್ಬನ್ ನಕ್ಸಲ್ ಚಟುವಟಿಕೆ ಆರಂಭ: ಸಿಟಿ ರವಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ