ಸಿಟಿ ರವಿ ಸಹ ದೆಹಲಿಯಲ್ಲಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

Published : Aug 18, 2020, 03:51 PM IST
ಸಿಟಿ ರವಿ ಸಹ ದೆಹಲಿಯಲ್ಲಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಭೇಟಿ

ಸಾರಾಂಶ

ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರು ಇಂದು (ಮಂಗಳವಾರ) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ್ದಾರೆ.

ನವದೆಹಲಿ, (ಆ.18): ಅದ್ಯಾಕೋ ಏನೋ ಒಂದಲ್ಲ ಒಮದು ನೆಪ ಮಾಡಿಕೊಂಡು ರಾಜ್ಯ ಸಚಿವರುಗಳು ದೆಹಲಿಗೆ ತೆರಳುತ್ತಿದ್ದಾರೆ. ಸಚಿವ ರಮೇಶ್ ಜಾರಕಿಹೊಳಿ ಅವರು ದೆಹಲಿಗೆ ತೆರಳಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನ ಭೇಟಿ ಮಾಡಿದ್ದರು.

ಇದೀಗ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಸಿಟಿ ರವಿ ಸಹ ದೆಹಲಿಗೆ ಹಾರಿದ್ದು, ಕೇಂದ್ರ ನಾಯಕರನ್ನ ಭೇಟಿ ಮಾಡಿದ್ದಾರೆ.

ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ: ಸಚಿವ ಸ್ಥಾನ ಉಳಿಸಿಕೊಳ್ಳಲು ದೆಹಲಿ ದಂಡಯಾತ್ರೆ..!

ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಜಿಲ್ಲೆಯ ಕಾಫಿ ಬೆಳೆಗಾರರು ಮತ್ತು ರೈತರು ಎದುರಿಸುತ್ತಿರುವ ಸಂಕಷ್ಟಗಳನ್ನು ವಿವರಿಸಿದ ಸಚಿವ ರವಿ ಅವರು, ಕೂಡಲೇ ವಿಶೇಷ ಪ್ಯಾಕೇಜ್ ಘೋಷಿಸಿ ಹಿತ ಕಾಪಾಡುವಂತೆ ಮನವಿ ಮಾಡಿದರು.

ಸತತ ಬರಗಾಲ, ಭಾರೀ ಪ್ರವಾಹ ಹಾಗೂ ರೋಗಗಳಿಂದ ತತ್ತರಿಸಿ ಹೋಗಿರುವ ಚಿಕ್ಕಮಗಳೂರು ಜಿಲ್ಲೆಯ ಕಾಫಿ, ಅಡಿಕೆ, ಮೆಣಸು ಮತ್ತು ಏಲಕ್ಕಿ ಬೆಳೆಗಾರರು ಮತ್ತು ರೈತರು ತೀವ್ರ ಸಂಕಷ್ಟದಲ್ಲಿದ್ದು, ಕೇಂದ್ರ ಸರ್ಕಾರ ತಕ್ಷಣವೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಸಚಿವ ಸಿ.ಟಿ.ರವಿ ಅವರು ಒತ್ತಾಯಿಸಿದ್ದಾರೆ.

ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಾದ ಕಾಫಿ, ಅಡಿಕೆ, ಮೆಣಸು ಮತ್ತು ಏಲಕ್ಕಿ ಬೆಳೆಗಾರರು ಸತತ ಎರಡು ವರ್ಷದಿಂದ ಪ್ರವಾಹ ಉಂಟಾಗಿ ಬೆಳೆಗಳು ಸಂಪೂರ್ಣವಾಗಿ ಕೊಚ್ಚಿ ಹೋಗಿವೆ. ಇದರಿಂದ ಸಾವಿರಾರು ಕುಟುಂಬಗಳ ಬದುಕು ಮೂರಾಬಟ್ಟೆಯಾಗಿದೆ ಎಂದು ಮನವರಿಕೆ ಮಾಡಿಕೊಟ್ಟರು.

ಇದರ ಜತೆಗೆ ಈ ಬಾರಿ ರಾಜ್ಯದಲ್ಲಿ ಕೋವಿಡ್-19 ಸೋಂಕು ಬಂದ ಪರಿಣಾಮ ರೈತರ ಪರಿಸ್ಥಿತಿ ಹೇಳತೀರದಾಗಿದೆ. ಒಂದಾದ ಮೇಲೊಂದರಂತೆ ಸಂಕಷ್ಟಗಳು ಎದುರಾಗುತ್ತಲೇ ಇರುವುದರಿಂದ ಸರ್ಕಾರ ನೆರವಿಗೆ ಧಾವಿಸಬೇಕೆಂದು ಮನವಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!