ಈಶ್ವರಪ್ಪ, ವಿಶ್ವನಾಥ್‌ ಮುಂದಿಟ್ಟು CT ರವಿ ಹೊಸ ದಾಳ

Kannadaprabha News   | Asianet News
Published : Mar 03, 2021, 10:03 AM IST
ಈಶ್ವರಪ್ಪ, ವಿಶ್ವನಾಥ್‌ ಮುಂದಿಟ್ಟು CT ರವಿ ಹೊಸ ದಾಳ

ಸಾರಾಂಶ

ಎಚ್ ವಿಶ್ವನಾಥ್ ಹಾಗೂ ಸಚಿವ ಈಶ್ವರಪ್ಪ ಅವರನ್ನು ಮುಂದಿಟ್ಟುಕೊಂಡು ಸಿ ಟಿ ರವಿ ಇದೀಗ ಹೊಸ ದಾಳ ಬೀಸಿದ್ದಾರೆ. ಏನದು ರಾಜಕೀಯ ದಾಳ

ಬೆಂಗಳೂರು (ಮಾ.03):  ನೆರೆ ರಾಜ್ಯ ತಮಿಳುನಾಡು ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಯಾಗುತ್ತಿದ್ದಂತೆ ಆ ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸಲು ಕರ್ನಾಟಕದ ಬಿಜೆಪಿ ನಾಯಕರು ಕಾರ್ಯತಂತ್ರ ರೂಪಿಸುವಲ್ಲಿ ತೊಡಗಿದ್ದು, ಕುರುಬರ ಮತಗಳನ್ನು ಸೆಳೆಯಲು ಆ ಸಮುದಾಯದ ನಾಯಕರನ್ನು ನಿಯೋಜಿಸಲು ಮುಂದಾಗಿದ್ದಾರೆ.

ತಮಿಳುನಾಡಿನಲ್ಲಿ ನೆಲೆಯೂರಲು ಜಾತಿಯಾಧಾರಿತ ಮತಬೇಟೆಗೆ ಈ ಕಸರತ್ತು ನಡೆದಿದ್ದು, ಈ ಬಗ್ಗೆ ತಮಿಳುನಾಡು ಉಸ್ತುವಾರಿಯಾಗಿರುವ ಸಿ.ಟಿ.ರವಿ ಅವರು ಮಲ್ಲೇಶ್ವರದಲ್ಲಿನ ಪಕ್ಷದ ಕಚೇರಿಯಲ್ಲಿ ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಅವರೊಂದಿಗೆ ಮಾತುಕತೆ ನಡೆಸಿದರು. ಚೆನ್ನೈ ನಗರ, ಕೃಷ್ಣಗಿರಿ, ಮದುರೈ ಸೇರಿದಂತೆ ಇತರೆ ಪ್ರದೇಶದಲ್ಲಿ ಕುರುಬ ಸಮುದಾಯದವರು ಹೆಚ್ಚಿನ ಪ್ರಮಾಣದಲ್ಲಿದ್ದಾರೆ. ಆ ಮತದಾರರನ್ನು ಪಕ್ಷದತ್ತ ಸೆಳೆಯುವ ನಿಟ್ಟಿನಲ್ಲಿ ರಾಜ್ಯದ ನಾಯಕರು ಕಾರ್ಯೋನ್ಮುಖರಾಗಿದ್ದಾರೆ.

ಮೀಸಲಾತಿ ಕೇಳೋದು ಜೇನುಗೂಡಿಗೆ ಕೈ ಹಾಕಿದಂತೆ: ಸಿ.ಟಿ.ರವಿ

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ, ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ನೇತೃತ್ವದಲ್ಲಿ ಮತದಾರರನ್ನು ಸೆಳೆಯಲು ಸಿ.ಟಿ.ರವಿ ಮುಂದಾಗಿದ್ದು, ತಮಿಳುನಾಡಿನ 66 ವಿಧಾನಸಭಾ ಕ್ಷೇತ್ರದಲ್ಲಿರುವ ಕುರುಬರನ್ನು ಬಿಜೆಪಿಯತ್ತ ಕರೆತರುವ ಪ್ರಯತ್ನವನ್ನು ಆರಂಭಿಸಿದ್ದಾರೆ. ಕುರುಂಬರ್‌, ಕುರುಮಾ ಹೆಸರಲ್ಲಿ ತಮಿಳುನಾಡಿನಲ್ಲಿ ಕುರುಬರನ್ನು ಕರೆಯಲಾಗುತ್ತದೆ. ಮಾ.15ರಂದು ಅಲ್ಲಿ ಕುರುಬರ ಸಂಘಟನಾ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಈಶ್ವರಪ್ಪ, ವಿಶ್ವನಾಥ್‌ ಸೇರಿದಂತೆ ಇತರೆ ಕುರುಬ ನಾಯಕರು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್