ವಿಜಯೇಂದ್ರಗೆ ಅಧ್ಯಕ್ಷ ಸ್ಥಾನ ಬಗ್ಗೆ ನಾಯಕರ ತಿರ್ಮಾನ ಅಂತಿಮ: ಸಿ.ಟಿ.ರವಿ

Published : Sep 11, 2023, 01:00 AM IST
ವಿಜಯೇಂದ್ರಗೆ ಅಧ್ಯಕ್ಷ ಸ್ಥಾನ ಬಗ್ಗೆ ನಾಯಕರ ತಿರ್ಮಾನ ಅಂತಿಮ: ಸಿ.ಟಿ.ರವಿ

ಸಾರಾಂಶ

ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ವರಿಷ್ಠರಾದ ಬಿ.ಎಸ್‌.ಯಡಿಯೂರಪ್ಪ, ಎಚ್‌.ಡಿ.ಕುಮಾರಸ್ವಾಮಿ ಆಡಿದ ಮಾತುಗಳನ್ನೂ ಕೇಳಿದ್ದೇನೆ. ಆದರೆ, ಈ ಕುರಿತು ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ ಎಂದ ಮಾಜಿ ಸಚಿವ ಸಿ.ಟಿ.ರವಿ 

ಶಿವಮೊಗ್ಗ(ಸೆ.11): ಬಿ.ವೈ.ವಿಜಯೇಂದ್ರ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ಒಂದೆಡೆ ಕಾರ್ಯಕರ್ತರು ಚರ್ಚೆ ಮಾಡುತ್ತಿದ್ದಾರೆ. ಆದರೆ ಅಂತಿಮವಾಗಿ ಪಕ್ಷದ ನಾಯಕರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ಆದ್ದರಿಂದ ಈ ವಿಚಾರವಾಗಿ ಹೆಚ್ಚು ಮಾತನಾಡುವುದಿಲ್ಲ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು. 

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ ಜೊತೆಗಿನ ಮೈತ್ರಿ ಬಗ್ಗೆಯೂ ಇನ್ನೂ ಅಧಿಕೃತ ಮಾಹಿತಿ ಇಲ್ಲ ಎಂದೂ ಹೇಳಿದರು. 

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗ ರಾಜ್ಯದಲ್ಲಿ ಬರಗಾಲ ನಿಶ್ಚಿತ ಎಂಬುದು ಪುನಃ ಸಾಬೀತು: ಬಿ.ವೈ. ವಿಜಯೇಂದ್ರ

ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ವರಿಷ್ಠರಾದ ಬಿ.ಎಸ್‌.ಯಡಿಯೂರಪ್ಪ, ಎಚ್‌.ಡಿ.ಕುಮಾರಸ್ವಾಮಿ ಆಡಿದ ಮಾತುಗಳನ್ನೂ ಕೇಳಿದ್ದೇನೆ. ಆದರೆ, ಈ ಕುರಿತು ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ ಎಂದರು. ಇನ್ನು, ವಿಪಕ್ಷ ನಾಯಕನ ಆಯ್ಕೆ ವಿಚಾರದಲ್ಲಿ ಯಾಕೆ ವಿಳಂಬವಾಗುತ್ತಿದೆ ಎಂಬುದು ಸ್ಪಷ್ಟವಿಲ್ಲ. ಆದರೆ, ಕಾರಣವಿಲ್ಲದೇ ಕೇಂದ್ರದ ನಾಯಕರು ವಿಳಂಬ ಮಾಡುತ್ತಿಲ್ಲ ಎಂದಷ್ಟೆ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ