
ಶನಿವಾರಸಂತೆ(ಮೇ.07): ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೋಲಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೋಮ ಮಾಡಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿಗೆ ಬಹುಮತ ಬಾರದಿರಲಿ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಅವರು ಪೂಜೆ ಮಾಡಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆರೋಪಿಸಿದ್ದಾರೆ.
ಕೊಡಗಿನ ಶನಿವಾರಸಂತೆಯಲ್ಲಿ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಅಪ್ಪಚ್ಚು ರಂಜನ್ ಪರ ಪ್ರಚಾರ ನಡೆಸಿದ ಅವರು, ಬಿಜೆಪಿ ಗೆದ್ದರೆ ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆಯನ್ನು ಜಾರಿ ಮಾಡುತ್ತೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾಲಿಬಾನ್ ಮಾದರಿ ಆಡಳಿತ ನಡೆಸುತ್ತೆ. ಟಿಪ್ಪು ಬೆಂಬಲಿಗರಿಗೆ ಮತ ನೀಡಬೇಡಿ ಎಂದರು.
ಪ್ರಧಾನಿ ಮೋದಿ ಸೋಲಿನ ಭಯದಿಂದ, ಗಲ್ಲಿ ಗಲ್ಲಿ ಸುತ್ತಾಡ್ತಿದಾರೆ! ಎಚ್. ವಿಶ್ವನಾಥ್ ಟೀಕೆ
ಕೊಡಗಿನಲ್ಲಿ ಜಾತಿ ನಡೆಯಲ್ಲ, ಹಿಂದುತ್ವ ಮಾತ್ರ ನಡೆಯುತ್ತದೆ. ಹೀಗಾಗಿಯೇ, 20-25 ವರ್ಷಗಳಿಂದ ಬಿಜೆಪಿ ಗೆಲ್ಲುತ್ತಾ ಬಂದಿದೆ ಎಂದು ಹೇಳಿದರು.
ಭಜರಂಗಿಗೆ ಸೋಲಿಲ್ಲ, ಸೋಲು ಕಾಂಗ್ರೆಸ್ಗೆ ಕಟ್ಟಿಟ್ಟಬುತ್ತಿ. ಸುಮ್ಮನಿದ್ದ ಭಜರಂಗಿ ಬಾಲಕ್ಕೆ ರಾವಣ ಬೆಂಕಿ ಹಚ್ಚಿದ್ದಕ್ಕೆ ಲಂಕೆ ಭಸ್ಮವಾಯ್ತು. ಈಗ ಭಜರಂಗಿಗಳನ್ನು ಕಾಂಗ್ರೆಸ್ ಕೆಣಕಿದೆ. ಹೀಗಾಗಿ, ಕಾಂಗ್ರೆಸ್ ಕೂಡ ಭಸ್ಮವಾಗುತ್ತೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.