ಡಿ.ಕೆ ಶಿವಕುಮಾರ್ ಪುಸ್ತಕ ಬಿಡುಗಡೆ : ನೀರಿನ ಹೆಜ್ಜೆ ಪುಸ್ತಕದಲ್ಲೇನಿದೆ?

Kannadaprabha News   | Kannada Prabha
Published : Nov 15, 2025, 06:24 AM IST
DK Shivakumar

ಸಾರಾಂಶ

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿಕೆ ಶಿವಕುಮಾರ್ ರಚಿಸಿದಿ ನೀರಿನ ಹೆಜ್ಜೆ ಪುಸ್ತಕ ಬಿಡುಗಡೆ ಮಾಡಿದರು. ರಾಜ್ಯ ಜಲ ವಿವಾದಗಳ ಕುರಿತಾದ ಈ ಪುಸ್ತಕ ಜಲ ವಿವಾದ ಒಪ್ಪಂದ ತೀರ್ಪುಗಳ ಬಗ್ಗೆ ಹಲವು ವಿಚಾರಗಳನ್ನು ಒಳಗೊಂಡಿದೆ.

ಬೆಂಗಳೂರು : ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿಕೆ ಶಿವಕುಮಾರ್ ರಚಿಸಿದಿ ನೀರಿನ ಹೆಜ್ಜೆ ಪುಸ್ತಕ ಬಿಡುಗಡೆ ಮಾಡಿದರು. ರಾಜ್ಯ ಜಲ ವಿವಾದಗಳ ಕುರಿತಾದ ಈ ಪುಸ್ತಕ ಜಲ ವಿವಾದ ಒಪ್ಪಂದ ತೀರ್ಪುಗಳ ಬಗ್ಗೆ ಹಲವು ವಿಚಾರಗಳನ್ನು ಒಳಗೊಂಡಿದೆ.

ನೀರಿನ ಹೆಜ್ಜೆ ಪುಸ್ತಕದಲ್ಲೇನಿದೆ?

ನೀರು ನೀಲಿ ಬಂಗಾರ. ಸಾಕಷ್ಟು ಇತಿಹಾಸಗಳ ಅಧ್ಯಯನ ಮಾಡಿ ಈ ಪುಸ್ತಕವನ್ನು ರಚಿಸಲಾಗಿದೆ. ಅಂತಾರಾಷ್ಟ್ರೀಯ ಒಪ್ಪಂದಗಳು, ನಮ್ಮ ರಾಜ್ಯದ ನದಿಗಳ ವಿಚಾರ ಸೇರಿ 10 ರಾಜ್ಯಗಳ ನದಿಗಳ ವಿಚಾರ, ದೇವೇಗೌಡರು ತೆಗೆದುಕೊಂಡು ತೀರ್ಮಾನ, ಒಪ್ಪಂದ ಹಾಗೂ ಅದರ ಯಶಸ್ಸು ಎಲ್ಲವನ್ನೂ ಇದರಲ್ಲಿ ಉಲ್ಲೇಖಿಸಿದ್ದೇನೆ. ಇದರಲ್ಲಿ ನಾನು ರಾಜಕೀಯ ಮಾಡದೇ ಅವರನ್ನು ಅಭಿನಂದಿಸಿದ್ದೇನೆ. ಸದನದಲ್ಲಿ ನಂಜೇಗೌಡರು ನೀರಾವರಿ ಬಗ್ಗೆ ಚರ್ಚೆ ಮಾಡುವಾಗ ನಾನು ಅದನ್ನು ಆಲಿಸಿದ್ದೆ. ಕೆಲ ಟೀಕೆಗಳನ್ನೂ ಮಾಡಿದ್ದೇನೆ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದರು.

13 ಸಾವಿರ ಎಕರೆಯಲ್ಲಿ ಸೋಲಾರ್ ಪಾರ್ಕ್

ನಾನು ಈ ಹಿಂದೆ ಇಂಧನ ಇಲಾಖೆಯಲ್ಲಿ ಪಾವಗಡದಲ್ಲಿ ರೈತರ ಜಮೀನನ್ನೂ ಸ್ವಾಧೀನ ಪಡಿಸಿಕೊಳ್ಳದೆ 13 ಸಾವಿರ ಎಕರೆಯಲ್ಲಿ ಸೋಲಾರ್ ಪಾರ್ಕ್ ಅನ್ನು ಮಾಡಿದ್ದೇವೆ‌. ಪ್ರತಿ ತಾಲೂಕಿನಲ್ಲೂ 20-50 ಮೆ.ವ್ಯಾ. ಸಾಮರ್ಥ್ಯದ ಸೋಲಾರ್ ವಿದ್ಯುತ್ ಉತ್ಪಾದನಾ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶ ನಮಗಿದೆ. ಹಾಗಾಗಿ ಮತ್ತೆ ಇಂಧನ ಇಲಾಖೆಯನ್ನೇ ಕೇಳಿದೆ. ಆದರೆ, ರಾಹುಲ್‌ ಗಾಂಧಿ ಅವರ ಸೂಚನೆ ಮೇರೆಗೆ ನೀರಾವರಿ ಇಲಾಖೆ ಜವಾಬ್ದಾರಿಗೆ ಒಪ್ಪಿಕೊಂಡೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ