2ನೇ ದಿನ ಕಲಾಪ ಬಲಿ ಪಡೆದ ಮತಪಟ್ಟಿ ಪರಿಷ್ಕರಣೆ ಗದ್ದಲ

Kannadaprabha News   | Kannada Prabha
Published : Jul 23, 2025, 04:13 AM IST
Parliament monsoon session 2025

ಸಾರಾಂಶ

ಸೋಮವಾರದಿಂದ ಆರಂಭವಾಗಿರುವ ಸಂಸತ್‌ ಅಧಿವೇಶನ 2ನೇ ದಿನವೂ ವಿಪಕ್ಷಗಳ ಗದ್ದಲಕ್ಕೆ ಬಲಿಯಾಯಿತು. ಬಿಹಾರದಲ್ಲಿ ನಡೆಯುತ್ತಿರುವ ಮತಪಟ್ಟಿ ಪರಿಷ್ಕರಣೆ ಉಭಯ ಸದನಗಳಲ್ಲಿ ಕಲಾಪವನ್ನು ಬಲಿ ಪಡೆದಿದ್ದರಿಂದ ಅದು ಬುಧವಾರಕ್ಕೆ ಮುಂದೂಡಿಕೆಯಾಯಿತು.

ನವದೆಹಲಿ: ಸೋಮವಾರದಿಂದ ಆರಂಭವಾಗಿರುವ ಸಂಸತ್‌ ಅಧಿವೇಶನ 2ನೇ ದಿನವೂ ವಿಪಕ್ಷಗಳ ಗದ್ದಲಕ್ಕೆ ಬಲಿಯಾಯಿತು. ಬಿಹಾರದಲ್ಲಿ ನಡೆಯುತ್ತಿರುವ ಮತಪಟ್ಟಿ ಪರಿಷ್ಕರಣೆ ಉಭಯ ಸದನಗಳಲ್ಲಿ ಕಲಾಪವನ್ನು ಬಲಿ ಪಡೆದಿದ್ದರಿಂದ ಅದು ಬುಧವಾರಕ್ಕೆ ಮುಂದೂಡಿಕೆಯಾಯಿತು.

ಸೋಮವಾರ ಆಪರೇಷನ್ ಸಿಂದೂರಕ್ಕೆ ಬಲಿಯಾಗಿದ್ದ ಗದ್ದಲ, ಮಂಗಳವಾರ ಮತಪಟ್ಟಿ ಪರಿಷ್ಕರಣೆ ವಿಚಾರದಿಂದ ಮುಂದೂಡಿಕೆಯಾಯಿತು. ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡದ ವಿಪಕ್ಷ ನಾಯಕರು, ಘೋಷಣಾ ಪತ್ರಗಳನ್ನು ಹಿಡಿದು, ಮತಪಟ್ಟಿ ಪರಿಷ್ಕರಣೆ ನಿಯಮವನ್ನು ವಾಪಸ್‌ ತೆಗೆದುಕೊಳ್ಳುವಂತೆ ಆಗ್ರಹಿಸಿ ಸದನದ ಬಾವಿಗಿಳಿದು ಪ್ರತಿಭಟಿಸಿದರು. ಬಳಿಕ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಮುಂದೂಡಿದರು.

ಮಧ್ಯಾಹ್ನ ಕಲಾಪ ಮತ್ತೆ ಆರಂಭವಾದಾಗಲೂ ವಿಪಕ್ಷಗಳು ಪಟ್ಟು ಬಿಡಲಿಲ್ಲ. ಈ ವೇಳೆ ಕೇಂದ್ರ ಸಚಿವ ಕಿರಣ್‌ ರಿಜಿಜು ಕಲಾಪ ನಡೆಸಲು ಅವಕಾಶ ಮಾಡಿಕೊಡದ ವಿಪಕ್ಷಗಳ ನಡೆಗೆ ಆಕ್ಷೇಪಿಸಿದರು. ಅಲ್ಲದೇ ಸರ್ಕಾರ ಆಪರೇಷನ್ ಸಿಂದೂರದ ಕುರಿತು ಚರ್ಚೆಗೆ ಸಮಯ ನಿಗದಿ ಮಾಡಲಿದೆ ಎಂದು ಭರವಸೆ ನೀಡಿದರು.

ಮೇಲ್ಮನೆಯಲ್ಲೂ ಗದ್ದಲ:

ಬಿಹಾರದಲ್ಲಿ ಮತದಾರ ಪಟ್ಟಿ ಪರಿಷ್ಕರಣೆಗೆ ವಿರೋಧಿಸಿ ರಾಜ್ಯಸಭೆಯಲ್ಲಿಯೂ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಗದ್ದಲ ಎಬ್ಬಿಸಿದ್ದವು. ಇದರಿಂದ ಯಾವ ಚರ್ಚೆಯೂ ಸಾಧ್ಯವಿಲ್ಲವೆಂಬುದನ್ನು ಮನಗಂಡ ಉಪ ಸ್ಪೀಕರ್‌ ಹರಿವಂಶ, ಕಲಾಪ ಮುಂದೂಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬಂಗಾರಪ್ಪ ಅವರ ಹೆಸರಿಗೆ ತಕ್ಕ ರೀತಿ ಮಧು ಮಾತನಾಡಲಿ: ಆರಗ ಜ್ಞಾನೇಂದ್ರ ತಿರುಗೇಟು
ಸಮಸ್ಯೆಗಳ ನಿವಾರಣೆ, ಸವಾಲುಗಳಿಗೆ ಧಾರ್ಮಿಕ ಗುರುಗಳಿಂದ ಪರಿಹಾರ: ಬಿ.ವೈ.ವಿಜಯೇಂದ್ರ