
ಬೆಂಗಳೂರು, (ಡಿ.05): ಬಿಜೆಪಿ ಜೊತೆ ಇದ್ದರೆ ನಾನು ಇನ್ನೂ ಸಿಎಂ ಆಗಿರುತ್ತಿದ್ದೆ ಎಂಬ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಡಿಸಿಎಂ ಅಶ್ವತ್ಥ ನಾರಾಯಣ, ಕುಮಾರಸ್ವಾಮಿ ಬಿಜೆಪಿಗೆ ಬಂದರೂ ಸಿಎಂ ಮಾಡುತ್ತಿರಲಿಲ್ಲ ಎಂದಿದ್ದಾರೆ.
ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅಶ್ವತ್ಥ ನಾರಾಯಣ, ರೈತ ನಾಯಕ, ಬಿ.ಎಸ್. ಯಡಿಯೂರಪ್ಪನವರು ಇರುವಾಗ ಸಿಎಂ ಸ್ಥಾನವನ್ನು ಬೇರೆ ಪಕ್ಷದವರಿಗೆ ಬಿಟ್ಟುಕೊಡುವ ಪ್ರಶ್ನೆಯೇ ಬರಲ್ಲ. ಹಾಗಾಗಿ ಎಚ್.ಡಿ.ಕೆ. ಬಿಜೆಪಿಗೆ ಬಂದಿದ್ದರೂ ಸಿಎಂ ಆಗುತ್ತಿರಲಿಲ್ಲ ಎಂದು ಟಾಂಗ್ ಕೊಟ್ಟರು.
'ದೇವೇಗೌಡ್ರ ಭಾವನಾತ್ಮಕ, ಸಿದ್ದರಾಮಯ್ಯನವರ ಪ್ರೀ ಪ್ಲ್ಯಾನ್ನಿಂದ ನಾನು ಟ್ರ್ಯಾಪ್ ಆಗಿದ್ದೇನೆ'
ಕಾಂಗ್ರೆಸ್ ವಿರೋಧಿ ಮತಗಳೇ ಜೆಡಿಎಸ್ ಹಲವು ಕ್ಷೇತ್ರಗಳಲ್ಲಿ ಗೆಲ್ಲಲು ನೆರವಾಗಿದ್ದವು. ಅದನ್ನು ಮರೆತು ಕುಮಾರಸ್ವಾಮಿ ಕಾಂಗ್ರೆಸ್ ಜೊತೆ ಕೈ ಜೋಡಿಸಿದರು. ಮೈತ್ರಿ ಸರ್ಕಾರದಿಂದ ಕುಮಾರಸ್ವಾಮಿ ನೋವನುಭವಿಸಿದ್ದಾರೆ. ಕಾಂಗ್ರೆಸ್ ನಿಂದ ಅವರಿಗೆ ತೊಂದರೆಯಾಗಿದೆ, ಕಿರುಕುಳ ಕೊಟ್ಟು, ಯಾವ ರೀತಿ ಕಾಲೆಳೆದು ಬೀಳಿಸಿದರು ಎಂಬುದು ಎಲ್ಲರಿಗೂ ಗೊತ್ತಾಗಿದೆ ಎಂದು ಹೇಳಿದರು.
ಕುಮಾರಸ್ವಾಮಿ ಮೈತ್ರಿ ಸರ್ಕಾರದಲ್ಲಿ ಬೇಸತ್ತಿದ್ದರು. 17 ಶಾಸಕರು ಕೂಡ ಇದೇ ಕಾರಣಕ್ಕೆ ರಾಜೀನಾಮೆ ನೀಡಿ ಬಂದಿದ್ದರು. ಹೀಗಾಗಿ ಕಾಂಗ್ರೆಸ್ ಬಗ್ಗೆ ಈಗ ಕುಮಾರಸ್ವಾಮಿ ಅವರು ಜನರಿಗೆ ತಿಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.