ಕಾಂಗ್ರೆಸ್ ಪಕ್ಷ ವಿಸರ್ಜನೆ ಆದರೆ ಒಳ್ಳೆಯದು: ಡಿಸಿಎಂ ಅಶ್ವಥ್ ನಾರಾಯಣ್

Suvarna News   | Asianet News
Published : Aug 24, 2020, 12:47 PM IST
ಕಾಂಗ್ರೆಸ್ ಪಕ್ಷ ವಿಸರ್ಜನೆ ಆದರೆ ಒಳ್ಳೆಯದು: ಡಿಸಿಎಂ ಅಶ್ವಥ್ ನಾರಾಯಣ್

ಸಾರಾಂಶ

ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜನೆ ಮಾಡಬೇಕೆಂದು ಮಹಾತ್ಮ ಗಾಂಧಿಯವರೇ ಹೇಳಿದ್ದರು, ಆದರೂ ರಾಜಕೀಯ ಕಾರಣಗಳಿಗಾಗಿ ಕಾಂಗ್ರೆಸ್‌ ಪಕ್ಷ ವಿಸರ್ಜನೆಯಾಗಿಲ್ಲ ಎಂದ ಡಿಸಿಎಂಂ ಡಾ. ಅಶ್ವಥ್ ನಾರಾಯಣ್

ಬೆಂಗಳೂರು(ಆ.24):  ಕಾಂಗ್ರೆಸ್ ಪಕ್ಷ ವಿಸರ್ಜನೆ ಆದರೆ ಒಳ್ಳೆಯದು. ಸ್ವಾತಂತ್ರ್ಯ ಹೋರಾಟದ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಹುಟ್ಟಿಕೊಂಡಿತ್ತು. ಸ್ವಾತಂತ್ರ್ಯ ನಂತರ ಈ ಪಕ್ಷವನ್ನು ವಿಸರ್ಜನೆ ಮಾಡಬೇಕೆಂದು ಮಹಾತ್ಮ ಗಾಂಧಿಯವರೇ ಹೇಳಿದ್ದರು. ಆದರೂ ರಾಜಕೀಯ ಕಾರಣಗಳಿಗಾಗಿ ಕಾಂಗ್ರೆಸ್‌ ಪಕ್ಷ ವಿಸರ್ಜನೆಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಹೇಳಿದ್ದಾರೆ. 

ಇಂದು(ಸೋಮವಾರ) ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈಗ ಕಾಂಗ್ರೆಸ್ ಪಕ್ಷ ವಿಸರ್ಜನೆ ಆದರೆ ಒಳ್ಳೆಯದು. ಈಗಲಾದರೂ ಕಾಂಗ್ರೆಸ್ ಪಕ್ಷದಲ್ಲಿ ಪ್ರಶ್ನೆ ಮಾಡುವ ಪರಿಸ್ಥಿತಿ ಉಂಟಾಗಿರುವುದು ಒಳ್ಳೆಯ ಬೆಳವಣಿಗೆ ಎಂದು ತಿಳಿಸಿದ್ದಾರೆ. 

ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿಡಲು ಗಾಂಧಿ ಕುಟುಂಬದಿಂದ ಮಾತ್ರ ಸಾಧ್ಯ: ಡಿಕೆಶಿ

ನವದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದೆ. ಕಾಂಗ್ರೆಸ್‌ ಪಕ್ಷವನ್ನ ಸೋನಿಯಾ ಗಾಂಧಿಯವರೇ ಮನ್ನೆಡೆಸುತ್ತಾರಾ?, ಪಕ್ಷದ ಅಧ್ಯಕ್ಷ ಸ್ಥಾನವನ್ನ ಮತ್ತೆ ರಾಹುಲ್ ಗಾಂಧಿ ಅವರಿಗೆ ಬಿಟ್ಟು ಕೊಡುತ್ತಾರಾ? ಅಥವಾ ಗಾಂಧಿಯೇತರ ಕುಟುಂಬಕ್ಕೆ ಎಐಸಿಸಿ ಅಧ್ಯಕ್ಷ ಸ್ಥಾನ ಸಿಗುತ್ತಾ ಎಂಬುದನ್ನ ಕಾದು ನೋಡಬೇಕಿದೆ. 

ಕಾಂಗ್ರೆಸ್‌ ಪಕ್ಷವನ್ನ ಮುನ್ನೆಡಸಲು ರಾಹುಲ್‌ ಗಾಂಧಿ ಸಮರ್ಥ ನಾಯಕ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದರೆ, ಕೆಪಿಸಿಸಿ ಅಧ್ಯಕ್ಷ ಡಿ. ಕೆ.ಶಿವಕುಮಾರ್‌ ಅವರು ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿಡಲು ಗಾಂಧಿ ಕುಟುಂಬದಿಂದ ಮಾತ್ರ ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ. 

ಇದೆಲ್ಲದರ ಮಧ್ಯೆ ಕಾಂಗ್ರೆಸ್‌ ವಿಸರ್ಜನೆ ಅದರೆ ಒಳ್ಳೆಯದು ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ್ ಅಭಿಪ್ರಾಯಪಟ್ಟಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!