ದಿಂಗಾಲೇಶ್ವರ ಶ್ರೀಗೆ ಕಾಂಗ್ರೆಸ್ ಟಿಕೆಟ್‌ ಬಗ್ಗೆ ಚರ್ಚಿಸಿ ನಿರ್ಧಾರ: ಡಿ.ಕೆ. ಶಿವಕುಮಾರ್‌

Published : Apr 09, 2024, 04:38 AM IST
ದಿಂಗಾಲೇಶ್ವರ ಶ್ರೀಗೆ ಕಾಂಗ್ರೆಸ್ ಟಿಕೆಟ್‌ ಬಗ್ಗೆ ಚರ್ಚಿಸಿ ನಿರ್ಧಾರ: ಡಿ.ಕೆ. ಶಿವಕುಮಾರ್‌

ಸಾರಾಂಶ

ಈ ಬಗ್ಗೆ ಸಧ್ಯದಲ್ಲೇ ಸ್ಥಳೀಯ ನಾಯಕರ ಜತೆ ಚರ್ಚೆ ಮಾಡುತ್ತಿದ್ದೇನೆ. ನಮ್ಮ ಎಐಸಿಸಿ ಅಧ್ಯಕ್ಷರು, ಚುನಾವಣಾ ಸಮಿತಿ, ಮುಖ್ಯಮಂತ್ರಿಗಳು, ರಾಜ್ಯ ಉಸ್ತುವಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರನ್ನು ವಿಶ್ವಾಸಕ್ಕೆ ಪಡೆಯಬೇಕು’ ಎಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ 

ಬೆಂಗಳೂರು(ಏ.09):  ‘ಹುಬ್ಬಳ್ಳಿ-ಧಾರವಾಡ ಕ್ಷೇತ್ರದಲ್ಲಿ ಆನಂದ್‌ ಅಸೂಟಿ ಅವರಿಗೆ ಈಗಾಗಲೇ ಬಿ-ಫಾರಂ ನೀಡಿದ್ದೇವೆ. ಚುನಾವಣೆಗೆ ಸ್ಪರ್ಧಿಸಲು ಮುಂದಾಗಿರುವ ದಿಂಗಾಲೇಶ್ವರ ಸ್ವಾಮೀಜಿ ಅವರೊಂದಿಗೆ ನಾವು ಮಾತನಾಡಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಈ ಬಗ್ಗೆ ತೀರ್ಮಾನ ಮಾಡಬೇಕಿದ್ದು, ಸ್ವಾಮೀಜಿಗಳ ವಿಚಾರ ಮೊದಲೇ ಗೊತ್ತಿದ್ದರೆ ನಿರ್ಧಾರ ಮಾಡಲು ಸುಲಭವಾಗುತ್ತಿತ್ತು’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಧಾರವಾಡದಿಂದ ನಾನು ಪಕ್ಷೇತರವಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ. ಕಾಂಗ್ರೆಸ್‌ನಿಂದ ಸ್ಪರ್ಧಿಸುವ ಅವಕಾಶ ಬಂದರೆ ಮತದಾರರ ಮುಂದೆ ಹೋಗಿ ನಿರ್ಣಯ ಮಾಡುತ್ತೇನೆ ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದರು.

ದಿಂಗಾಲೇಶ್ವರ ಶ್ರೀ ಏನೇ ಮಾತಾಡಿದ್ರು ಅದು ನನಗೆ ಆಶೀರ್ವಾದ: ಪ್ರಲ್ಹಾದ್ ಜೋಶಿ

ಈ ಬಗ್ಗೆ ನೀವು ಸ್ವಾಮೀಜಿ ಅವರನ್ನು ಸಂಪರ್ಕಿಸುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ‘ಈ ಬಗ್ಗೆ ಸಧ್ಯದಲ್ಲೇ ಸ್ಥಳೀಯ ನಾಯಕರ ಜತೆ ಚರ್ಚೆ ಮಾಡುತ್ತಿದ್ದೇನೆ. ನಮ್ಮ ಎಐಸಿಸಿ ಅಧ್ಯಕ್ಷರು, ಚುನಾವಣಾ ಸಮಿತಿ, ಮುಖ್ಯಮಂತ್ರಿಗಳು, ರಾಜ್ಯ ಉಸ್ತುವಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರನ್ನು ವಿಶ್ವಾಸಕ್ಕೆ ಪಡೆಯಬೇಕು’ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಜೆಡಿಎಸ್‌ಗೆ 5 ವರ್ಷ ಅವಕಾಶ ನೀಡಿ, ರಾಜ್ಯಕ್ಕೆ ಹಿಡಿದ ಕಾಂಗ್ರೆಸ್ ಗ್ರಹಣ ಬಿಡಿಸುವೆ : ಹೆಚ್‌ಡಿಕೆ
Davanagere By-election 2026: ದಾವಣಗೆರೇಲಿ ಪಕ್ಷ ವಿರೋಧಿ ನಡೆಗೆ ಕಾಂಗ್ರೆಸ್‌ನಲ್ಲಿ ಇಬ್ಬರು ನಾಯಕರ ತಲೆದಂಡ,