ಕೋಳಿ ಕೇಳಿ ಮಸಾಲೆ ಅರೆಯಲ್ಲ: ಸಿ.ಟಿ.ರವಿಗೆ ಡಿಕೆಶಿ ಟಾಂಗ್‌

Published : Aug 21, 2023, 04:35 AM IST
ಕೋಳಿ ಕೇಳಿ ಮಸಾಲೆ ಅರೆಯಲ್ಲ: ಸಿ.ಟಿ.ರವಿಗೆ ಡಿಕೆಶಿ ಟಾಂಗ್‌

ಸಾರಾಂಶ

ಬಿಜೆಪಿಯವರು ಕಾಂಗ್ರೆಸ್‌, ಜೆಡಿಎಸ್‌ ಶಾಸಕರನ್ನು ಕರೆದುಕೊಂಡು ಮಜಾ ಮಾಡಿರಲಿಲ್ಲವೆ? ಅವರು ರಾಜಕಾರಣ ಮಾಡಲಿ. ನೀವೇನು ಬೆದರಿಕೆ ಹಾಕುತ್ತೀರೋ ಅದನ್ನೇ ಬೇರೆಯವರು ಹಾಕಲಿಲ್ಲವೆ? ನೀವು ಮೈತ್ರಿ ಸರ್ಕಾರ ಬೀಳಿಸಿ ಅಧಿಕಾರದಿಂದ ತೆಗೆಯಲಿಲ್ಲವೆ?’ ಎಂದು ಖಾರವಾಗಿ ಪ್ರಶ್ನಿಸಿದ ಡಿ.ಕೆ.ಶಿವಕುಮಾರ್‌ 

ಬೆಂಗಳೂರು(ಆ.21):  ಕೋಳಿ ಕೇಳಿ ಮಸಾಲೆ ಅರೆಯುತ್ತಾರಾ? ನಾವು ಯಾವ ಕೋಳಿಯನ್ನೂ ಕೇಳುವುದಿಲ್ಲ. ಬಿಜೆಪಿಯವರು ಕಾಂಗ್ರೆಸ್‌-ಜೆಡಿಎಸ್‌ ಶಾಸಕರನ್ನು ಕರೆದೊಯ್ದು ಮೈತ್ರಿ ಸರ್ಕಾರ ಬೀಳಿಸಲಿಲ್ಲವೆ? ಅವರು ಆಪರೇಷನ್‌ ಮಾಡಿದಾಗ ಏನಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬಿಜೆಪಿ ನಾಯಕ ಸಿ.ಟಿ.ರವಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅನೇಕರು ನನ್ನನ್ನು ಭೇಟಿ ಮಾಡುತ್ತಿರುತ್ತಾರೆ. ಯಾರು ಯಾವ ಕಾರಣಕ್ಕೆ ಭೇಟಿ ಆಗುತ್ತಿದ್ದಾರೆ ಎಂದು ಹೇಳಲು ಸಾಧ್ಯವಾ? ಅವರವರ ಬದುಕು, ಅವರವರ ಭವಿಷ್ಯ ಅವರೇ ನೋಡಿಕೊಳ್ಳುತ್ತಾರೆ. ಸಿ.ಟಿ. ರವಿ ಅವರು ನಮಗೆ ಬೆದರಿಕೆ ಹಾಕುತ್ತಿದ್ದಾರೆ. ಕೈ ಕತ್ತರಿಸಲು ನಮಗೂ ಗೊತ್ತಿದೆ ಎಂದಿದ್ದಾರೆ. ಅವರು ಆಪರೇಶನ್‌ ಮಾಡಿದಾಗ ಏನಾಗಿತ್ತು? ಎಂದು ಪ್ರಶ್ನಿಸಿದರು. ಬಿಜೆಪಿಯವರು ಕಾಂಗ್ರೆಸ್‌, ಜೆಡಿಎಸ್‌ ಶಾಸಕರನ್ನು ಕರೆದುಕೊಂಡು ಮಜಾ ಮಾಡಿರಲಿಲ್ಲವೆ? ಅವರು ರಾಜಕಾರಣ ಮಾಡಲಿ. ನೀವೇನು ಬೆದರಿಕೆ ಹಾಕುತ್ತೀರೋ ಅದನ್ನೇ ಬೇರೆಯವರು ಹಾಕಲಿಲ್ಲವೆ? ನೀವು ಮೈತ್ರಿ ಸರ್ಕಾರ ಬೀಳಿಸಿ ಅಧಿಕಾರದಿಂದ ತೆಗೆಯಲಿಲ್ಲವೆ?’ ಎಂದು ಖಾರವಾಗಿ ಪ್ರಶ್ನಿಸಿದರು.

ಇನ್ನೂ ಮೂರೇ ತಿಂಗಳು ಮುಂದಾನಾಗುತ್ತೆ ಕಾದು ನೋಡಿ: ಸಿ.ಟಿ.ರವಿ ಸ್ಫೋಟಕ ಹೇಳಿಕೆ

ನಮಗಿರುವ ಸಂಖ್ಯಾಬಲಕ್ಕೆ ಯಾರ ಅಗತ್ಯವೂ ಇಲ್ಲ. ನಾವು ಯಾರನ್ನೂ ಕರೆಯುತ್ತಲೂ ಇಲ್ಲ. ನಮಗೆ ಯಾವ ಭೀತಿಯ ಯೋಚನೆಯೂ ಇಲ್ಲ. ಇಡೀ ದೇಶ, ರಾಜ್ಯದ ಉದ್ದಗಲದಲ್ಲಿ ಪಕ್ಷ ಉಳಿಸಲು ಜನ ತೀರ್ಮಾನಿಸಿದ್ದಾರೆ. ಹೀಗಾಗಿ ಪಕ್ಷಕ್ಕೆ ಬರುವ ಜನರನ್ನು ಬೇಡ ಎನ್ನಲು ಸಾಧ್ಯವೇ? ತಡೆಯಲು ಸಾಧ್ಯವಾಗುತ್ತದೆಯೇ ಅಥವಾ ಯಾವುದೇ ಕೋಳಿ ಕೇಳಿ ಮಸಾಲೆ ಅರೆಯಬೇಕೆ? ನಾವು ಯಾವ ಕೋಳಿಯನ್ನೂ ಕೇಳಲ್ಲ ಎಂದು ಹರಿಹಾಯ್ದರು.

‘ಎರಡು ವರ್ಷಗಳ ನಂತರ ಮಂತ್ರಿ ಮಂಡಲ ಬದಲಾವಣೆ’ ಬಗ್ಗೆ ಮುನಿಯಪ್ಪ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ‘ಪಕ್ಷ ಏನು ಹೇಳುತ್ತದೆ ಅದಕ್ಕೆ ಎಲ್ಲರೂ ಬದ್ಧರಾಗಬೇಕು. ಈ ವಿಚಾರ ಪಕ್ಷಕ್ಕೆ ಸಂಬಂಧಿಸಿದ್ದು, ಯಾರೂ ಬಹಿರಂಗ ಚರ್ಚೆ ಮಾಡಬಾರದು. ಮುಂದಿನ ವಾರ ರಾಷ್ಟ್ರೀಯ ನಾಯಕರು ಬರುತ್ತಾರೆ. ಆಗ ಎಲ್ಲವೂ ಚರ್ಚೆಗೆ ಬರಲಿದೆ’ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸುವುದು ಕಾಂಗ್ರೆಸ್‌ನವರಿಗೆ ಇಷ್ಟವಿಲ್ಲ: ಎಚ್.ಡಿ.ಕುಮಾರಸ್ವಾಮಿ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!